<p><strong>ಚಿತ್ರದುರ್ಗ</strong>: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಶುಕ್ರವಾರ ಚಳ್ಳಕೆರೆಯಲ್ಲಿರುವ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರರ ಮನೆ ಮೇಲೆ ದಾಳಿ ನಡೆಸಿದ್ದಾರೆ. ವೀರೇಂದ್ರ ಸಹೋದರ ಕೆ.ಸಿ.ನಾಗರಾಜ್ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.</p><p>3 ಕಾರ್ನಲ್ಲಿ ಬಂದ 10 ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿತು. ಶಾಸಕ ಕೆ.ಸಿ.ವೀರೇಂದ್ರ ಅವರ ಮನೆ, ಸಹೋದರರಾದ ಕೆ.ಸಿ.ನಾಗರಾಜ್, ಕೆ.ಸಿ.ತಿಪ್ಪೇಸ್ವಾಮಿ ಅವರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. </p><p>ದಾಳಿ ನಡೆಯುತ್ತಿದ್ದಂತೆ ಅಪಾರ ಸಂಖ್ಯೆಯ ಜನರು ವೀರೇಂದ್ರ ಮನೆಯತ್ತ ಬರುತ್ತಿದ್ದಾರೆ. ಸಿಆರ್ಪಿಎಫ್ ಯೋಧರು ಮನೆ ಸುತ್ತಲೂ ಭದ್ರತೆ ಕೈಗೊಂಡಿದ್ದಾರೆ. ಶಾಸಕರ ಮನೆಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. </p><p>ದಾಳಿಯ ನಂತರ ಶಾಸಕರ ಸಹೋದರ ಕೆ.ಸಿ.ನಾಗರಾಜ್ ವಕೀಲರೊಬ್ಬರನ್ನು ಕರೆದುಕೊಂಡು ಬಂದರು. ಅಧಿಕಾರಿಗಳು ನಾಗರಾಜ್ ಅವರನ್ನು ವಶಕ್ಕೆ ಪಡೆದು ವಕೀಲ ಉಮೇಶ್ ಅವರನ್ನು ವಾಪಸ್ ಕಳುಹಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಸಿ.ನಾಗರಾಜ್ ‘ನಾನು ಬೆಂಗಳೂರಿನಿಂದ ಬಂದಿದ್ದೇನೆ. ಯಾವ ಕಾರಣಕ್ಕೆ ದಾಳಿ ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಯಾವುದೇ ತನಿಖೆಗೂ ನಾವು ಸಿದ್ಧರಾಗಿದ್ದೇವೆ. ಶಾಸಕ ವೀರೇಂದ್ರ ಅವರೂ ಶೀಘ್ರ ಬರುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಶುಕ್ರವಾರ ಚಳ್ಳಕೆರೆಯಲ್ಲಿರುವ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರರ ಮನೆ ಮೇಲೆ ದಾಳಿ ನಡೆಸಿದ್ದಾರೆ. ವೀರೇಂದ್ರ ಸಹೋದರ ಕೆ.ಸಿ.ನಾಗರಾಜ್ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.</p><p>3 ಕಾರ್ನಲ್ಲಿ ಬಂದ 10 ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿತು. ಶಾಸಕ ಕೆ.ಸಿ.ವೀರೇಂದ್ರ ಅವರ ಮನೆ, ಸಹೋದರರಾದ ಕೆ.ಸಿ.ನಾಗರಾಜ್, ಕೆ.ಸಿ.ತಿಪ್ಪೇಸ್ವಾಮಿ ಅವರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. </p><p>ದಾಳಿ ನಡೆಯುತ್ತಿದ್ದಂತೆ ಅಪಾರ ಸಂಖ್ಯೆಯ ಜನರು ವೀರೇಂದ್ರ ಮನೆಯತ್ತ ಬರುತ್ತಿದ್ದಾರೆ. ಸಿಆರ್ಪಿಎಫ್ ಯೋಧರು ಮನೆ ಸುತ್ತಲೂ ಭದ್ರತೆ ಕೈಗೊಂಡಿದ್ದಾರೆ. ಶಾಸಕರ ಮನೆಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. </p><p>ದಾಳಿಯ ನಂತರ ಶಾಸಕರ ಸಹೋದರ ಕೆ.ಸಿ.ನಾಗರಾಜ್ ವಕೀಲರೊಬ್ಬರನ್ನು ಕರೆದುಕೊಂಡು ಬಂದರು. ಅಧಿಕಾರಿಗಳು ನಾಗರಾಜ್ ಅವರನ್ನು ವಶಕ್ಕೆ ಪಡೆದು ವಕೀಲ ಉಮೇಶ್ ಅವರನ್ನು ವಾಪಸ್ ಕಳುಹಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಸಿ.ನಾಗರಾಜ್ ‘ನಾನು ಬೆಂಗಳೂರಿನಿಂದ ಬಂದಿದ್ದೇನೆ. ಯಾವ ಕಾರಣಕ್ಕೆ ದಾಳಿ ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಯಾವುದೇ ತನಿಖೆಗೂ ನಾವು ಸಿದ್ಧರಾಗಿದ್ದೇವೆ. ಶಾಸಕ ವೀರೇಂದ್ರ ಅವರೂ ಶೀಘ್ರ ಬರುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>