<p><strong>ಮಂಗಳೂರು</strong>: ‘ಹಿಂದೂ ಧರ್ಮವನ್ನು ಉಳಿಸಲು ಹೋರಾಡುವವರನ್ನು ಮುಸ್ಲಿಂ ಭಯೋತ್ಪಾದಕರು ಕೊಂದು ಹಾಕುತ್ತಿದ್ದಾರೆ. ಆರೋಪಿಗಳು ಎಲ್ಲಿ ಸಿಗುತ್ತಾರೋ ಅಲ್ಲೇ ಗುಂಡಿಕ್ಕಿ ಸಾಯಿಸಬೇಕು. ಇಲ್ಲದಿದ್ದರೆ ದೇಶಕ್ಕಾಗಿ ದುಡಿಯುವವರಿಗೆ ಭಯಪಡುವ ವಾತಾವರಣ ನಿರ್ಮಾಣವಾಗುತ್ತದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p><p>ಸುಹಾಸ್ ಶೆಟ್ಟಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು ಸಂತ್ರಸ್ತ ಕುಟುಂಬಕ್ಕೆ ₹ 5 ಲಕ್ಷ ನೀಡುವುದಾಗಿ ತಿಳಿಸಿದರು.</p><p>‘ಕೆಲವರು ಹಿಂದೂ ಹೆಸರಿನಲ್ಲಿ ಮಜಾ ಮಾಡಿದ್ದಾರೆ. ಕಾರ್ಯಕರ್ತರ ಹೆಸರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ‘ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ಹೇಳಿ ಸುಮ್ಮನೆ ಕುಳಿತರು. ಈಗ ಬಂದು ಸಾಂತ್ವನ ಹೇಳುತ್ತಾರೆ’ ಎಂದು ಕಿಡಿಕಾರಿದರು.</p><p>‘ಹಿಂದೂ ಯುವಕರು ರಾತ್ರಿ ಹೊತ್ತು ಒಬ್ಬಂಟಿಯಾಗಿ ಓಡಾಡಬೇಡಿ. ನಮ್ಮ ಸರ್ಕಾರದ ಇದ್ದಾಗಲೂ ಕಾರ್ಯಕರ್ತರಿಗೆ ರಕ್ಷಣೆ ಇರಲಿಲ್ಲ. ಕರಾವಳಿಯಲ್ಲಿ ಆತ್ಮರಕ್ಷಣೆಗೆ ಆಯುಧ ಇಟ್ಟುಕೊಳ್ಳುವುದು ಅಗತ್ಯ’ ಎಂದರು. </p><p>‘ಸುಹಾಸ್ ಶೆಟ್ಟಿ ಆತ್ಮರಕ್ಷಣೆಗೆ ಇಟ್ಟುಕೊಂಡಿದ್ದ ಆಯುಧವನ್ನು ಪೊಲೀಸರು ತೆಗೆಸಿದ್ದರು. ಅವರ ಬಳಿ ಆತ್ಮರಕ್ಷಣೆಗೆ ಆಯುಧ ಇಲ್ಲ ಎಂದು ಕೊಲೆ ಮಾಡಿದವರಿಗೆ ಹೇಗೆ ಗೊತ್ತಾಯಿತು’ ಎಂದು ಪ್ರಶ್ನಿಸಿದರು.</p><p><strong>‘ಈ ಹಿಂಸೆಗೆ ಉತ್ತರಿಸಲು ಹಿಂದೂ ಸಮಾಜಕ್ಕೆ ಗೊತ್ತಿದೆ’</strong></p><p><strong>ಮಂಗಳೂರು</strong>: ‘ಮೃತ ವ್ಯಕ್ತಿ ಗೂಂಡಾ ಅಲ್ಲ. ಹಿಂದೂ ಸಮಾಜದ ರಕ್ಷಣೆಗೆ ದುಡಿದ ವ್ಯಕ್ತಿಯ ಬಲಿದಾನವಾಗಿದೆ. ಈ ಹಿಂಸೆಗೆ ಹೇಗೆ ಉತ್ತರಿಸಬೇಕು ಎಂದು ಹಿಂದೂ ಸಮಾಜಕ್ಕೆ ಗೊತ್ತಿದೆ. ಏನು ಮಾಡಬೇಕೋ ಅದನ್ನು ಸಮಾಜ ಮಾಡುತ್ತದೆ. ಅದನ್ನು ಹೇಳಿ ಮಾಡುವುದಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದರು.</p><p>ಸುಹಾಸ್ ಶೆಟ್ಟಿ ಅಂತ್ಯಕ್ರಿಯೆಯಲ್ಲಿ ಶುಕ್ರವಾರ ಭಾಗವಹಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.</p><p>‘ಇಲ್ಲಿ ಮುಸ್ಲಿಂ ತುಷ್ಟಿಕರಣ ಮಾಡುವ ಸರ್ಕಾರವಿದೆ. ಬಜರಂಗ ದಳವನ್ನು ನಿಷೇಧಿಸುತ್ತೇವೆ, ಗೋಹತ್ಯೆ ನಿಷೇಧ ಕಾನೂನು ರದ್ದುಪಡಿಸುತ್ತೇವೆ ಎಂದು ಅವರು ಅಧಿಕಾರಕ್ಕೆ ಬರುವ ಮುನ್ನವೇ ಹೇಳಿದ್ದರು. ಈಗ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಇವೆಲ್ಲದರಲ್ಲೂ ಮುಸ್ಲಿಂ ತುಷ್ಟೀಕರಣ ಎದ್ದುಕಾಣಿಸುತ್ತಿದೆ. ಈ ಹತ್ಯೆಯಲ್ಲೂ ತುಷ್ಟೀಕರಣ ಮಾಡಬೇಡಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಹಿಂದೂ ಧರ್ಮವನ್ನು ಉಳಿಸಲು ಹೋರಾಡುವವರನ್ನು ಮುಸ್ಲಿಂ ಭಯೋತ್ಪಾದಕರು ಕೊಂದು ಹಾಕುತ್ತಿದ್ದಾರೆ. ಆರೋಪಿಗಳು ಎಲ್ಲಿ ಸಿಗುತ್ತಾರೋ ಅಲ್ಲೇ ಗುಂಡಿಕ್ಕಿ ಸಾಯಿಸಬೇಕು. ಇಲ್ಲದಿದ್ದರೆ ದೇಶಕ್ಕಾಗಿ ದುಡಿಯುವವರಿಗೆ ಭಯಪಡುವ ವಾತಾವರಣ ನಿರ್ಮಾಣವಾಗುತ್ತದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p><p>ಸುಹಾಸ್ ಶೆಟ್ಟಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು ಸಂತ್ರಸ್ತ ಕುಟುಂಬಕ್ಕೆ ₹ 5 ಲಕ್ಷ ನೀಡುವುದಾಗಿ ತಿಳಿಸಿದರು.</p><p>‘ಕೆಲವರು ಹಿಂದೂ ಹೆಸರಿನಲ್ಲಿ ಮಜಾ ಮಾಡಿದ್ದಾರೆ. ಕಾರ್ಯಕರ್ತರ ಹೆಸರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ‘ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ಹೇಳಿ ಸುಮ್ಮನೆ ಕುಳಿತರು. ಈಗ ಬಂದು ಸಾಂತ್ವನ ಹೇಳುತ್ತಾರೆ’ ಎಂದು ಕಿಡಿಕಾರಿದರು.</p><p>‘ಹಿಂದೂ ಯುವಕರು ರಾತ್ರಿ ಹೊತ್ತು ಒಬ್ಬಂಟಿಯಾಗಿ ಓಡಾಡಬೇಡಿ. ನಮ್ಮ ಸರ್ಕಾರದ ಇದ್ದಾಗಲೂ ಕಾರ್ಯಕರ್ತರಿಗೆ ರಕ್ಷಣೆ ಇರಲಿಲ್ಲ. ಕರಾವಳಿಯಲ್ಲಿ ಆತ್ಮರಕ್ಷಣೆಗೆ ಆಯುಧ ಇಟ್ಟುಕೊಳ್ಳುವುದು ಅಗತ್ಯ’ ಎಂದರು. </p><p>‘ಸುಹಾಸ್ ಶೆಟ್ಟಿ ಆತ್ಮರಕ್ಷಣೆಗೆ ಇಟ್ಟುಕೊಂಡಿದ್ದ ಆಯುಧವನ್ನು ಪೊಲೀಸರು ತೆಗೆಸಿದ್ದರು. ಅವರ ಬಳಿ ಆತ್ಮರಕ್ಷಣೆಗೆ ಆಯುಧ ಇಲ್ಲ ಎಂದು ಕೊಲೆ ಮಾಡಿದವರಿಗೆ ಹೇಗೆ ಗೊತ್ತಾಯಿತು’ ಎಂದು ಪ್ರಶ್ನಿಸಿದರು.</p><p><strong>‘ಈ ಹಿಂಸೆಗೆ ಉತ್ತರಿಸಲು ಹಿಂದೂ ಸಮಾಜಕ್ಕೆ ಗೊತ್ತಿದೆ’</strong></p><p><strong>ಮಂಗಳೂರು</strong>: ‘ಮೃತ ವ್ಯಕ್ತಿ ಗೂಂಡಾ ಅಲ್ಲ. ಹಿಂದೂ ಸಮಾಜದ ರಕ್ಷಣೆಗೆ ದುಡಿದ ವ್ಯಕ್ತಿಯ ಬಲಿದಾನವಾಗಿದೆ. ಈ ಹಿಂಸೆಗೆ ಹೇಗೆ ಉತ್ತರಿಸಬೇಕು ಎಂದು ಹಿಂದೂ ಸಮಾಜಕ್ಕೆ ಗೊತ್ತಿದೆ. ಏನು ಮಾಡಬೇಕೋ ಅದನ್ನು ಸಮಾಜ ಮಾಡುತ್ತದೆ. ಅದನ್ನು ಹೇಳಿ ಮಾಡುವುದಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದರು.</p><p>ಸುಹಾಸ್ ಶೆಟ್ಟಿ ಅಂತ್ಯಕ್ರಿಯೆಯಲ್ಲಿ ಶುಕ್ರವಾರ ಭಾಗವಹಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.</p><p>‘ಇಲ್ಲಿ ಮುಸ್ಲಿಂ ತುಷ್ಟಿಕರಣ ಮಾಡುವ ಸರ್ಕಾರವಿದೆ. ಬಜರಂಗ ದಳವನ್ನು ನಿಷೇಧಿಸುತ್ತೇವೆ, ಗೋಹತ್ಯೆ ನಿಷೇಧ ಕಾನೂನು ರದ್ದುಪಡಿಸುತ್ತೇವೆ ಎಂದು ಅವರು ಅಧಿಕಾರಕ್ಕೆ ಬರುವ ಮುನ್ನವೇ ಹೇಳಿದ್ದರು. ಈಗ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಇವೆಲ್ಲದರಲ್ಲೂ ಮುಸ್ಲಿಂ ತುಷ್ಟೀಕರಣ ಎದ್ದುಕಾಣಿಸುತ್ತಿದೆ. ಈ ಹತ್ಯೆಯಲ್ಲೂ ತುಷ್ಟೀಕರಣ ಮಾಡಬೇಡಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>