<p><strong>ಸುರಗೊಂಡನಕೊಪ್ಪ (ದಾವಣಗೆರೆ):</strong> ಪರಿಶಿಷ್ಟ ಜಾತಿಗೆ ನಿಗದಿಯಾದ ಮೀಸಲಾತಿಯನ್ನು ವೈಜ್ಞಾನಿಕವಾಗಿ ಹಂಚಿಕೆ ಮಾಡಿ ಎಲ್ಲರಿಗೂ ನ್ಯಾಯ ಕೊಡಲಾಗಿದೆ. ಇದರಿಂದ ಬಿಜೆಪಿ ನಾಯಕರಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದ್ದು, ನೂರು ಜನರನ್ನು ಸೇರಿಸಿ ರಾಜಕೀಯ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.</p><p>ವೇದಿಕೆ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p><p>‘ಇದು ರಾಜಕೀಯ ವೇದಿಕೆ ಅಲ್ಲ. ಬಂಜಾರ ಸಮುದಾಯವನ್ನು ಪರಿಶಿಷ್ಟ ಸಮುದಾಯಕ್ಕೆ ಸೇರಿಸಿದ್ದು ಕಾಂಗ್ರೆಸ್. ಸಮುದಾಯದಲ್ಲಿ ಶೇ 90ರಷ್ಟು ಜನರು ಒಳ್ಳೆಯವರು. ನಮ್ಮೊಂದಿಗೆ ಇದ್ದಾರೆ’ ಎಂದರು.</p><p>ದೆಹಲಿ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಮುಗುಳ್ನಕ್ಕ ಡಿ.ಕೆ.ಶಿವಕುಮಾರ್, ‘ಕಾಲವೇ ಉತ್ತರ ಕೊಡುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಗೊಂಡನಕೊಪ್ಪ (ದಾವಣಗೆರೆ):</strong> ಪರಿಶಿಷ್ಟ ಜಾತಿಗೆ ನಿಗದಿಯಾದ ಮೀಸಲಾತಿಯನ್ನು ವೈಜ್ಞಾನಿಕವಾಗಿ ಹಂಚಿಕೆ ಮಾಡಿ ಎಲ್ಲರಿಗೂ ನ್ಯಾಯ ಕೊಡಲಾಗಿದೆ. ಇದರಿಂದ ಬಿಜೆಪಿ ನಾಯಕರಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದ್ದು, ನೂರು ಜನರನ್ನು ಸೇರಿಸಿ ರಾಜಕೀಯ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.</p><p>ವೇದಿಕೆ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p><p>‘ಇದು ರಾಜಕೀಯ ವೇದಿಕೆ ಅಲ್ಲ. ಬಂಜಾರ ಸಮುದಾಯವನ್ನು ಪರಿಶಿಷ್ಟ ಸಮುದಾಯಕ್ಕೆ ಸೇರಿಸಿದ್ದು ಕಾಂಗ್ರೆಸ್. ಸಮುದಾಯದಲ್ಲಿ ಶೇ 90ರಷ್ಟು ಜನರು ಒಳ್ಳೆಯವರು. ನಮ್ಮೊಂದಿಗೆ ಇದ್ದಾರೆ’ ಎಂದರು.</p><p>ದೆಹಲಿ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಮುಗುಳ್ನಕ್ಕ ಡಿ.ಕೆ.ಶಿವಕುಮಾರ್, ‘ಕಾಲವೇ ಉತ್ತರ ಕೊಡುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>