<p><strong>ಹುಬ್ಬಳ್ಳಿ:</strong> ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ರಾಜ್ಯ ಸರ್ಕಾರದ ರಕ್ಷಣೆ ಇದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು. </p><p>ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. </p><p>ಹಾವೇರಿ ಜಿಲ್ಲೆಯ ಹಾನಗಲ್ ಅತ್ಯಾಚಾರ ಪ್ರಕರಣದ ನಂತರ ಈಗ ಬ್ಯಾಡಗಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಇದೇ ರೀತಿ ಹಲವೆಡೆ ಪ್ರಕರಣಗಳು ನಡೆದಿದ್ದು, ಒಂದೊಂದಾಗಿ ಬೆಳಕಿಗೆ ಬರುತ್ತಿವೆ ಎಂದರು. </p><p>'ಇಷ್ಟೆಲ್ಲ ಪ್ರಕರಣಗಳು ಹೊರಬರುತ್ತಿದ್ದರೂ ಪೊಲೀಸರು ಕಣ್ಣು ಮುಚ್ಚಿ ಕುಳಿತಿದ್ದಾರೆ. ಮಟಕಾ, ಜೂಜು, ಅಕ್ರಮ ಸಾರಾಯಿ ಮಾರಾಟ ಮಾಡಲು ಅಪರಾಧಿಗಳಿಗೆ ಪೊಲೀಸರೇ ಕುಮ್ಮಕ್ಕು ನೀಡುತ್ತಿದ್ದಾರೆ. ಸರ್ಕಾರ ಹಣ ಪಡೆದು ಪೊಲೀಸರನ್ನು ವರ್ಗಾವಣೆ ಮಾಡಿದ್ದರ ಫಲವಾಗಿ ಇದು ನಡೆದಿದೆ ಎಂದು ಆರೋಪಿಸಿದರು.</p><p>ಹಾನಗಲ್ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್.ಐ.ಟಿ ರಚಿಸುವಂತೆ ಒತ್ತಾಯಿಸಿದರೂ ಸರ್ಕಾರ ಕೇಳುತ್ತಿಲ್ಲ. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು. </p><p>ಈ ಪ್ರಕರಣವನ್ನು ತಾರ್ಕಿಕ ಅಂತ್ಯದವರೆಗೆ ಒಯ್ಯಲು ನಿರಂತರ ಪ್ರತಿಭಟನೆ ನಡೆಸುತ್ತೇವೆ. ಕಾನೂನು ಹೋರಾಟವನ್ನೂ ನಡೆಸಲಿದ್ದೇವೆ ಎಂದರು.</p>.ಹಾನಗಲ್ ಅತ್ಯಾಚಾರ ಪ್ರಕರಣ ಮುಚ್ಚಿ ಹಾಕುವುದು ಗ್ಯಾರಂಟಿ: ಬಸವರಾಜ ಬೊಮ್ಮಾಯಿ.ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ರಾಜ್ಯ ಸರ್ಕಾರದ ರಕ್ಷಣೆ ಇದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು. </p><p>ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. </p><p>ಹಾವೇರಿ ಜಿಲ್ಲೆಯ ಹಾನಗಲ್ ಅತ್ಯಾಚಾರ ಪ್ರಕರಣದ ನಂತರ ಈಗ ಬ್ಯಾಡಗಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಇದೇ ರೀತಿ ಹಲವೆಡೆ ಪ್ರಕರಣಗಳು ನಡೆದಿದ್ದು, ಒಂದೊಂದಾಗಿ ಬೆಳಕಿಗೆ ಬರುತ್ತಿವೆ ಎಂದರು. </p><p>'ಇಷ್ಟೆಲ್ಲ ಪ್ರಕರಣಗಳು ಹೊರಬರುತ್ತಿದ್ದರೂ ಪೊಲೀಸರು ಕಣ್ಣು ಮುಚ್ಚಿ ಕುಳಿತಿದ್ದಾರೆ. ಮಟಕಾ, ಜೂಜು, ಅಕ್ರಮ ಸಾರಾಯಿ ಮಾರಾಟ ಮಾಡಲು ಅಪರಾಧಿಗಳಿಗೆ ಪೊಲೀಸರೇ ಕುಮ್ಮಕ್ಕು ನೀಡುತ್ತಿದ್ದಾರೆ. ಸರ್ಕಾರ ಹಣ ಪಡೆದು ಪೊಲೀಸರನ್ನು ವರ್ಗಾವಣೆ ಮಾಡಿದ್ದರ ಫಲವಾಗಿ ಇದು ನಡೆದಿದೆ ಎಂದು ಆರೋಪಿಸಿದರು.</p><p>ಹಾನಗಲ್ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್.ಐ.ಟಿ ರಚಿಸುವಂತೆ ಒತ್ತಾಯಿಸಿದರೂ ಸರ್ಕಾರ ಕೇಳುತ್ತಿಲ್ಲ. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು. </p><p>ಈ ಪ್ರಕರಣವನ್ನು ತಾರ್ಕಿಕ ಅಂತ್ಯದವರೆಗೆ ಒಯ್ಯಲು ನಿರಂತರ ಪ್ರತಿಭಟನೆ ನಡೆಸುತ್ತೇವೆ. ಕಾನೂನು ಹೋರಾಟವನ್ನೂ ನಡೆಸಲಿದ್ದೇವೆ ಎಂದರು.</p>.ಹಾನಗಲ್ ಅತ್ಯಾಚಾರ ಪ್ರಕರಣ ಮುಚ್ಚಿ ಹಾಕುವುದು ಗ್ಯಾರಂಟಿ: ಬಸವರಾಜ ಬೊಮ್ಮಾಯಿ.ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>