<p><strong>ಜಾವಗಲ್</strong>: ಹೋಬಳಿಯ ನೇರ್ಲಿಗೆ ಗ್ರಾಮದಲ್ಲಿ ಸುಮಾರು 20 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಪ್ರೌಢಶಾಲಾ ಕಟ್ಟಡದ ಮೇಲ್ಚಾವಣಿ ಶಿಥಿಲಗೊಂಡಿದ್ದು ವಿದ್ಯಾರ್ಥಿಗಳು ಆತಂಕದೊಂದಿಗೆ ವ್ಯಾಸಂಗ ಮಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.</p>.<p>ಗ್ರಾಮದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳನ್ನು ಒಳಗೊಂಡಂತೆ ಎಲ್ಲಾ ವರ್ಗದ ಮಕ್ಕಳಿಗೂ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ಶಿಕ್ಷಣ ಒದಗಿಸುವ ಉದ್ದೇಶದೊಂದಿಗೆ ನಿರ್ಮಿಸಲಾಗಿದ್ದ ಶಾಲೆ ಈ ಕಟ್ಟಡದ ಮೇಲ್ಚಾವಣಿಯು ಬಿರುಕು ಬಿಟ್ಟಿರುವ ಪರಿಣಾಮ ಮಳೆ ನೀರು ಕೊಠಡಿಯಲ್ಲಿ ಸೋರುತ್ತಿದ್ದು, ಕಟ್ಟಡವು ಶಿಥಿಲಗೊಂಡಿರುವ ಕಾರಣ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.</p>.<p>ಈ ಪ್ರೌಢಶಾಲೆಯಲ್ಲಿ ಒಟ್ಟು ಮೂರು ಕೊಠಡಿಗಳಿದ್ದು ಸುಮಾರು 60 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.</p>.<p>ಈಗಾಗಲೇ ಮಳೆಗಾಲ ಆರಂಭವಾಗಿದ್ದು ಕಟ್ಟಡದ ಒಳಗೆ ನೀರು ಬೀಳುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಕೂಡಲೇ ಎಚ್ಚೆತ್ತುಕೊಂಡು ಕಟ್ಟಡವನ್ನು ದುರಸ್ತಿಗೊಳಿಸಿ ಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾವಗಲ್</strong>: ಹೋಬಳಿಯ ನೇರ್ಲಿಗೆ ಗ್ರಾಮದಲ್ಲಿ ಸುಮಾರು 20 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಪ್ರೌಢಶಾಲಾ ಕಟ್ಟಡದ ಮೇಲ್ಚಾವಣಿ ಶಿಥಿಲಗೊಂಡಿದ್ದು ವಿದ್ಯಾರ್ಥಿಗಳು ಆತಂಕದೊಂದಿಗೆ ವ್ಯಾಸಂಗ ಮಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.</p>.<p>ಗ್ರಾಮದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳನ್ನು ಒಳಗೊಂಡಂತೆ ಎಲ್ಲಾ ವರ್ಗದ ಮಕ್ಕಳಿಗೂ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ಶಿಕ್ಷಣ ಒದಗಿಸುವ ಉದ್ದೇಶದೊಂದಿಗೆ ನಿರ್ಮಿಸಲಾಗಿದ್ದ ಶಾಲೆ ಈ ಕಟ್ಟಡದ ಮೇಲ್ಚಾವಣಿಯು ಬಿರುಕು ಬಿಟ್ಟಿರುವ ಪರಿಣಾಮ ಮಳೆ ನೀರು ಕೊಠಡಿಯಲ್ಲಿ ಸೋರುತ್ತಿದ್ದು, ಕಟ್ಟಡವು ಶಿಥಿಲಗೊಂಡಿರುವ ಕಾರಣ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.</p>.<p>ಈ ಪ್ರೌಢಶಾಲೆಯಲ್ಲಿ ಒಟ್ಟು ಮೂರು ಕೊಠಡಿಗಳಿದ್ದು ಸುಮಾರು 60 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.</p>.<p>ಈಗಾಗಲೇ ಮಳೆಗಾಲ ಆರಂಭವಾಗಿದ್ದು ಕಟ್ಟಡದ ಒಳಗೆ ನೀರು ಬೀಳುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಕೂಡಲೇ ಎಚ್ಚೆತ್ತುಕೊಂಡು ಕಟ್ಟಡವನ್ನು ದುರಸ್ತಿಗೊಳಿಸಿ ಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>