<p><strong>ಶಿಗ್ಗಾವಿ</strong>: ಬಡವರಿಗೆ, ನಿರ್ಗತಿಕರ ಹಸಿವು ನಿಗಸುವ ಉದ್ದೇಶದಿಂದ ಇಲ್ಲಿನ ಹೊಸ ಬಸ್ನಿಲ್ದಾಣದಲ್ಲಿ ನಿರ್ಮಿಸುತ್ತಿರುವ ಇಂದಿರಾ ಕ್ಯಾಂಟೀನ್ ಎರಡು ವರ್ಷಗಳಿಂದ ಕುಂಟುತ್ತಾ ಸಾಗಿದೆ. </p>.<p>2013ರಲ್ಲೇ ಸರ್ಕಾರ ಈ ಯೋಜನೆಯನ್ನು ರಾಜ್ಯದಾದ್ಯಂತ ಅನುಷ್ಠಾನಕ್ಕೆ ತಂದರೂ, ಶಿಗ್ಗಾವಿ ಕ್ಷೇತ್ರದಲ್ಲಿ ಆರಂಭವಾಗಿಲ್ಲ. ಇದರಿಂದಾಗಿ ಇಂದಿರಾ ಕ್ಯಾಂಟೀನ್ ಆರಂಭವಾಗುವ ಬಡವರ ಕನಸು ನನಸಾಗಲಿಲ್ಲ.</p>.<p>ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ಆಗಮಿಸಿದಾಗ, ಅಪೂರ್ಣಗೊಂಡಿದ್ದ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈವರೆಗೂ ಪೂರ್ಣಗೊಂಡಿಲ್ಲ. ಹೀಗಾಗಿ ಬಡವರು, ನಿರ್ಗತಿಕರು ಆಹಾರಕ್ಕಾಗಿ ಪರದಾಡುವಂತಾಗಿದೆ. </p>.<p>ಕ್ಯಾಂಟೀನ್ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಕಿಟಕಿಗಳು ಒಡೆದುಹೋಗಿವೆ. ಸರಿಯಾದ ಬಾಗಿಲು ಇಲ್ಲದ ಕಾರಣ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಮದ್ಯದ ಬಾಟಲಿ, ಪಾಕೀಟು, ಪ್ಲಾಸ್ಟಿಕ್ ಚೀಲಗಳು ತುಂಬಿವೆ. ಕ್ಯಾಂಟೀನ್ ಒಳಗೆ ಹಾಗೂ ಹೊರಗೆ ಗಬ್ಬುವಾಸನೆ ಹರಡಿದೆ.</p>.<p>ಕ್ಯಾಂಟೀನ್ ಸುತ್ತ ಗಿಡ ಗಂಟಿ ಬೆಳೆದಿದೆ. ಪ್ರಯಾಣಿಕರು, ಸಾರ್ವಜನಿಕರು ಕ್ಯಾಂಟೀನ್ ಬಳಿ ಮಲ–ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ರೋಗ ಹರಡುವ ಭೀತಿ ಸ್ಥಳೀಯರಲ್ಲಿದೆ. ಕ್ಯಾಂಟೀನ್ ಸುತ್ತ ಹಾಗೂ ಇಡೀ ಬಸ್ನಿಲ್ದಾಣವನ್ನು ಸ್ವಚ್ಛಗೊಳಿಸವೇಕು. ಇಂದಿರಾ ಕ್ಯಾಂಟೀನ್ ಅನ್ನು ಶೀಘ್ರ ಆರಂಭಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಾರೆ.</p>.<div><blockquote>ಇಂದಿರಾ ಕ್ಯಾಂಟೀನ್ ಕಟ್ಟಡದ ಸಣ್ಣಪುಟ್ಟ ಕೆಲಸವಿದ್ದು ಸದ್ಯದಲ್ಲೇ ಪೂರ್ಣಗೊಳಿಸಿ ಕ್ಯಾಂಟೀನ್ ಆರಂಭಿಸಲಾಗುತ್ತಿದೆ.</blockquote><span class="attribution">ಮಲ್ಲೇಶ ಆರ್. ಶಿಗ್ಗಾವಿ, ಪುರಸಭೆ ಮುಖ್ಯಾಧಿಕಾರಿ</span></div>.<div><blockquote>ಸರ್ಕಾರದ ಯೋಜನೆ ಸದ್ಬಳಕೆ ಆಗಬೇಕು. ಕ್ಯಾಂಟೀನ್ ಆರಂಭಿಸಿ ಬಡ ಕೂಲಿಕಾರರಿಗೆ ಅನುಕೂಲ ಮಾಡಿಕೊಡಬೇಕು.</blockquote><span class="attribution">ಬಸಲಿಂಗಪ್ಪ ನರಗುಂದ, ರೈತ ಸಂಘದ ಮುಖಂಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ಬಡವರಿಗೆ, ನಿರ್ಗತಿಕರ ಹಸಿವು ನಿಗಸುವ ಉದ್ದೇಶದಿಂದ ಇಲ್ಲಿನ ಹೊಸ ಬಸ್ನಿಲ್ದಾಣದಲ್ಲಿ ನಿರ್ಮಿಸುತ್ತಿರುವ ಇಂದಿರಾ ಕ್ಯಾಂಟೀನ್ ಎರಡು ವರ್ಷಗಳಿಂದ ಕುಂಟುತ್ತಾ ಸಾಗಿದೆ. </p>.<p>2013ರಲ್ಲೇ ಸರ್ಕಾರ ಈ ಯೋಜನೆಯನ್ನು ರಾಜ್ಯದಾದ್ಯಂತ ಅನುಷ್ಠಾನಕ್ಕೆ ತಂದರೂ, ಶಿಗ್ಗಾವಿ ಕ್ಷೇತ್ರದಲ್ಲಿ ಆರಂಭವಾಗಿಲ್ಲ. ಇದರಿಂದಾಗಿ ಇಂದಿರಾ ಕ್ಯಾಂಟೀನ್ ಆರಂಭವಾಗುವ ಬಡವರ ಕನಸು ನನಸಾಗಲಿಲ್ಲ.</p>.<p>ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ಆಗಮಿಸಿದಾಗ, ಅಪೂರ್ಣಗೊಂಡಿದ್ದ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈವರೆಗೂ ಪೂರ್ಣಗೊಂಡಿಲ್ಲ. ಹೀಗಾಗಿ ಬಡವರು, ನಿರ್ಗತಿಕರು ಆಹಾರಕ್ಕಾಗಿ ಪರದಾಡುವಂತಾಗಿದೆ. </p>.<p>ಕ್ಯಾಂಟೀನ್ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಕಿಟಕಿಗಳು ಒಡೆದುಹೋಗಿವೆ. ಸರಿಯಾದ ಬಾಗಿಲು ಇಲ್ಲದ ಕಾರಣ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಮದ್ಯದ ಬಾಟಲಿ, ಪಾಕೀಟು, ಪ್ಲಾಸ್ಟಿಕ್ ಚೀಲಗಳು ತುಂಬಿವೆ. ಕ್ಯಾಂಟೀನ್ ಒಳಗೆ ಹಾಗೂ ಹೊರಗೆ ಗಬ್ಬುವಾಸನೆ ಹರಡಿದೆ.</p>.<p>ಕ್ಯಾಂಟೀನ್ ಸುತ್ತ ಗಿಡ ಗಂಟಿ ಬೆಳೆದಿದೆ. ಪ್ರಯಾಣಿಕರು, ಸಾರ್ವಜನಿಕರು ಕ್ಯಾಂಟೀನ್ ಬಳಿ ಮಲ–ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ರೋಗ ಹರಡುವ ಭೀತಿ ಸ್ಥಳೀಯರಲ್ಲಿದೆ. ಕ್ಯಾಂಟೀನ್ ಸುತ್ತ ಹಾಗೂ ಇಡೀ ಬಸ್ನಿಲ್ದಾಣವನ್ನು ಸ್ವಚ್ಛಗೊಳಿಸವೇಕು. ಇಂದಿರಾ ಕ್ಯಾಂಟೀನ್ ಅನ್ನು ಶೀಘ್ರ ಆರಂಭಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಾರೆ.</p>.<div><blockquote>ಇಂದಿರಾ ಕ್ಯಾಂಟೀನ್ ಕಟ್ಟಡದ ಸಣ್ಣಪುಟ್ಟ ಕೆಲಸವಿದ್ದು ಸದ್ಯದಲ್ಲೇ ಪೂರ್ಣಗೊಳಿಸಿ ಕ್ಯಾಂಟೀನ್ ಆರಂಭಿಸಲಾಗುತ್ತಿದೆ.</blockquote><span class="attribution">ಮಲ್ಲೇಶ ಆರ್. ಶಿಗ್ಗಾವಿ, ಪುರಸಭೆ ಮುಖ್ಯಾಧಿಕಾರಿ</span></div>.<div><blockquote>ಸರ್ಕಾರದ ಯೋಜನೆ ಸದ್ಬಳಕೆ ಆಗಬೇಕು. ಕ್ಯಾಂಟೀನ್ ಆರಂಭಿಸಿ ಬಡ ಕೂಲಿಕಾರರಿಗೆ ಅನುಕೂಲ ಮಾಡಿಕೊಡಬೇಕು.</blockquote><span class="attribution">ಬಸಲಿಂಗಪ್ಪ ನರಗುಂದ, ರೈತ ಸಂಘದ ಮುಖಂಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>