<p><strong>ಚಿಂಚೋಳಿ</strong>: ಮೈಕ್ರೊ ಫೈನಾನ್ಸ್ನವರ ಕಿರುಕುಳಕ್ಕೆ ಹೆದರಿ ಬೇಕರಿ ಕಾರ್ಮಿಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ಮೃತರ ಪತ್ನಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.</p>.<p>ತಾಲ್ಲೂಕಿನ ಸುಲೇಪೇಟದಲ್ಲಿ ಸಲೀಂ ಕಾಸಿಂ ಸಾಬ್ (46) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಸೇಡಂನವರಾದ ಸಲೀಂ ಹಲವಾರು ವರ್ಷಗಳಿಂದ ಸುಲೇಪೇಟದಲ್ಲಿಯೇ ನೆಲೆಸಿದ್ದರು. ಸುಮಾರು ₹ 20 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು ಎನ್ನಲಾಗಿದೆ.</p>.<p>ಮೃತರ ಪತ್ನಿ ನಸೀಮಾ ಬೇಗಂ ನೀಡಿದ ದೂರಿನ ಅನ್ವಯ ಸುಲೇಪೇಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead">ನಾಗರಿಕ ಹೋರಾಟ ಸಮಿತಿ ದಿಢೀರ್ ಪ್ರತಿಭಟನೆ: ಸಲೀಂ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು, ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಹೆದ್ದಾರಿಯಲ್ಲಿ ಸಂಚಾರ ತಡೆದು ಸುಲೇಪೇಟದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಮೃತನ ಕುಟುಂಬಕ್ಕೆ ₹1 ಕೋಟಿ ಪರಿಹಾರ ಹಾಗೂ ಒಬ್ಬರಿಗೆ ಸರ್ಕಾರಿ ಉದ್ಯೋಗ ಮತ್ತು ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.</p>.<p>ತಾಹೇರ್ ಪಟೇಲ್, ರಜಾಕ್ ಪಟೇಲ್, ಮೋಯಿನ್ ಮೋಮಿನ್, ನಸೀರ್ ಮದ್ದರಗಿ, ಲಾಡಲೆಸಾಬ್, ಫಾರುಕ್, ರುದ್ರಮುನಿ ರಾಮತೀರ್ಥಕರ್, ಮಲ್ಲಿಕಾರ್ಜುನ ಗುಲಗುಂಜಿ, ಫಕ್ರೊದ್ದಿನ್ ಚಾಂಗಲೇರಾ, ಮಹಮದ್ ಫಾಜಿಲ್, ನವಾಜ್ ಪಟೇಲ್ ಬುರಾನ ಪಟೇಲ್, ಜಮೀರ್ ಮಿಯಾ, ರಸೂಲ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ಮೈಕ್ರೊ ಫೈನಾನ್ಸ್ನವರ ಕಿರುಕುಳಕ್ಕೆ ಹೆದರಿ ಬೇಕರಿ ಕಾರ್ಮಿಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ಮೃತರ ಪತ್ನಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.</p>.<p>ತಾಲ್ಲೂಕಿನ ಸುಲೇಪೇಟದಲ್ಲಿ ಸಲೀಂ ಕಾಸಿಂ ಸಾಬ್ (46) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಸೇಡಂನವರಾದ ಸಲೀಂ ಹಲವಾರು ವರ್ಷಗಳಿಂದ ಸುಲೇಪೇಟದಲ್ಲಿಯೇ ನೆಲೆಸಿದ್ದರು. ಸುಮಾರು ₹ 20 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು ಎನ್ನಲಾಗಿದೆ.</p>.<p>ಮೃತರ ಪತ್ನಿ ನಸೀಮಾ ಬೇಗಂ ನೀಡಿದ ದೂರಿನ ಅನ್ವಯ ಸುಲೇಪೇಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead">ನಾಗರಿಕ ಹೋರಾಟ ಸಮಿತಿ ದಿಢೀರ್ ಪ್ರತಿಭಟನೆ: ಸಲೀಂ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು, ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಹೆದ್ದಾರಿಯಲ್ಲಿ ಸಂಚಾರ ತಡೆದು ಸುಲೇಪೇಟದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಮೃತನ ಕುಟುಂಬಕ್ಕೆ ₹1 ಕೋಟಿ ಪರಿಹಾರ ಹಾಗೂ ಒಬ್ಬರಿಗೆ ಸರ್ಕಾರಿ ಉದ್ಯೋಗ ಮತ್ತು ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.</p>.<p>ತಾಹೇರ್ ಪಟೇಲ್, ರಜಾಕ್ ಪಟೇಲ್, ಮೋಯಿನ್ ಮೋಮಿನ್, ನಸೀರ್ ಮದ್ದರಗಿ, ಲಾಡಲೆಸಾಬ್, ಫಾರುಕ್, ರುದ್ರಮುನಿ ರಾಮತೀರ್ಥಕರ್, ಮಲ್ಲಿಕಾರ್ಜುನ ಗುಲಗುಂಜಿ, ಫಕ್ರೊದ್ದಿನ್ ಚಾಂಗಲೇರಾ, ಮಹಮದ್ ಫಾಜಿಲ್, ನವಾಜ್ ಪಟೇಲ್ ಬುರಾನ ಪಟೇಲ್, ಜಮೀರ್ ಮಿಯಾ, ರಸೂಲ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>