<p><strong>ಚಿಂಚೋಳಿ:</strong> ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಗೌರವ ಅಧ್ಯಕ್ಷರಾದ ಭೀಮಣ್ಣ ಖಂಡ್ರೆ ಅವರ ಜನ್ಮಶತಮಾನೋತ್ಸವ ಡಿ.2ರಂದು ಭಾಲ್ಕಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ.ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ತಿಳಿಸಿದರು.</p>.<p>ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಮಾಜದ ಮುಖಂಡರೊಂದಿಗೆ ಸುದ್ದಿಗೋಷ್ಠಿ ನಡೆಸಿದರು. ‘ಭೀಮಣ್ಣ ಖಂಡ್ರೆ ಅವರು ಶಾಸಕರಾಗಿ, ಸಚಿವರಾಗಿ ಹಾಗೂ ವೀರಶೈವ ಲಿಂಗಾಯತ ಸಮಾಜದ ಸಂಘಟನೆಗೆ ಶ್ರಮಿಸಿದ್ದಾರೆ. ಗುರುವಿರಕ್ತರನ್ನು ಒಂದೇ ವೇದಿಕೆಯಲ್ಲಿ ತಂದ ಖ್ಯಾತಿ ಹೊಂದಿರುವ ಹಿರಿಯ ನಾಯಕರಾಗಿದ್ದಾರೆ’ ಎಂದರು.</p>.<p>‘ಮಠ ಮಾನ್ಯಗಳ ಮಾರ್ಗದರ್ಶನದಲ್ಲಿ ಸಮಾಜದ ಉನ್ನತಿಗೆ ಶ್ರಮಿಸಿದ ಅವರ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಲೋಕನಾಯಕ ಎಂಬ ಕೃತಿ ಬಿಡುಗಡೆ ನಡೆಯಲಿದೆ’ ಎಂದರು.</p>.<p>ಸಮಾರಂಭಕ್ಕೆ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ನೂರಾರು ಮಠಾಧೀಶರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಪಕ್ಷಗಳ ಖಂಡ್ರೆ ಅವರ ಒಡನಾಡಿಗಳನ್ನು ಆಹ್ವಾನಿಸಲಾಗಿದ್ದು ಎಲ್ಲರೂ ಆಗಮಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ 1 ಲಕ್ಷಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳಲಿದ್ದು, ಚಿಂಚೋಳಿ ತಾಲ್ಲೂಕಿನಿಂದ ಸುಮಾರು 5 ಸಾವಿರಕ್ಕಿಂತ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ ಎಂದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲ್ಲೂಕು ಅಧ್ಯಕ್ಷ ಚಿತ್ರಶೇಖರ ಪಾಟೀಲ ಸಹಿತ ಪದಾಧಿಕಾರಿಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ:</strong> ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಗೌರವ ಅಧ್ಯಕ್ಷರಾದ ಭೀಮಣ್ಣ ಖಂಡ್ರೆ ಅವರ ಜನ್ಮಶತಮಾನೋತ್ಸವ ಡಿ.2ರಂದು ಭಾಲ್ಕಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ.ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ತಿಳಿಸಿದರು.</p>.<p>ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಮಾಜದ ಮುಖಂಡರೊಂದಿಗೆ ಸುದ್ದಿಗೋಷ್ಠಿ ನಡೆಸಿದರು. ‘ಭೀಮಣ್ಣ ಖಂಡ್ರೆ ಅವರು ಶಾಸಕರಾಗಿ, ಸಚಿವರಾಗಿ ಹಾಗೂ ವೀರಶೈವ ಲಿಂಗಾಯತ ಸಮಾಜದ ಸಂಘಟನೆಗೆ ಶ್ರಮಿಸಿದ್ದಾರೆ. ಗುರುವಿರಕ್ತರನ್ನು ಒಂದೇ ವೇದಿಕೆಯಲ್ಲಿ ತಂದ ಖ್ಯಾತಿ ಹೊಂದಿರುವ ಹಿರಿಯ ನಾಯಕರಾಗಿದ್ದಾರೆ’ ಎಂದರು.</p>.<p>‘ಮಠ ಮಾನ್ಯಗಳ ಮಾರ್ಗದರ್ಶನದಲ್ಲಿ ಸಮಾಜದ ಉನ್ನತಿಗೆ ಶ್ರಮಿಸಿದ ಅವರ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಲೋಕನಾಯಕ ಎಂಬ ಕೃತಿ ಬಿಡುಗಡೆ ನಡೆಯಲಿದೆ’ ಎಂದರು.</p>.<p>ಸಮಾರಂಭಕ್ಕೆ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ನೂರಾರು ಮಠಾಧೀಶರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಪಕ್ಷಗಳ ಖಂಡ್ರೆ ಅವರ ಒಡನಾಡಿಗಳನ್ನು ಆಹ್ವಾನಿಸಲಾಗಿದ್ದು ಎಲ್ಲರೂ ಆಗಮಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ 1 ಲಕ್ಷಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳಲಿದ್ದು, ಚಿಂಚೋಳಿ ತಾಲ್ಲೂಕಿನಿಂದ ಸುಮಾರು 5 ಸಾವಿರಕ್ಕಿಂತ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ ಎಂದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲ್ಲೂಕು ಅಧ್ಯಕ್ಷ ಚಿತ್ರಶೇಖರ ಪಾಟೀಲ ಸಹಿತ ಪದಾಧಿಕಾರಿಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>