<p><strong>ಕಲಬುರಗಿ:</strong> ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಈಗ ಲೋಕಾಯುಕ್ತ ಸಂಸ್ಥೆ) ಸಿಕ್ಕಿಬಿದ್ದಿದ್ದ ಸಮಾಜ ಕಲ್ಯಾಣ ಇಲಾಖೆಯ ಎಫ್ಡಿಎ ನರಸಪ್ಪ ಕುಂಬಾರಗೆ ಕಲಬುರಗಿ ಪ್ರಧಾನ ಜಿಲ್ಲಾ ನ್ಯಾಯಾಲಯ ನಾಲ್ಕು ವರ್ಷ ಜೈಲು ಹಾಗೂ ₹ 20 ಸಾವಿರ ದಂಡ ವಿಧಿಸಿ ಆದೇಶಿಸಿದೆ.</p>.<p>ಚಿತ್ತಾಪುರದಲ್ಲಿ ಖಾಜಾ ಮೈನುದ್ದೀನ್ ಶೇಖ ಚಾವೂಸ್ ಎಂಬುವರು ತಮ್ಮ ಕಟ್ಟಡವನ್ನು ಸಮಾಜ ಕಲ್ಯಾಣ ಇಲಾಖೆಗೆ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್ಗಾಗಿ ₹ 38 ಸಾವಿರಕ್ಕೆ ಬಾಡಿಗೆ ನೀಡಿದ್ದರು. ಬಾಡಿಗೆ ಚೆಕ್ ನೀಡುವಾಗ ನರಸಪ್ಪ ₹ 2 ಸಾವಿರ ಲಂಚ ಪಡೆಯುತ್ತಿದ್ದ. ಈ ಕುರಿತು ಖಾಜಾ ಮೈನುದ್ದೀನ್ ಆಗಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಬಳಿಕ ಎಸಿಬಿ ಅಧಿಕಾರಿಗಳ ದಾಳಿ ವೇಳೆ ನರಸಪ್ಪ ಸಿಕ್ಕಿ ಬಿದ್ದಿದ್ದ.</p>.<p>ಈ ಸಂಬಂಧ ಪಿಎಸ್ಐ ಸಂತೋಷ ಬನ್ನಹಟ್ಟಿ ಪ್ರಕರಣದ ತನಿಖೆ ನಡೆಸಿ ನಸರಪ್ಪ ವಿರುದ್ಧ ಲಂಚ ನಿಷೇಧ ಕಾಯ್ದೆಯ ವಿವಿಧ ಕಲಂಗಳಡಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ನ್ಯಾಯಾಧೀಶ ಜಿ.ಎಲ್.ಲಕ್ಷ್ಮೀನಾರಾಯಣ ಅವರು ಅಪರಾಧಿಗೆ ನಾಲ್ಕು ವರ್ಷ ಜೈಲು ಹಾಗೂ ₹ 20 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಲೋಕಾಯುಕ್ತ ಸಂಸ್ಥೆ ಪರವಾಗಿ ಸಾರ್ವಜನಿಕ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ ಎಸ್.ಚಾಂದಕವಠೆ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಈಗ ಲೋಕಾಯುಕ್ತ ಸಂಸ್ಥೆ) ಸಿಕ್ಕಿಬಿದ್ದಿದ್ದ ಸಮಾಜ ಕಲ್ಯಾಣ ಇಲಾಖೆಯ ಎಫ್ಡಿಎ ನರಸಪ್ಪ ಕುಂಬಾರಗೆ ಕಲಬುರಗಿ ಪ್ರಧಾನ ಜಿಲ್ಲಾ ನ್ಯಾಯಾಲಯ ನಾಲ್ಕು ವರ್ಷ ಜೈಲು ಹಾಗೂ ₹ 20 ಸಾವಿರ ದಂಡ ವಿಧಿಸಿ ಆದೇಶಿಸಿದೆ.</p>.<p>ಚಿತ್ತಾಪುರದಲ್ಲಿ ಖಾಜಾ ಮೈನುದ್ದೀನ್ ಶೇಖ ಚಾವೂಸ್ ಎಂಬುವರು ತಮ್ಮ ಕಟ್ಟಡವನ್ನು ಸಮಾಜ ಕಲ್ಯಾಣ ಇಲಾಖೆಗೆ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್ಗಾಗಿ ₹ 38 ಸಾವಿರಕ್ಕೆ ಬಾಡಿಗೆ ನೀಡಿದ್ದರು. ಬಾಡಿಗೆ ಚೆಕ್ ನೀಡುವಾಗ ನರಸಪ್ಪ ₹ 2 ಸಾವಿರ ಲಂಚ ಪಡೆಯುತ್ತಿದ್ದ. ಈ ಕುರಿತು ಖಾಜಾ ಮೈನುದ್ದೀನ್ ಆಗಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಬಳಿಕ ಎಸಿಬಿ ಅಧಿಕಾರಿಗಳ ದಾಳಿ ವೇಳೆ ನರಸಪ್ಪ ಸಿಕ್ಕಿ ಬಿದ್ದಿದ್ದ.</p>.<p>ಈ ಸಂಬಂಧ ಪಿಎಸ್ಐ ಸಂತೋಷ ಬನ್ನಹಟ್ಟಿ ಪ್ರಕರಣದ ತನಿಖೆ ನಡೆಸಿ ನಸರಪ್ಪ ವಿರುದ್ಧ ಲಂಚ ನಿಷೇಧ ಕಾಯ್ದೆಯ ವಿವಿಧ ಕಲಂಗಳಡಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ನ್ಯಾಯಾಧೀಶ ಜಿ.ಎಲ್.ಲಕ್ಷ್ಮೀನಾರಾಯಣ ಅವರು ಅಪರಾಧಿಗೆ ನಾಲ್ಕು ವರ್ಷ ಜೈಲು ಹಾಗೂ ₹ 20 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಲೋಕಾಯುಕ್ತ ಸಂಸ್ಥೆ ಪರವಾಗಿ ಸಾರ್ವಜನಿಕ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ ಎಸ್.ಚಾಂದಕವಠೆ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>