<p><strong>ಕಲಬುರಗಿ</strong>: ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆಯನ್ನು ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಕಲಬುರಗಿ ಬಂದ್ನಿಂದಾಗಿ ಮದುವೆ ಕಾರ್ಯಕ್ರಮಕ್ಕೆ ಅಡಚಣೆಯಾಯಿತು.</p><p>ಹುಮನಾಬಾದ್ ರಸ್ತೆಯ ಬೇಲೂರ ಕ್ರಾಸ್ ಸಮೀಪದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಕಪನೂರಿನ ಹಂಗರಗಿ ಪರಿವಾರ ಹಾಗೂ ಹಾಗರಗಿಯ ಹಿಪ್ಪರಗಿ ಪರಿವಾರದ ವಧು-ವರ ವಿವಾಹ ಆಯೋಜನೆಯಾಗಿದೆ. ಕಪನೂರ ಗ್ರಾಮದ ನೆಂಟರು ಕಲ್ಯಾಣ ಮಂಟಪ ತಲುಪಿದ್ದರು. ಆದರೆ, ಹಾಗರಗಿಯ ಹಿಪ್ಪರಗಿ ನೆಂಟರು ಮಾರ್ಗ ಮಧ್ಯದಲ್ಲಿ ಸಿಲುಕಿಕೊಂಡಿದ್ದು, ವಿವಾಹ ಕಾರ್ಯಕ್ರಮಕ್ಕೆ ಅಡ್ಡಿಯಾಗಿದೆ ಎಂದು ಕಲ್ಯಾಣ ಮಂಟಪದಲ್ಲಿನ ನೆಂಟರೊಬ್ಬರು ಹೇಳಿದ್ದಾರೆ.</p><p>ಮದುವೆ ಶುಭಕಾರ್ಯಕ್ಕೆ ಎಲ್ಲ ಸಿದ್ಧ ಮಾಡಿಕೊಂಡು ಅಣಿಯಾಗಿದ್ದೆವು. ಪ್ರತಿಭಟನೆಯಿಂದಾಗಿ ಒಂದು ಕಡೆಯ ಬೀಗರು ಬಾರದಕ್ಕೆ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.</p><p>ಪ್ರತಿಭಟನಾಕಾರರು ಕಲ್ಯಾಣ ಮಂಟಪದ ಎದುರಿನಲ್ಲಿ ಜಮಾಯಿಸಿ ರಸ್ತೆ ತಡೆ ನಡೆಸುತ್ತಿದ್ದಾರೆ. ನಗರದ ರಿಂಗ್ ರಸ್ತೆಯ ಪ್ರಮುಖ ವೃತ್ತಗಳಲ್ಲೂ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆಯನ್ನು ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಕಲಬುರಗಿ ಬಂದ್ನಿಂದಾಗಿ ಮದುವೆ ಕಾರ್ಯಕ್ರಮಕ್ಕೆ ಅಡಚಣೆಯಾಯಿತು.</p><p>ಹುಮನಾಬಾದ್ ರಸ್ತೆಯ ಬೇಲೂರ ಕ್ರಾಸ್ ಸಮೀಪದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಕಪನೂರಿನ ಹಂಗರಗಿ ಪರಿವಾರ ಹಾಗೂ ಹಾಗರಗಿಯ ಹಿಪ್ಪರಗಿ ಪರಿವಾರದ ವಧು-ವರ ವಿವಾಹ ಆಯೋಜನೆಯಾಗಿದೆ. ಕಪನೂರ ಗ್ರಾಮದ ನೆಂಟರು ಕಲ್ಯಾಣ ಮಂಟಪ ತಲುಪಿದ್ದರು. ಆದರೆ, ಹಾಗರಗಿಯ ಹಿಪ್ಪರಗಿ ನೆಂಟರು ಮಾರ್ಗ ಮಧ್ಯದಲ್ಲಿ ಸಿಲುಕಿಕೊಂಡಿದ್ದು, ವಿವಾಹ ಕಾರ್ಯಕ್ರಮಕ್ಕೆ ಅಡ್ಡಿಯಾಗಿದೆ ಎಂದು ಕಲ್ಯಾಣ ಮಂಟಪದಲ್ಲಿನ ನೆಂಟರೊಬ್ಬರು ಹೇಳಿದ್ದಾರೆ.</p><p>ಮದುವೆ ಶುಭಕಾರ್ಯಕ್ಕೆ ಎಲ್ಲ ಸಿದ್ಧ ಮಾಡಿಕೊಂಡು ಅಣಿಯಾಗಿದ್ದೆವು. ಪ್ರತಿಭಟನೆಯಿಂದಾಗಿ ಒಂದು ಕಡೆಯ ಬೀಗರು ಬಾರದಕ್ಕೆ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.</p><p>ಪ್ರತಿಭಟನಾಕಾರರು ಕಲ್ಯಾಣ ಮಂಟಪದ ಎದುರಿನಲ್ಲಿ ಜಮಾಯಿಸಿ ರಸ್ತೆ ತಡೆ ನಡೆಸುತ್ತಿದ್ದಾರೆ. ನಗರದ ರಿಂಗ್ ರಸ್ತೆಯ ಪ್ರಮುಖ ವೃತ್ತಗಳಲ್ಲೂ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>