<p><strong>ಕಲಬುರಗಿ</strong>: ಅತಿವೃಷ್ಟಿ ಬಾಧಿತ ಕಲಬುರಗಿಯನ್ನು ‘ಹಸಿ ಬರಗಾಲ ಜಿಲ್ಲೆಯಾಗಿ ಘೋಷಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸೋಮವಾರ ನೀಡಿದ್ದ ‘ಕಲಬುರಗಿ ಬಂದ್’ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಕಲಬುರಗಿ ಕೇಂದ್ರ ಬಸ್ ನಿಲ್ದಾಣ ಹಾಗೂ ಪ್ರಮುಖ ಮಾರ್ಗಗಳಲ್ಲಿ ರೈತ ಪರ, ಕಾರ್ಮಿಕ ಪರ, ವಿದ್ಯಾರ್ಥಿ ಪರ, ಮಹಿಳಾ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದವು.</p>.<p>ನಗರದಲ್ಲಿ ಸಾರಿಗೆ ಬಸ್ಗಳ ಓಡಾಟ ಮಧ್ಯಾಹ್ನ ತನಕ ಬಂದ್ ಆಗಿತ್ತು. ಇದರಿಂದ ಪ್ರಯಾಣಿಕರು ಪರದಾಡಿದರು. ‘ನಗರದಲ್ಲಿ ವ್ಯಾಪ್ತಿಯಲ್ಲಿ ಶೇ 30ರಿಂದ 40ರಷ್ಟು ಬಸ್ಗಳ ಸೇವೆ ವ್ಯತ್ಯಯವಾಗಿದೆ’ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದರು.</p>.<p>ಸೂಪರ್ ಮಾರ್ಕೆಟ್ ಪ್ರದೇಶದ ಶೇ90ರಷ್ಟು ವ್ಯಾಪಾರಿಗಳು ವಹಿವಾಟು ನಿಲ್ಲಿಸಿದ್ದರು. ಎಪಿಎಂಸಿಯಲ್ಲೂ ವಹಿವಾಟು ನಡೆಯಲಿಲ್ಲ. ನಗರದಲ್ಲಿನ ಪೆಟ್ರೋಲ್ ಬಂಕ್ಗಳೂ ‘ಬಂದ್’ ಬೆಂಬಲಿಸಿ ಮಧ್ಯಾಹ್ನ 3ರವರೆಗೆ ಗ್ರಾಹಕರಿಗೆ ಸೇವೆಯನ್ನು ಸ್ಥಗಿತಗೊಳಿಸಿದ್ದವು.</p>.<p>ಬಳಿಕ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದ ರೈತ ಮುಖಂಡರು ಟ್ರ್ಯಾಕ್ಟರ್ಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ‘ಕೇಂದ್ರ, ರಾಜ್ಯ ಸರ್ಕಾರಗಳು ಜಿಲ್ಲೆಯ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಅತಿವೃಷ್ಟಿ ಬಾಧಿತ ಕಲಬುರಗಿಯನ್ನು ‘ಹಸಿ ಬರಗಾಲ ಜಿಲ್ಲೆಯಾಗಿ ಘೋಷಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸೋಮವಾರ ನೀಡಿದ್ದ ‘ಕಲಬುರಗಿ ಬಂದ್’ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಕಲಬುರಗಿ ಕೇಂದ್ರ ಬಸ್ ನಿಲ್ದಾಣ ಹಾಗೂ ಪ್ರಮುಖ ಮಾರ್ಗಗಳಲ್ಲಿ ರೈತ ಪರ, ಕಾರ್ಮಿಕ ಪರ, ವಿದ್ಯಾರ್ಥಿ ಪರ, ಮಹಿಳಾ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದವು.</p>.<p>ನಗರದಲ್ಲಿ ಸಾರಿಗೆ ಬಸ್ಗಳ ಓಡಾಟ ಮಧ್ಯಾಹ್ನ ತನಕ ಬಂದ್ ಆಗಿತ್ತು. ಇದರಿಂದ ಪ್ರಯಾಣಿಕರು ಪರದಾಡಿದರು. ‘ನಗರದಲ್ಲಿ ವ್ಯಾಪ್ತಿಯಲ್ಲಿ ಶೇ 30ರಿಂದ 40ರಷ್ಟು ಬಸ್ಗಳ ಸೇವೆ ವ್ಯತ್ಯಯವಾಗಿದೆ’ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದರು.</p>.<p>ಸೂಪರ್ ಮಾರ್ಕೆಟ್ ಪ್ರದೇಶದ ಶೇ90ರಷ್ಟು ವ್ಯಾಪಾರಿಗಳು ವಹಿವಾಟು ನಿಲ್ಲಿಸಿದ್ದರು. ಎಪಿಎಂಸಿಯಲ್ಲೂ ವಹಿವಾಟು ನಡೆಯಲಿಲ್ಲ. ನಗರದಲ್ಲಿನ ಪೆಟ್ರೋಲ್ ಬಂಕ್ಗಳೂ ‘ಬಂದ್’ ಬೆಂಬಲಿಸಿ ಮಧ್ಯಾಹ್ನ 3ರವರೆಗೆ ಗ್ರಾಹಕರಿಗೆ ಸೇವೆಯನ್ನು ಸ್ಥಗಿತಗೊಳಿಸಿದ್ದವು.</p>.<p>ಬಳಿಕ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದ ರೈತ ಮುಖಂಡರು ಟ್ರ್ಯಾಕ್ಟರ್ಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ‘ಕೇಂದ್ರ, ರಾಜ್ಯ ಸರ್ಕಾರಗಳು ಜಿಲ್ಲೆಯ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>