‘ಈ ಪಂಚಾಯಿತಿಯ ಕೆಲ ಹಳ್ಳಿಗಳಲ್ಲಿ ನರೇಗಾ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿದ್ದು, ಅದರ ತನಿಖೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೇಯ ಮೂರು ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚಿಸಿದ್ದರು. ಅಕ್ರಮವಾಗಿ ಪಡೆದಿರುವ ಜಾಬ್ಕಾರ್ಡ್ಗಳನ್ನು ರದ್ದುಪಡಿಸಿಲ್ಲ. ಅಕ್ರಮದ ತನಿಖಾ ವರದಿಯನ್ನೂ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.