ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯ ಕೊಲೆ | ಪರಾರಿಯಾಗಿದ್ದ ಆರೋಪಿಯ ಬಂಧನ; ಸಿಗದ ರುಂಡ

Published 11 ಮೇ 2024, 2:28 IST
Last Updated 11 ಮೇ 2024, 2:28 IST
ಅಕ್ಷರ ಗಾತ್ರ

ಮಡಿಕೇರಿ: ಬಾಲಕಿಯನ್ನು ಕೊಂದು ರುಂಡದ ಸಮೇತ ಪರಾರಿಯಾಗಿದ್ದ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್‌ನನ್ನು (33) ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಆದರೆ ಬಾಲಕಿಯ ರುಂಡ ಪತ್ತೆಯಾಗಿಲ್ಲ.

ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದೆವು. ಈ ವೇಳೆ ಬೆಳಿಗ್ಗೆ ಗ್ರಾಮದ ಸಮೀಪ ಕಾಡಿನಲ್ಲಿ ಈತ ಅವಿತುಕೊಂಡಿರುವ ಕುರಿತ ಮಾಹಿತಿ ಲಭಿಸಿತು. ಕೂಡಲೇ ಆತನನ್ನು ಬಂಧಿಸಲಾಯಿತು. ಇನ್ನು ಬಾಲಕಿಯ ರುಂಡದ ಕುರಿತು ಇನ್ನಷ್ಟೇ ತನಿಖೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಿರುವುದು‌ ನಿಜ. ಆದರೆ ಬಾಲಕಿಯ ರುಂಡ ಇನ್ನೂ ಪತ್ತೆಯಾಗಿಲ್ಲ ಎಂದು ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT