<p><strong>ಕುಶಾಲನಗರ:</strong> ನಿಷೇಧಿತ ಮಾದಕ ವಸ್ತು ಹಾಗೂ ಗಾಂಜಾ ಮಾರಾಟ ಮತ್ತು ಬಳಕೆ ಮಾಡುತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪತ್ತೆ ಹಚ್ಚಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ, ಮಾಲು ವಶಪಡಿಸಿಕೊಂಡಿದ್ದಾರೆ.</p>.<p>ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆ.25 ರಂದು ಬೈಚನಹಳ್ಳಿಯ ಜಾತ್ರೆ ಮೈದಾನದ ಬಳಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬೈಚನಹಳ್ಳಿ ನಿವಾಸಿ ಪ್ರಮೋದ್ ಕುಮಾರ್ (34) ಮತ್ತು ರಾಧಕೃಷ್ಣ ಬಡಾವಣೆ ನಿವಾಸಿ ದರ್ಶನ್ ( 21) ಎಂವರನ್ನು ಬಂಧಿಸಿ , 25 ಗ್ರಾಂ ಗಾಂಜಾ ಹಾಗೂ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.</p>.<p>ಫೆ. 26 ರಂದು ಮತ್ತೊಂದು ಪ್ರಕರಣದಲ್ಲಿ ಬೈಚನಹಳ್ಳಿಯ ರೈತ ಸಹಕಾರ ಭವನದ ಬಳಿ ನಿಷೇಧಿತ ಮಾದಕ ವಸ್ತುವನ್ನು ಬಳಕೆ ಮಾಡುತ್ತಿದ್ ಸ್ಥಳೀಯರಾದ ರವಿಕುಮಾರ್, ನಿಖಿಲ್ ಕುಮಾರ್, ಯೋಗಾನಂದ ಬಡಾವಣೆ ನಿವಾಸಿ ಶರತ್ ನಾಯಕ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.</p>.<p> ಪಿಐ ಬಿ.ಜಿ ಪ್ರಕಾಶ್, ಪಿಎಸ್ಐ ಎಚ್.ಟಿ. ಗೀತಾ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.</p>.<p> ಯುವಕ, ಯುವತಿಯರು ಮಾದಕ ವ್ಯಸನಿಗಳಾವುದನ್ನು ತಡೆಯಲು ಡ್ರಗ್ಸ್, ಮಾದಕ ದ್ರವ್ಯ ಬಳಸುವ ಹಾಗೂ ಸರಬರಾಜು,ಮಾರಾಟ ಮಾಡುವ ವ್ಯಕ್ತಿಗಳ ಬಗ್ಗೆ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ. ತಂತ್ರಾಶದ ಮೂಲಕ ಸಾರ್ವಜನಿಕರು ಮಾಹಿತಿ ನೀಡಿ ಸಹಕರಿಸಬೇಕು ಮಾಹಿತಿ ಒದಗಿಸುವವರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ನಿಷೇಧಿತ ಮಾದಕ ವಸ್ತು ಹಾಗೂ ಗಾಂಜಾ ಮಾರಾಟ ಮತ್ತು ಬಳಕೆ ಮಾಡುತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪತ್ತೆ ಹಚ್ಚಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ, ಮಾಲು ವಶಪಡಿಸಿಕೊಂಡಿದ್ದಾರೆ.</p>.<p>ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆ.25 ರಂದು ಬೈಚನಹಳ್ಳಿಯ ಜಾತ್ರೆ ಮೈದಾನದ ಬಳಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬೈಚನಹಳ್ಳಿ ನಿವಾಸಿ ಪ್ರಮೋದ್ ಕುಮಾರ್ (34) ಮತ್ತು ರಾಧಕೃಷ್ಣ ಬಡಾವಣೆ ನಿವಾಸಿ ದರ್ಶನ್ ( 21) ಎಂವರನ್ನು ಬಂಧಿಸಿ , 25 ಗ್ರಾಂ ಗಾಂಜಾ ಹಾಗೂ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.</p>.<p>ಫೆ. 26 ರಂದು ಮತ್ತೊಂದು ಪ್ರಕರಣದಲ್ಲಿ ಬೈಚನಹಳ್ಳಿಯ ರೈತ ಸಹಕಾರ ಭವನದ ಬಳಿ ನಿಷೇಧಿತ ಮಾದಕ ವಸ್ತುವನ್ನು ಬಳಕೆ ಮಾಡುತ್ತಿದ್ ಸ್ಥಳೀಯರಾದ ರವಿಕುಮಾರ್, ನಿಖಿಲ್ ಕುಮಾರ್, ಯೋಗಾನಂದ ಬಡಾವಣೆ ನಿವಾಸಿ ಶರತ್ ನಾಯಕ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.</p>.<p> ಪಿಐ ಬಿ.ಜಿ ಪ್ರಕಾಶ್, ಪಿಎಸ್ಐ ಎಚ್.ಟಿ. ಗೀತಾ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.</p>.<p> ಯುವಕ, ಯುವತಿಯರು ಮಾದಕ ವ್ಯಸನಿಗಳಾವುದನ್ನು ತಡೆಯಲು ಡ್ರಗ್ಸ್, ಮಾದಕ ದ್ರವ್ಯ ಬಳಸುವ ಹಾಗೂ ಸರಬರಾಜು,ಮಾರಾಟ ಮಾಡುವ ವ್ಯಕ್ತಿಗಳ ಬಗ್ಗೆ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ. ತಂತ್ರಾಶದ ಮೂಲಕ ಸಾರ್ವಜನಿಕರು ಮಾಹಿತಿ ನೀಡಿ ಸಹಕರಿಸಬೇಕು ಮಾಹಿತಿ ಒದಗಿಸುವವರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>