ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇನೆ: ನಂಜೇಗೌಡ
Published : 16 ಸೆಪ್ಟೆಂಬರ್ 2025, 11:47 IST
Last Updated : 16 ಸೆಪ್ಟೆಂಬರ್ 2025, 11:47 IST
ಫಾಲೋ ಮಾಡಿ
Comments
‘ಅಚ್ಚರಿ ಉಂಟು ಮಾಡಿದೆ’
‘ಮತ ಮರು ಎಣಿಕೆಗೆ ತಕರಾರು ಇಲ್ಲ. ಆದರೆ, ನನ್ನ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್‌ ಆದೇಶ ಮಾಡಿದ್ದು ಬೇಸರ ಮೂಡಿಸಿದೆ. ಈ ಆದೇಶ ಅಚ್ಚರಿ ಉಂಟು ಮಾಡಿದೆ’ ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಕ್ಷೇತ್ರದ ಮತದಾರರು ಯಾವುದೇ ಕಾರಣಕ್ಕೂ ಗಾಬರಿ ಆಗುವ ಅವಶ್ಯವಿಲ್ಲ. ಧೈರ್ಯವಾಗಿ ಹೋರಾಟ ಮಾಡುತ್ತೇನೆ’ ಎಂದರು.
‘ಶಾಸಕ ಆಗುವುದು ಮುಖ್ಯವಲ್ಲ’
‘ಕಳ್ಳಕಾಕರಿಗೆ ಶಿಕ್ಷೆ ಆಗಬೇಕು ಎಂಬುದು ನನ್ನ ಉದ್ದೇಶ. ಈ ಹಿಂದೆ ಶಾಸಕನಾಗಿ ಅಧಿಕಾರ ಅನುಭವಿಸಿದ್ದೇನೆ. ಆದರೆ, ಕೆಲವರು ಮತ ಎಣಿಕೆ ಯಲ್ಲೂ ಅಕ್ರಮ ಎಸಗುವ ಮೂಲಕ ಪ್ರಜಾ ಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ’ ಎಂದು ಮಾಲೂರು ಕ್ಷೇತ್ರದ ಮಾಜಿ ಶಾಸಕ ಕೆ.ಎಸ್‌.ಮಂಜುನಾಥಗೌಡ ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT