<p><strong>ಕೋಲಾರ</strong>: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು. ಈ ಸಂಬಂಧ ದೂರು ಕೊಡಲಿದ್ದೇವೆ, ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.</p>.<p>ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ, ಪುತ್ರರಾದ ರಾಹುಲ್ ಖರ್ಗೆ, ಪುತ್ರ ಪ್ರಿಯಾಂಕ್ ಖರ್ಗೆ ಹಾಗೂ ಅಳಿಯ ರಾಧಾಕೃಷ್ಣ ಅವರಿಗೆ ಸೇರಿದ ಟ್ರಸ್ಟ್ ಇದಾಗಿದೆ’ ಎಂದರು.</p>.<p>ಜೈಲುಗಳು ರೆಸಾರ್ಟ್ಗಳಾಗಿವೆ: ‘ಕಾಂಗ್ರೆಸ್ ಅಧಿಕಾರಕ್ಕ ಬಂದ ಬಳಿಕ ಸುಲಿಗೆ ಹೆಚ್ಚಾಗಿದೆ. ಎಲ್ಲ ಜೈಲುಗಳು ರೆಸಾರ್ಟ್ಗಳಾಗಿವೆ. ಸೆರೆಮನೆಗಳು ಅರಮನೆಗಳಾಗಿವೆ’ ಎಂದು ಟೀಕಿಸಿದರು.</p>.<p>ಪಾರಿವಾಳ ಜೊತೆ ಕರಿ ಕಾಗೆಗಳಿಗೇನು ಕೆಲಸ?: ‘ರಾಜ್ಯ ಸರ್ಕಾರ ಬೀಳುತ್ತದೆ ಎಂಬುದು ಗ್ಯಾರಂಟಿಯಾಗಿ ಕಾಂಗ್ರೆಸ್ ಶಾಸಕರು ತಮ್ಮ ರೇಟ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಹಿಂದೆ ₹50 ಕೋಟಿ ಇದ್ದದ್ದು ಈಗ ₹100 ಕೋಟಿ ಆಗಿದೆ. ಅವರು ಬಂದರೂ ನಾವು ಸೇರಿಸಿಕೊಳ್ಳಲ್ಲ. ಪಾರಿವಾಳ ಜೊತೆ ಕರಿ ಕಾಗೆಗಳಿಗೇನು ಕೆಲಸ’ ಎಂದು ಪ್ರಶ್ನಿಸಿದರು.</p>.<p></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು. ಈ ಸಂಬಂಧ ದೂರು ಕೊಡಲಿದ್ದೇವೆ, ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.</p>.<p>ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ, ಪುತ್ರರಾದ ರಾಹುಲ್ ಖರ್ಗೆ, ಪುತ್ರ ಪ್ರಿಯಾಂಕ್ ಖರ್ಗೆ ಹಾಗೂ ಅಳಿಯ ರಾಧಾಕೃಷ್ಣ ಅವರಿಗೆ ಸೇರಿದ ಟ್ರಸ್ಟ್ ಇದಾಗಿದೆ’ ಎಂದರು.</p>.<p>ಜೈಲುಗಳು ರೆಸಾರ್ಟ್ಗಳಾಗಿವೆ: ‘ಕಾಂಗ್ರೆಸ್ ಅಧಿಕಾರಕ್ಕ ಬಂದ ಬಳಿಕ ಸುಲಿಗೆ ಹೆಚ್ಚಾಗಿದೆ. ಎಲ್ಲ ಜೈಲುಗಳು ರೆಸಾರ್ಟ್ಗಳಾಗಿವೆ. ಸೆರೆಮನೆಗಳು ಅರಮನೆಗಳಾಗಿವೆ’ ಎಂದು ಟೀಕಿಸಿದರು.</p>.<p>ಪಾರಿವಾಳ ಜೊತೆ ಕರಿ ಕಾಗೆಗಳಿಗೇನು ಕೆಲಸ?: ‘ರಾಜ್ಯ ಸರ್ಕಾರ ಬೀಳುತ್ತದೆ ಎಂಬುದು ಗ್ಯಾರಂಟಿಯಾಗಿ ಕಾಂಗ್ರೆಸ್ ಶಾಸಕರು ತಮ್ಮ ರೇಟ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಹಿಂದೆ ₹50 ಕೋಟಿ ಇದ್ದದ್ದು ಈಗ ₹100 ಕೋಟಿ ಆಗಿದೆ. ಅವರು ಬಂದರೂ ನಾವು ಸೇರಿಸಿಕೊಳ್ಳಲ್ಲ. ಪಾರಿವಾಳ ಜೊತೆ ಕರಿ ಕಾಗೆಗಳಿಗೇನು ಕೆಲಸ’ ಎಂದು ಪ್ರಶ್ನಿಸಿದರು.</p>.<p></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>