<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ಬಾಲ್ಯವಿವಾಹ ನೋಂದಣಿ ಮಾಡಿದ್ಧ ಜಿಲ್ಲೆಯ ಗಂಗಾವತಿಯ ಹಿಂದಿನ ಪ್ರಭಾರ ಉಪ ನೋಂದಣಾಧಿಕಾರಿ ಶ್ರೀಶೈಲ ಜಂಬಗಿ, ಸಾಕ್ಷಿದಾರರಾಗಿ ಸಹಿ ಮಾಡಿದ್ದವರ ವಿರುದ್ಧ ಗಂಗಾವತಿ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಾಗಿದೆ.</p>.<p>2024ರ ಸೆಪ್ಟೆಂಬರ್ 17ರಂದು ಕಾನೂನು ಪ್ರಕಾರ ವಿವಾಹವಾಗಿದೆ ಎಂದು ನೋಂದಣಿ ಮಾಡಲಾಗಿದೆ. ವಿವಾಹವಾದಾಗ ಬಾಲಕಿಗೆ 18 ವರ್ಷ, ಹುಡುಗನಿಗೆ 20 ವರ್ಷ ಆರು ತಿಂಗಳು ವಯಸ್ಸಾಗಿತ್ತು. ಈ ಬಗ್ಗೆ ಸೆ.5ರಂದು ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.</p>.<p>ಈ ವರದಿ ಉಲ್ಲೇಖಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯಕ್ರಮ ಸಂಯೋಜಕ ಶರಣಪ್ಪ ಸಿಂಗನಾಳ ದೂರು ನೀಡಿದ್ದರು. ನೋಂದಣಿಗೆ ಸಾಕ್ಷಿಯಾಗಿ ಸಹಿ ಮಾಡಿದ್ದ ಗಂಗಾವತಿಯ ಬಸವರಾಜ, ದೇವರಾಜ, ಶರಣಪ್ಪ ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.</p>.<div><blockquote>ಬಾಲ್ಯವಿವಾಹ ತಡೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದರೂ ಉಪನೋಂದಣಾಧಿಕಾರಿ ಕಾರ್ಯಾಲಯದಲ್ಲಿ ಮದುವೆ ನೋಂದಣಿ ಆಗಿರುವುದು ದುರದೃಷ್ಟಕರ. ಈ ಕುರಿತು ಆಯೋಗ ಕ್ರಮ ಕೈಗೊಳ್ಳಲಿದೆ.</blockquote><span class="attribution">– ಶೇಖರಗೌಡ ಜಿ. ರಾಮತ್ನಾಳ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ಬಾಲ್ಯವಿವಾಹ ನೋಂದಣಿ ಮಾಡಿದ್ಧ ಜಿಲ್ಲೆಯ ಗಂಗಾವತಿಯ ಹಿಂದಿನ ಪ್ರಭಾರ ಉಪ ನೋಂದಣಾಧಿಕಾರಿ ಶ್ರೀಶೈಲ ಜಂಬಗಿ, ಸಾಕ್ಷಿದಾರರಾಗಿ ಸಹಿ ಮಾಡಿದ್ದವರ ವಿರುದ್ಧ ಗಂಗಾವತಿ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಾಗಿದೆ.</p>.<p>2024ರ ಸೆಪ್ಟೆಂಬರ್ 17ರಂದು ಕಾನೂನು ಪ್ರಕಾರ ವಿವಾಹವಾಗಿದೆ ಎಂದು ನೋಂದಣಿ ಮಾಡಲಾಗಿದೆ. ವಿವಾಹವಾದಾಗ ಬಾಲಕಿಗೆ 18 ವರ್ಷ, ಹುಡುಗನಿಗೆ 20 ವರ್ಷ ಆರು ತಿಂಗಳು ವಯಸ್ಸಾಗಿತ್ತು. ಈ ಬಗ್ಗೆ ಸೆ.5ರಂದು ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.</p>.<p>ಈ ವರದಿ ಉಲ್ಲೇಖಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯಕ್ರಮ ಸಂಯೋಜಕ ಶರಣಪ್ಪ ಸಿಂಗನಾಳ ದೂರು ನೀಡಿದ್ದರು. ನೋಂದಣಿಗೆ ಸಾಕ್ಷಿಯಾಗಿ ಸಹಿ ಮಾಡಿದ್ದ ಗಂಗಾವತಿಯ ಬಸವರಾಜ, ದೇವರಾಜ, ಶರಣಪ್ಪ ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.</p>.<div><blockquote>ಬಾಲ್ಯವಿವಾಹ ತಡೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದರೂ ಉಪನೋಂದಣಾಧಿಕಾರಿ ಕಾರ್ಯಾಲಯದಲ್ಲಿ ಮದುವೆ ನೋಂದಣಿ ಆಗಿರುವುದು ದುರದೃಷ್ಟಕರ. ಈ ಕುರಿತು ಆಯೋಗ ಕ್ರಮ ಕೈಗೊಳ್ಳಲಿದೆ.</blockquote><span class="attribution">– ಶೇಖರಗೌಡ ಜಿ. ರಾಮತ್ನಾಳ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>