<p><strong>ಕೊಪ್ಪಳ</strong>: ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ ಅನುಶ್ರೀ ಮಡಿವಾಳರ (7) ಭಾನುವಾರ ಶವವಾಗಿ ಪತ್ತೆಯಾಗಿದ್ದಾಳೆ.</p><p>ಗ್ರಾಮದ 7ನೇ ವಾರ್ಡ್ನಲ್ಲಿ ವಾಸವಾಗಿದ್ದ ರಾಘವೇಂದ್ರ ಮಡಿವಾಳರ ಅವರ ಪುತ್ರಿ ಅನುಶ್ರೀ ಏ. 19ರಂದು ಮಧ್ಯಾಹ್ನ ಕಾಣೆಯಾಗಿದ್ದಳು. ಈ ಕುರಿತು ಕೊಪ್ಪಳ ಮಹಿಳಾ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿತ್ತು. ಭಾನುವಾರ ಮನೆ ಹತ್ತಿರದ ಪಾಳು ಜಾಗದಲ್ಲಿ ಚೀಲದಲ್ಲಿ ಶವವಾಗಿ ಆಕೆಯ ದೇಹ ಪತ್ತೆಯಾಗಿದೆ. </p><p>ಪಾಳು ಜಾಗದಲ್ಲಿ ಚೀಲದಿಂದ ವಾಸನೆ ಬರುತ್ತಿರುವುದನ್ನು ಗ್ರಹಿಸಿದ ಜನರಿಗೆ ಬಾಲಕಿ ಶವ ಕಂಡಿದೆ. ಬಾಲಕಿ ಶವ ಪತ್ತೆಯಾಗಿರುವ ಸ್ಥಳ ಕಿನ್ನಾಳದ ಗ್ರಾಮದ ಮಧ್ಯದಲ್ಲಿದೆ. ಅದರ ಸುತ್ತಲೂ ಮನೆಗಳಿವೆ. ಇಂಥ ಸ್ಥಳದಲ್ಲಿ ಶವ ಕಂಡಿದ್ದು ಜನರಲ್ಲಿ ಆಘಾತ ಮೂಡಿಸಿದೆ. </p><p><strong>ವ್ಯಾಪಕ ಪ್ರಚಾರ:</strong> ಬಾಲಕಿ ಪತ್ತೆಗಾಗಿ ಕಿನ್ನಾಳ ಪಂಚಾಯಿತಿಯ ವಾಹನಗಳ ಮೈಕ್ನಲ್ಲಿ ಪ್ರಚಾರ ಮಾಡಲಾಗಿತ್ತು. ಗ್ರಾಮದಲ್ಲಿರುವ ಕೆಲ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗಿತ್ತು.</p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಹೆಚ್ಚುವರಿ ಎಸ್.ಪಿ. ಹೇಮಂತಕುಮಾರ್, ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಸುರೇಶ ಡಿ. ಸೇರಿದಂತೆ ಹಲವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p><p>‘ಅನುಶ್ರೀಯನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿಡಲಾಗಿದೆ. ಪಾಳು ಮನೆಯೊಂದರಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬಳ್ಳಾರಿಯಿಂದ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ತಡರಾತ್ರಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಘಟನೆ ಕುರಿತು ಪ್ರತಿಕ್ರಿಯಿಸಿದ ಎಸ್.ಪಿ. ಯಶೋಧಾ ’ಕೆಲವರ ಮೇಲೆ ಸಂಶಯವಿದ್ದು ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ಘಟನೆಗೆ ಏನು ಕಾರಣ ಎನ್ನುವುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ ಅನುಶ್ರೀ ಮಡಿವಾಳರ (7) ಭಾನುವಾರ ಶವವಾಗಿ ಪತ್ತೆಯಾಗಿದ್ದಾಳೆ.</p><p>ಗ್ರಾಮದ 7ನೇ ವಾರ್ಡ್ನಲ್ಲಿ ವಾಸವಾಗಿದ್ದ ರಾಘವೇಂದ್ರ ಮಡಿವಾಳರ ಅವರ ಪುತ್ರಿ ಅನುಶ್ರೀ ಏ. 19ರಂದು ಮಧ್ಯಾಹ್ನ ಕಾಣೆಯಾಗಿದ್ದಳು. ಈ ಕುರಿತು ಕೊಪ್ಪಳ ಮಹಿಳಾ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿತ್ತು. ಭಾನುವಾರ ಮನೆ ಹತ್ತಿರದ ಪಾಳು ಜಾಗದಲ್ಲಿ ಚೀಲದಲ್ಲಿ ಶವವಾಗಿ ಆಕೆಯ ದೇಹ ಪತ್ತೆಯಾಗಿದೆ. </p><p>ಪಾಳು ಜಾಗದಲ್ಲಿ ಚೀಲದಿಂದ ವಾಸನೆ ಬರುತ್ತಿರುವುದನ್ನು ಗ್ರಹಿಸಿದ ಜನರಿಗೆ ಬಾಲಕಿ ಶವ ಕಂಡಿದೆ. ಬಾಲಕಿ ಶವ ಪತ್ತೆಯಾಗಿರುವ ಸ್ಥಳ ಕಿನ್ನಾಳದ ಗ್ರಾಮದ ಮಧ್ಯದಲ್ಲಿದೆ. ಅದರ ಸುತ್ತಲೂ ಮನೆಗಳಿವೆ. ಇಂಥ ಸ್ಥಳದಲ್ಲಿ ಶವ ಕಂಡಿದ್ದು ಜನರಲ್ಲಿ ಆಘಾತ ಮೂಡಿಸಿದೆ. </p><p><strong>ವ್ಯಾಪಕ ಪ್ರಚಾರ:</strong> ಬಾಲಕಿ ಪತ್ತೆಗಾಗಿ ಕಿನ್ನಾಳ ಪಂಚಾಯಿತಿಯ ವಾಹನಗಳ ಮೈಕ್ನಲ್ಲಿ ಪ್ರಚಾರ ಮಾಡಲಾಗಿತ್ತು. ಗ್ರಾಮದಲ್ಲಿರುವ ಕೆಲ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗಿತ್ತು.</p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಹೆಚ್ಚುವರಿ ಎಸ್.ಪಿ. ಹೇಮಂತಕುಮಾರ್, ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಸುರೇಶ ಡಿ. ಸೇರಿದಂತೆ ಹಲವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p><p>‘ಅನುಶ್ರೀಯನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿಡಲಾಗಿದೆ. ಪಾಳು ಮನೆಯೊಂದರಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬಳ್ಳಾರಿಯಿಂದ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ತಡರಾತ್ರಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಘಟನೆ ಕುರಿತು ಪ್ರತಿಕ್ರಿಯಿಸಿದ ಎಸ್.ಪಿ. ಯಶೋಧಾ ’ಕೆಲವರ ಮೇಲೆ ಸಂಶಯವಿದ್ದು ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ಘಟನೆಗೆ ಏನು ಕಾರಣ ಎನ್ನುವುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>