<p><strong>ಕೊಪ್ಪಳ:</strong> ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮೂರನೇ ಆರೋಪಿಯನ್ನು ಕೊಪ್ಪಳ ಜಿಲ್ಲೆ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದು, ಗಂಗಾವತಿಗೆ ಕರೆ ತಂದಿದ್ದಾರೆ.</p><p>ಗಂಗಾವತಿಯ ಸಾಯಿ ನಗರದ ನಿವಾಸಿ ಶರಣಬಸವ ಬಂಧಿತ ಆರೋಪಿ. ಘಟನೆ ನಡೆದ ಮರುದಿನ ಇದೇ ಬಡಾವಣೆಯ ಮಲ್ಲೇಶ ಹಂದಿ ಹಾಗೂ ಚೇತನ್ ಸಾಯಿ ಎಂಬುವರನ್ನು ಬಂಧಿಸಲಾಗಿತ್ತು. ಈ ಮೂವರೂ ಆರೋಪಿಗಳು ಗಾರೆ ಕೆಲಸ ಮಾಡುತ್ತಿದ್ದರು.</p><p>'ಮೂರನೆ ಆರೋಪಿ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯ ಸೇವನೆ ಮಾಡಿದ್ದರು ಎನ್ನುವುದು ಸಾಬೀತಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p><p>'ಸಾಣಾಪುರ, ಆನೆಗೊಂದಿ ಭಾಗದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲಿ ಮದ್ಯ ಅಕ್ರಮ ಮಾರಾಟ, ಮಾದಕ ವಸ್ತುಗಳ ಮಾರಾಟವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ' ಎಂದರು.</p><p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್ ಇದ್ದರು.</p>.ಅತ್ಯಾಚಾರ ಪ್ರಕರಣ: ಗಂಗಾವತಿ ರೆಸಾರ್ಟ್ಗಳ ಮಾಲೀಕರಿಗೆ ಕಟ್ಟೆಚ್ಚರ.ಸಾಣಾಪುರ | ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ: ಇಬ್ಬರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮೂರನೇ ಆರೋಪಿಯನ್ನು ಕೊಪ್ಪಳ ಜಿಲ್ಲೆ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದು, ಗಂಗಾವತಿಗೆ ಕರೆ ತಂದಿದ್ದಾರೆ.</p><p>ಗಂಗಾವತಿಯ ಸಾಯಿ ನಗರದ ನಿವಾಸಿ ಶರಣಬಸವ ಬಂಧಿತ ಆರೋಪಿ. ಘಟನೆ ನಡೆದ ಮರುದಿನ ಇದೇ ಬಡಾವಣೆಯ ಮಲ್ಲೇಶ ಹಂದಿ ಹಾಗೂ ಚೇತನ್ ಸಾಯಿ ಎಂಬುವರನ್ನು ಬಂಧಿಸಲಾಗಿತ್ತು. ಈ ಮೂವರೂ ಆರೋಪಿಗಳು ಗಾರೆ ಕೆಲಸ ಮಾಡುತ್ತಿದ್ದರು.</p><p>'ಮೂರನೆ ಆರೋಪಿ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯ ಸೇವನೆ ಮಾಡಿದ್ದರು ಎನ್ನುವುದು ಸಾಬೀತಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p><p>'ಸಾಣಾಪುರ, ಆನೆಗೊಂದಿ ಭಾಗದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲಿ ಮದ್ಯ ಅಕ್ರಮ ಮಾರಾಟ, ಮಾದಕ ವಸ್ತುಗಳ ಮಾರಾಟವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ' ಎಂದರು.</p><p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್ ಇದ್ದರು.</p>.ಅತ್ಯಾಚಾರ ಪ್ರಕರಣ: ಗಂಗಾವತಿ ರೆಸಾರ್ಟ್ಗಳ ಮಾಲೀಕರಿಗೆ ಕಟ್ಟೆಚ್ಚರ.ಸಾಣಾಪುರ | ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ: ಇಬ್ಬರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>