<p><strong>ಕೊಪ್ಪಳ:</strong> ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಡಿ. 12ರಂದು ಹನುಮಮಾಲೆ ಧರಿಸಿ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ನಡೆಯುವ ಹನುಮಮಾಲೆ ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಪಂಪಾ ಸರೋವರದಲ್ಲಿ ಅವರು ಮಾಲೆ ಧರಿಸುವರು.</p><p>ಈ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕ ಜನಾರ್ದನ ರೆಡ್ಡಿ 'ವಿಜಯೇಂದ್ರ ಕಳೆದ ವರ್ಷವೇ ಮಾಲೆ ಧರಿಸಬೇಕಿತ್ತು. ಆಗ ಸಾಧ್ಯವಾಗಿರಲಿಲ್ಲ ಈಗ ರಾಜ್ಯಾಧ್ಯಕ್ಷರ ಜೊತೆಗೆ ಪಕ್ಷದ ಯುವ ಘಟಕದ ಎಲ್ಲ ಜಿಲ್ಲೆಗಳ ಪ್ರಮುಖರು ಮಾಲೆ ಧರಿಸಿ ಅಂಜನಾದ್ರಿಗೆ ಬರಲಿದ್ದಾರೆ' ಎಂದು ತಿಳಿಸಿದರು.</p><p>'ಪ್ರತಿವರ್ಷ ಹನುಮಮಾಲೆ ವಿಸರ್ಜನೆ ದಿನ ಒಪ್ಪೊತ್ತು ಮಾತ್ರ ಊಟ ನೀಡಲಾಗುತ್ತಿತ್ತು. ಈ ಬಾರಿ ಡಿ. 11ರಿಂದ 13ರ ತನಕ ಮೂರೂ ಹೊತ್ತು ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಗಂಗಾವತಿಯಿಂದ ಅಂಜನಾದ್ರಿಗೆ ತೆರಳುವ ಮಾರ್ಗದಲ್ಲಿ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ' ಎಂದು ಹೇಳಿದರು.</p><p><strong>ಒಟ್ಟು ₹240 ಕೋಟಿ</strong> </p><p>ಅಂಜನಾದ್ರಿ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮೊದಲು ₹100 ಕೋಟಿ ಘೋಷಿಸಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ₹100 ಕೋಟಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ₹40 ಕೋಟಿ ಹೀಗೆ ಒಟ್ಟು ₹240 ಕೋಟಿ ಅನುದಾನವಿದೆ. ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಡಿ. 12ರಂದು ಹನುಮಮಾಲೆ ಧರಿಸಿ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ನಡೆಯುವ ಹನುಮಮಾಲೆ ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಪಂಪಾ ಸರೋವರದಲ್ಲಿ ಅವರು ಮಾಲೆ ಧರಿಸುವರು.</p><p>ಈ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕ ಜನಾರ್ದನ ರೆಡ್ಡಿ 'ವಿಜಯೇಂದ್ರ ಕಳೆದ ವರ್ಷವೇ ಮಾಲೆ ಧರಿಸಬೇಕಿತ್ತು. ಆಗ ಸಾಧ್ಯವಾಗಿರಲಿಲ್ಲ ಈಗ ರಾಜ್ಯಾಧ್ಯಕ್ಷರ ಜೊತೆಗೆ ಪಕ್ಷದ ಯುವ ಘಟಕದ ಎಲ್ಲ ಜಿಲ್ಲೆಗಳ ಪ್ರಮುಖರು ಮಾಲೆ ಧರಿಸಿ ಅಂಜನಾದ್ರಿಗೆ ಬರಲಿದ್ದಾರೆ' ಎಂದು ತಿಳಿಸಿದರು.</p><p>'ಪ್ರತಿವರ್ಷ ಹನುಮಮಾಲೆ ವಿಸರ್ಜನೆ ದಿನ ಒಪ್ಪೊತ್ತು ಮಾತ್ರ ಊಟ ನೀಡಲಾಗುತ್ತಿತ್ತು. ಈ ಬಾರಿ ಡಿ. 11ರಿಂದ 13ರ ತನಕ ಮೂರೂ ಹೊತ್ತು ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಗಂಗಾವತಿಯಿಂದ ಅಂಜನಾದ್ರಿಗೆ ತೆರಳುವ ಮಾರ್ಗದಲ್ಲಿ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ' ಎಂದು ಹೇಳಿದರು.</p><p><strong>ಒಟ್ಟು ₹240 ಕೋಟಿ</strong> </p><p>ಅಂಜನಾದ್ರಿ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮೊದಲು ₹100 ಕೋಟಿ ಘೋಷಿಸಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ₹100 ಕೋಟಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ₹40 ಕೋಟಿ ಹೀಗೆ ಒಟ್ಟು ₹240 ಕೋಟಿ ಅನುದಾನವಿದೆ. ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>