<p><strong>ಮಂಡ್ಯ</strong>: ಗುಣಮಟ್ಟಕ್ಕೆ ಹೆಸರುವಾಸಿಯಾಗಿರುವ ‘ನಂದಿನಿ ಹಾಲು’ ಈಗ ರಾಜ್ಯದ ಆಚೆಗೂ ಕಾಲಿರಿಸಿದ್ದು, 6 ರಾಜ್ಯಗಳಲ್ಲಿ ತನ್ನ ಮಾರುಕಟ್ಟೆ ವಿಸ್ತರಿಸಿಕೊಂಡು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. </p>.<p>ಹೌದು, ಈಗ ಹಳ್ಳಿಯಿಂದ ದಿಲ್ಲಿವರೆಗೂ ‘ನಂದಿನಿ’ ಕ್ಷೀರಧಾರೆ ಹರಿಯುತ್ತಿದೆ. ‘ರಾಷ್ಟ್ರದ ರಾಜಧಾನಿ’ ದೆಹಲಿಗೆ ಮಂಡ್ಯದಿಂದ ನಂದಿನಿ ಹಾಲು ಪೂರೈಕೆಯಾದರೆ, ‘ವಾಣಿಜ್ಯ ರಾಜಧಾನಿ’ ಮುಂಬೈಗೆ ತುಮಕೂರಿನಿಂದ ಹಾಲು ಸಾಗಣೆಯಾಗುತ್ತಿದೆ.</p>.<p>‘ಮುತ್ತುಗಳ ನಗರ’ ಹೈದರಾಬಾದ್ಗೆ ಹಾಸನದಿಂದ, ಚೆನ್ನೈ ಮತ್ತು ಕೇರಳಕ್ಕೆ ಮೈಸೂರಿನಿಂದ, ತಮಿಳುನಾಡಿನ ನೀಲಗಿರಿ ಮತ್ತು ಕೇರಳಕ್ಕೆ ಚಾಮರಾಜನಗರದಿಂದ, ಗೋವಾ ಮತ್ತು ಪುಣೆಗೆ ಬೆಳಗಾವಿಯಿಂದ, ವಿದರ್ಭ ಮತ್ತು ಸೊಲ್ಲಾಪುರಕ್ಕೆ (ಮಹಾರಾಷ್ಟ್ರ) ವಿಜಯಪುರದಿಂದ ನಂದಿನಿ ಹಾಲು ಪೂರೈಕೆಯಾಗುತ್ತಿದೆ. </p>.<p>ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ (ಕೆ.ಎಂ.ಎಫ್) ‘ನಂದಿನಿ ಬ್ರ್ಯಾಂಡ್’ ವಿಸ್ತರಿಸುವ ಉದ್ದೇಶದಿಂದ ರಾಜ್ಯದ ವಿವಿಧ ಹಾಲು ಉತ್ಪಾದಕರ ಒಕ್ಕೂಟಗಳಿಂದ 6 ರಾಜ್ಯಗಳಿಗೆ ನಿತ್ಯ 4.35 ಲಕ್ಷ ಲೀಟರ್ ಹಾಲು, 66 ಸಾವಿರ ಲೀಟರ್ ಮೊಸರು ಪೂರೈಸುತ್ತಿದೆ. ಇದರಿಂದ ನಿತ್ಯ 2.47 ಕೋಟಿ ವಹಿವಾಟು ನಡೆಸುತ್ತಿದೆ. ತಿಂಗಳಿಗೆ ಸರಾಸರಿ ₹75 ಕೋಟಿ ವಹಿವಾಟು ಇದೆ. </p>.<h2><strong>26 ಲಕ್ಷ ಹಾಲು ಉತ್ಪಾದಕರು:</strong></h2>.<p>ರಾಜ್ಯದ 15 ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳಡಿ, ಗ್ರಾಮೀಣ ಮಟ್ಟದಲ್ಲಿ ಕಾರ್ಯಾಚರಣೆಯಲ್ಲಿರುವ 15,779ಕ್ಕೂ ಹೆಚ್ಚಿನ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕೆಎಂಎಫ್ 26.89 ಲಕ್ಷ ಹಾಲು ಉತ್ಪಾದಕರನ್ನು ಹೊಂದಿದೆ.</p>.<p>‘ಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಶ್ರೇಷ್ಠತೆ’ ಎಂಬುದು ಕೆಎಂಎಫ್ ಧ್ಯೇಯವಾಕ್ಯ. ಪ್ರಸ್ತುತ ದೇಶದಲ್ಲಿಯೇ ಸಹಕಾರಿ ಹೈನು ಉದ್ಯಮದಲ್ಲಿ ಕೆಎಂಎಫ್ ಎರಡನೇ ಸ್ಥಾನದಲ್ಲಿದ್ದು, ದಕ್ಷಿಣ ಭಾರತದಲ್ಲಿ ಹಾಲು ಶೇಖರಣೆ ಹಾಗೂ ಮಾರಾಟದಲ್ಲಿ ಮೊದಲ ಸ್ಥಾನದಲ್ಲಿದೆ.</p>.<h2>ಮಂಡ್ಯಕ್ಕೆ 4ನೇ ಸ್ಥಾನ:</h2>.<p>ನಿತ್ಯ ಹಾಲು ಸಂಗ್ರಹಣೆಯಲ್ಲಿ ರಾಜ್ಯದಲ್ಲಿರುವ 15 ಹಾಲು ಒಕ್ಕೂಟಗಳ ಪೈಕಿ ಬೆಂಗಳೂರು (ಪ್ರಥಮ), ಹಾಸನ (ದ್ವಿತೀಯ), ಕೋಲಾರ (ತೃತೀಯ) ಹಾಗೂ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) 4ನೇ ಸ್ಥಾನದಲ್ಲಿದೆ. </p>.<p>ಮೈಸೂರು 6ನೇ ಸ್ಥಾನ ಮತ್ತು ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ 9ನೇ ಸ್ಥಾನದಲ್ಲಿದೆ. </p>.<div><blockquote>ರಾಜ್ಯದ ಹೆಮ್ಮೆಯ ನಂದಿನಿ ಹಾಲಿಗೆ ದೆಹಲಿಯಲ್ಲಿ ಉತ್ತಮ ಬೇಡಿಕೆ ಇದೆ. ಪ್ರಬಲ ಪೈಪೋಟಿ ನಡುವೆಯೂ ತನ್ನ ಗುಣಮಟ್ಟದಿಂದ ಮಾರುಕಟ್ಟೆ ವಿಸ್ತರಿಸಿಕೊಳ್ಳುತ್ತಿದೆ</blockquote><span class="attribution">ಬಿ.ಬೋರೇಗೌಡ ಅಧ್ಯಕ್ಷ ಮನ್ಮುಲ್ ಮಂಡ್ಯ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಗುಣಮಟ್ಟಕ್ಕೆ ಹೆಸರುವಾಸಿಯಾಗಿರುವ ‘ನಂದಿನಿ ಹಾಲು’ ಈಗ ರಾಜ್ಯದ ಆಚೆಗೂ ಕಾಲಿರಿಸಿದ್ದು, 6 ರಾಜ್ಯಗಳಲ್ಲಿ ತನ್ನ ಮಾರುಕಟ್ಟೆ ವಿಸ್ತರಿಸಿಕೊಂಡು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. </p>.<p>ಹೌದು, ಈಗ ಹಳ್ಳಿಯಿಂದ ದಿಲ್ಲಿವರೆಗೂ ‘ನಂದಿನಿ’ ಕ್ಷೀರಧಾರೆ ಹರಿಯುತ್ತಿದೆ. ‘ರಾಷ್ಟ್ರದ ರಾಜಧಾನಿ’ ದೆಹಲಿಗೆ ಮಂಡ್ಯದಿಂದ ನಂದಿನಿ ಹಾಲು ಪೂರೈಕೆಯಾದರೆ, ‘ವಾಣಿಜ್ಯ ರಾಜಧಾನಿ’ ಮುಂಬೈಗೆ ತುಮಕೂರಿನಿಂದ ಹಾಲು ಸಾಗಣೆಯಾಗುತ್ತಿದೆ.</p>.<p>‘ಮುತ್ತುಗಳ ನಗರ’ ಹೈದರಾಬಾದ್ಗೆ ಹಾಸನದಿಂದ, ಚೆನ್ನೈ ಮತ್ತು ಕೇರಳಕ್ಕೆ ಮೈಸೂರಿನಿಂದ, ತಮಿಳುನಾಡಿನ ನೀಲಗಿರಿ ಮತ್ತು ಕೇರಳಕ್ಕೆ ಚಾಮರಾಜನಗರದಿಂದ, ಗೋವಾ ಮತ್ತು ಪುಣೆಗೆ ಬೆಳಗಾವಿಯಿಂದ, ವಿದರ್ಭ ಮತ್ತು ಸೊಲ್ಲಾಪುರಕ್ಕೆ (ಮಹಾರಾಷ್ಟ್ರ) ವಿಜಯಪುರದಿಂದ ನಂದಿನಿ ಹಾಲು ಪೂರೈಕೆಯಾಗುತ್ತಿದೆ. </p>.<p>ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ (ಕೆ.ಎಂ.ಎಫ್) ‘ನಂದಿನಿ ಬ್ರ್ಯಾಂಡ್’ ವಿಸ್ತರಿಸುವ ಉದ್ದೇಶದಿಂದ ರಾಜ್ಯದ ವಿವಿಧ ಹಾಲು ಉತ್ಪಾದಕರ ಒಕ್ಕೂಟಗಳಿಂದ 6 ರಾಜ್ಯಗಳಿಗೆ ನಿತ್ಯ 4.35 ಲಕ್ಷ ಲೀಟರ್ ಹಾಲು, 66 ಸಾವಿರ ಲೀಟರ್ ಮೊಸರು ಪೂರೈಸುತ್ತಿದೆ. ಇದರಿಂದ ನಿತ್ಯ 2.47 ಕೋಟಿ ವಹಿವಾಟು ನಡೆಸುತ್ತಿದೆ. ತಿಂಗಳಿಗೆ ಸರಾಸರಿ ₹75 ಕೋಟಿ ವಹಿವಾಟು ಇದೆ. </p>.<h2><strong>26 ಲಕ್ಷ ಹಾಲು ಉತ್ಪಾದಕರು:</strong></h2>.<p>ರಾಜ್ಯದ 15 ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳಡಿ, ಗ್ರಾಮೀಣ ಮಟ್ಟದಲ್ಲಿ ಕಾರ್ಯಾಚರಣೆಯಲ್ಲಿರುವ 15,779ಕ್ಕೂ ಹೆಚ್ಚಿನ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕೆಎಂಎಫ್ 26.89 ಲಕ್ಷ ಹಾಲು ಉತ್ಪಾದಕರನ್ನು ಹೊಂದಿದೆ.</p>.<p>‘ಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಶ್ರೇಷ್ಠತೆ’ ಎಂಬುದು ಕೆಎಂಎಫ್ ಧ್ಯೇಯವಾಕ್ಯ. ಪ್ರಸ್ತುತ ದೇಶದಲ್ಲಿಯೇ ಸಹಕಾರಿ ಹೈನು ಉದ್ಯಮದಲ್ಲಿ ಕೆಎಂಎಫ್ ಎರಡನೇ ಸ್ಥಾನದಲ್ಲಿದ್ದು, ದಕ್ಷಿಣ ಭಾರತದಲ್ಲಿ ಹಾಲು ಶೇಖರಣೆ ಹಾಗೂ ಮಾರಾಟದಲ್ಲಿ ಮೊದಲ ಸ್ಥಾನದಲ್ಲಿದೆ.</p>.<h2>ಮಂಡ್ಯಕ್ಕೆ 4ನೇ ಸ್ಥಾನ:</h2>.<p>ನಿತ್ಯ ಹಾಲು ಸಂಗ್ರಹಣೆಯಲ್ಲಿ ರಾಜ್ಯದಲ್ಲಿರುವ 15 ಹಾಲು ಒಕ್ಕೂಟಗಳ ಪೈಕಿ ಬೆಂಗಳೂರು (ಪ್ರಥಮ), ಹಾಸನ (ದ್ವಿತೀಯ), ಕೋಲಾರ (ತೃತೀಯ) ಹಾಗೂ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) 4ನೇ ಸ್ಥಾನದಲ್ಲಿದೆ. </p>.<p>ಮೈಸೂರು 6ನೇ ಸ್ಥಾನ ಮತ್ತು ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ 9ನೇ ಸ್ಥಾನದಲ್ಲಿದೆ. </p>.<div><blockquote>ರಾಜ್ಯದ ಹೆಮ್ಮೆಯ ನಂದಿನಿ ಹಾಲಿಗೆ ದೆಹಲಿಯಲ್ಲಿ ಉತ್ತಮ ಬೇಡಿಕೆ ಇದೆ. ಪ್ರಬಲ ಪೈಪೋಟಿ ನಡುವೆಯೂ ತನ್ನ ಗುಣಮಟ್ಟದಿಂದ ಮಾರುಕಟ್ಟೆ ವಿಸ್ತರಿಸಿಕೊಳ್ಳುತ್ತಿದೆ</blockquote><span class="attribution">ಬಿ.ಬೋರೇಗೌಡ ಅಧ್ಯಕ್ಷ ಮನ್ಮುಲ್ ಮಂಡ್ಯ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>