<p><strong>ಮದ್ದೂರು</strong>: ‘ಮಾಜಿ ಸಂಸದ ಪ್ರಜ್ಜಲ್ ರೇವಣ್ಣ ಜೈಲು ಪಾಲಾಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಕಾರಣ’ ಎಂದು ಶಾಸಕ ಕೆ.ಎಂ.ಉದಯ ಆರೋಪ ಮಾಡಿದರು. </p><p>ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನಿಖಿಲ್ ಕುಮಾರಸ್ವಾಮಿ ಅವರನ್ನು ಜನ 3 ಬಾರಿ ತಿರಸ್ಕರಿದ್ದಾರೆ. ಅವರು ಏನೂ ಆಗಲಿಲ್ಲವಲ್ಲ ಎಂಬ ಕಾರಣಕ್ಕೆ ಅವರ ಅಣ್ಣನ ಮಗ ಪ್ರಜ್ಜಲ್ ರೇವಣ್ಣ ಅವರನ್ನೇ ಕುಮಾರಸ್ವಾಮಿ ಜೈಲಿಗೆ ಹಾಕಿಸಿದರು’ ಎಂದು ದೂರಿದರು. </p><p>‘ಪ್ರಜ್ವಲ್ ಜನಪ್ರಿಯತೆ ಸಹಿಸದೆ ಕುಮಾರಸ್ವಾಮಿ ಅವರು ಚುನಾವಣಾ ವೇಳೆ ಪೆನ್ ಡ್ರೈವ್ಗಳನ್ನು ಸೃಷ್ಟಿಸಿ ಜೈಲಿಗೆ ಹಾಕಿಸಿದರು. ಮಾಜಿ ಪ್ರಧಾನಿ ದೇವೇಗೌಡರು ಮನಸು ಮಾಡಿದ್ದರೆ ಹೊರಗೆ ತರಬಹುದಿತ್ತು. ಆದರೆ, ಕುಮಾರಸ್ವಾಮಿ ಕುಮ್ಮಕ್ಕಿನಿಂದ ಪ್ರಜ್ಜಲ್ ರೇವಣ್ಣ ಜೈಲಿನಿಂದ ಹೊರ ಬರಲು ಆಗುತ್ತಿಲ್ಲ’ ಎಂದು ಆರೋಪಿಸಿದರು. </p><p>ಕುಮಾರಸ್ವಾಮಿ ಅವರು ಮದ್ದೂರಿಗೆ ಬಂದು ‘ಗೆಜ್ಜಲಗೆರೆಯ ಜನರನ್ನು ಪ್ರತಿಭಟನೆಗೆ ಪ್ರಚೋದನೆ ನೀಡುತ್ತಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ‘ಮಾಜಿ ಸಂಸದ ಪ್ರಜ್ಜಲ್ ರೇವಣ್ಣ ಜೈಲು ಪಾಲಾಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಕಾರಣ’ ಎಂದು ಶಾಸಕ ಕೆ.ಎಂ.ಉದಯ ಆರೋಪ ಮಾಡಿದರು. </p><p>ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನಿಖಿಲ್ ಕುಮಾರಸ್ವಾಮಿ ಅವರನ್ನು ಜನ 3 ಬಾರಿ ತಿರಸ್ಕರಿದ್ದಾರೆ. ಅವರು ಏನೂ ಆಗಲಿಲ್ಲವಲ್ಲ ಎಂಬ ಕಾರಣಕ್ಕೆ ಅವರ ಅಣ್ಣನ ಮಗ ಪ್ರಜ್ಜಲ್ ರೇವಣ್ಣ ಅವರನ್ನೇ ಕುಮಾರಸ್ವಾಮಿ ಜೈಲಿಗೆ ಹಾಕಿಸಿದರು’ ಎಂದು ದೂರಿದರು. </p><p>‘ಪ್ರಜ್ವಲ್ ಜನಪ್ರಿಯತೆ ಸಹಿಸದೆ ಕುಮಾರಸ್ವಾಮಿ ಅವರು ಚುನಾವಣಾ ವೇಳೆ ಪೆನ್ ಡ್ರೈವ್ಗಳನ್ನು ಸೃಷ್ಟಿಸಿ ಜೈಲಿಗೆ ಹಾಕಿಸಿದರು. ಮಾಜಿ ಪ್ರಧಾನಿ ದೇವೇಗೌಡರು ಮನಸು ಮಾಡಿದ್ದರೆ ಹೊರಗೆ ತರಬಹುದಿತ್ತು. ಆದರೆ, ಕುಮಾರಸ್ವಾಮಿ ಕುಮ್ಮಕ್ಕಿನಿಂದ ಪ್ರಜ್ಜಲ್ ರೇವಣ್ಣ ಜೈಲಿನಿಂದ ಹೊರ ಬರಲು ಆಗುತ್ತಿಲ್ಲ’ ಎಂದು ಆರೋಪಿಸಿದರು. </p><p>ಕುಮಾರಸ್ವಾಮಿ ಅವರು ಮದ್ದೂರಿಗೆ ಬಂದು ‘ಗೆಜ್ಜಲಗೆರೆಯ ಜನರನ್ನು ಪ್ರತಿಭಟನೆಗೆ ಪ್ರಚೋದನೆ ನೀಡುತ್ತಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>