<p><strong>ಮಂಡ್ಯ:</strong> ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ 120ಕ್ಕೇರಿದೆ. ಇದಕ್ಕೆ ಕಾರಣವಾಗಿದೆ ಎನ್ನಲಾದ, ಮಳವಳ್ಳಿ ಪಟ್ಟಣದ ಹೊರವಲಯದಲ್ಲಿರುವ ಲಕ್ಷ್ಮೀನರಸಿಂಹಸ್ವಾಮಿ ಹೋಟೆಲ್ ಬಂದ್ ಮಾಡಿಸಲಾಗಿದೆ.</p>.<p>ಊಟ ಸೇವಿಸಿದ್ದ 40 ಮಕ್ಕಳು, ಊಟ ಕಳುಹಿಸಿದ್ದ ಉದ್ಯಮಿಯ 61 ಸಂಬಂಧಿಕರು ಹಾಗೂ ಹೋಟೆಲ್ನಲ್ಲಿ ಊಟ ಖರೀದಿಸಿದ್ದ 20ಕ್ಕೂ ಅಧಿಕ ಕೃಷಿ ಕೂಲಿಕಾರ್ಮಿಕರಿಗೆ ವಾಂತಿ–ಭೇದಿಯಾಗಿ ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣದಿಂದ ಸೋಮವಾರ ಹೋಟೆಲ್ ಮುಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಭಾನುವಾರ ಮೇಘಾಲಯದ ವಿದ್ಯಾರ್ಥಿ ಕಿರ್ಶನ್ ಲ್ಯಾಂಗ್ (13) ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ. ಒಟ್ಟು ನಾಲ್ವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ಜನರಲ್ ವಾರ್ಡ್ನಲ್ಲಿದ್ದಾರೆ.</p>.<p>ಉದ್ಯಮಿ ಪುಷ್ಪೇಂದ್ರಕುಮಾರ್ ಅವರು ಶುಕ್ರವಾರ ಹೋಳಿ ಆಚರಣೆಗಾಗಿ 150 ಮಂದಿಗೆ ಊಟ ತಯಾರಿಸಲು ಹೇಳಿದ್ದರು. ಊಟ ಸೇವಿಸಿದ್ದ ಉದ್ಯಮಿಯ ಸಂಬಂಧಿಕರಲ್ಲಿ 61 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಮತ್ತೊಂದೆಡೆ, ಆ ದಿನ ಉದ್ಯಮಿಗೆ ಆಹಾರ ನೀಡಿ, ಉಳಿದದ್ದನ್ನು ಹೋಟೆಲ್ನಲ್ಲಿ ಮಾರಲಾಗಿತ್ತು. ಆ ಊಟ ಮಾಡಿದ 20ಕ್ಕೂ ಅಧಿಕ ಮಂದಿ ಸಹ ಅಸ್ವಸ್ಥಗೊಂಡಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.</p>.<p>ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೋಮವಾರ ಗದ್ದೆಗಳ ಬಳಿಗೆ ತೆರಳಿ ಅಲ್ಲಿ ಬಿಸಾಡಿದ್ದ ಸ್ಪಲ್ಪ ಪ್ರಮಾಣದ ಊಟವನ್ನು ಸಂಗ್ರಹಿಸಿ, ಪ್ರಯೋಗಾಲಕ್ಕೆ ಕಳುಹಿಸಿ ಕೊಟ್ಟಿದ್ದಾರೆ. ಕೂಲಿಕಾರ್ಮಿಕರಿಂದ ಮಾಹಿತಿ ಪಡೆದಿದ್ದಾರೆ.</p>.<p>ಡಿವೈಎಸ್ಪಿ ವಿ.ಕೃಷ್ಣಪ್ಪ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ. ಭಾನುವಾರ ಬಂಧಿತರಾಗಿದ್ದ ಹೋಟೆಲ್ ಮಾಲೀಕ ಸಿದ್ದರಾಜು, ಲಂಕೇಶ್, ಅಭಿಷೇಕ್ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ 120ಕ್ಕೇರಿದೆ. ಇದಕ್ಕೆ ಕಾರಣವಾಗಿದೆ ಎನ್ನಲಾದ, ಮಳವಳ್ಳಿ ಪಟ್ಟಣದ ಹೊರವಲಯದಲ್ಲಿರುವ ಲಕ್ಷ್ಮೀನರಸಿಂಹಸ್ವಾಮಿ ಹೋಟೆಲ್ ಬಂದ್ ಮಾಡಿಸಲಾಗಿದೆ.</p>.<p>ಊಟ ಸೇವಿಸಿದ್ದ 40 ಮಕ್ಕಳು, ಊಟ ಕಳುಹಿಸಿದ್ದ ಉದ್ಯಮಿಯ 61 ಸಂಬಂಧಿಕರು ಹಾಗೂ ಹೋಟೆಲ್ನಲ್ಲಿ ಊಟ ಖರೀದಿಸಿದ್ದ 20ಕ್ಕೂ ಅಧಿಕ ಕೃಷಿ ಕೂಲಿಕಾರ್ಮಿಕರಿಗೆ ವಾಂತಿ–ಭೇದಿಯಾಗಿ ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣದಿಂದ ಸೋಮವಾರ ಹೋಟೆಲ್ ಮುಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಭಾನುವಾರ ಮೇಘಾಲಯದ ವಿದ್ಯಾರ್ಥಿ ಕಿರ್ಶನ್ ಲ್ಯಾಂಗ್ (13) ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ. ಒಟ್ಟು ನಾಲ್ವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ಜನರಲ್ ವಾರ್ಡ್ನಲ್ಲಿದ್ದಾರೆ.</p>.<p>ಉದ್ಯಮಿ ಪುಷ್ಪೇಂದ್ರಕುಮಾರ್ ಅವರು ಶುಕ್ರವಾರ ಹೋಳಿ ಆಚರಣೆಗಾಗಿ 150 ಮಂದಿಗೆ ಊಟ ತಯಾರಿಸಲು ಹೇಳಿದ್ದರು. ಊಟ ಸೇವಿಸಿದ್ದ ಉದ್ಯಮಿಯ ಸಂಬಂಧಿಕರಲ್ಲಿ 61 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಮತ್ತೊಂದೆಡೆ, ಆ ದಿನ ಉದ್ಯಮಿಗೆ ಆಹಾರ ನೀಡಿ, ಉಳಿದದ್ದನ್ನು ಹೋಟೆಲ್ನಲ್ಲಿ ಮಾರಲಾಗಿತ್ತು. ಆ ಊಟ ಮಾಡಿದ 20ಕ್ಕೂ ಅಧಿಕ ಮಂದಿ ಸಹ ಅಸ್ವಸ್ಥಗೊಂಡಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.</p>.<p>ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೋಮವಾರ ಗದ್ದೆಗಳ ಬಳಿಗೆ ತೆರಳಿ ಅಲ್ಲಿ ಬಿಸಾಡಿದ್ದ ಸ್ಪಲ್ಪ ಪ್ರಮಾಣದ ಊಟವನ್ನು ಸಂಗ್ರಹಿಸಿ, ಪ್ರಯೋಗಾಲಕ್ಕೆ ಕಳುಹಿಸಿ ಕೊಟ್ಟಿದ್ದಾರೆ. ಕೂಲಿಕಾರ್ಮಿಕರಿಂದ ಮಾಹಿತಿ ಪಡೆದಿದ್ದಾರೆ.</p>.<p>ಡಿವೈಎಸ್ಪಿ ವಿ.ಕೃಷ್ಣಪ್ಪ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ. ಭಾನುವಾರ ಬಂಧಿತರಾಗಿದ್ದ ಹೋಟೆಲ್ ಮಾಲೀಕ ಸಿದ್ದರಾಜು, ಲಂಕೇಶ್, ಅಭಿಷೇಕ್ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>