<p><strong>ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ):</strong> ‘ಕನ್ನಂಬಾಡಿ ಕಟ್ಟೆ (ಕೃಷ್ಣರಾಜಸಾಗರ ಜಲಾಶಯ) ನಿರ್ಮಾಣಕ್ಕೆ ಮೊದಲು ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್. ಅದನ್ನು ಹೇಳಿಕೊಳ್ಳಲು ಧೈರ್ಯವೇ ಇಲ್ಲವಾಗಿದೆ’ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಇಲ್ಲಿ ಹೇಳಿದರು.</p><p>ಪಟ್ಟಣದಲ್ಲಿ ಭಾನುವಾರ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p><p>‘ಶ್ರೀರಂಗಪಟ್ಟಣ ಐತಿಹಾಸಿಕ ಸ್ಥಳ. ಒಂದು ಕಡೆ ಮಸೀದಿ, ಇನ್ನೊಂದೆಡೆ ದೇವಸ್ಥಾನ ಇದೆ. ಒಂದೆಡೆ ಅಲ್ಲಾಹು ಅಕ್ಬರ್ ಎನ್ನುತ್ತಾರೆ, ದೇವಸ್ಥಾನದಲ್ಲಿ ಗಂಟೆ ಬಾರಿಸಲಾಗುತ್ತದೆ. ಎರಡನ್ನೂ ಸಮಚಿತ್ತದಿಂದ ಕೇಳಿಸಿಕೊಂಡು ಇದ್ದರಲ್ಲವೇ ಅವರು?’ ಎಂದು ಕೇಳಿದರು.</p><p>‘ಟಿಪ್ಪು ದೇವದಾಸಿ ಪದ್ಧತಿಯನ್ನು ನಿಷೇಧಿಸಿದರು. ಆ ಪದ್ಧತಿಗೆ ಶೋಷಿತ ಸಮಾಜದ, ಆರ್ಥಿಕ, ಶೈಕ್ಷಣಿಕ ವಂಚಿತ ಮಹಿಳೆಯರ ದೂಡಲಾಗುತ್ತಿತ್ತು. ಆ ಕಾಲದಲ್ಲೇ ಟಿಪ್ಪು ಆ ಪದ್ಧತಿ ರದ್ದುಪಡಿಸಿದರು. ಭೂ ಸುಧಾರಣಾ ಕಾಯ್ದೆ ತಂದಿದ್ದರು. ಅವರ ಕಾಲದಲ್ಲಿಯೇ ಉಳ್ಳವರಿಗೆ, ಶ್ರೀಮಂತರಿಗೆ ಒಂದಿಂಚು ಭೂಮಿಯನ್ನೂ ಕೊಟ್ಟಿರಲಿಲ್ಲ’ ಎಂದು ಸ್ಮರಿಸಿದರು.</p><p>‘ದೇಶಕ್ಕೆ ರೇಷ್ಮೆ ಕೃಷಿಯನ್ನು ತಂದವರೇ ಅವರು. ದಲಿತರಿಗೆ ಭೂಮಿ ಹಂಚಿಕೆ ಮಾಡಿದರು. ಪರಧರ್ಮ ಸಹಿಷ್ಣುವಾಗಿದ್ದ ಟಿಪ್ಪು ಹಿಂದೂ ದೇವಾಲಯಗಳಿಗೆ ದಾನ–ದತ್ತಿ ನೀಡಿದ್ದರು. ನಾಡಿನ ರಕ್ಷಣೆಗೆ ಯುದ್ಧ ಭೂಮಿಯಲ್ಲಿ ಹೋರಾಡಿದ್ದ ಅವರನ್ನು ಸ್ಮರಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ):</strong> ‘ಕನ್ನಂಬಾಡಿ ಕಟ್ಟೆ (ಕೃಷ್ಣರಾಜಸಾಗರ ಜಲಾಶಯ) ನಿರ್ಮಾಣಕ್ಕೆ ಮೊದಲು ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್. ಅದನ್ನು ಹೇಳಿಕೊಳ್ಳಲು ಧೈರ್ಯವೇ ಇಲ್ಲವಾಗಿದೆ’ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಇಲ್ಲಿ ಹೇಳಿದರು.</p><p>ಪಟ್ಟಣದಲ್ಲಿ ಭಾನುವಾರ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p><p>‘ಶ್ರೀರಂಗಪಟ್ಟಣ ಐತಿಹಾಸಿಕ ಸ್ಥಳ. ಒಂದು ಕಡೆ ಮಸೀದಿ, ಇನ್ನೊಂದೆಡೆ ದೇವಸ್ಥಾನ ಇದೆ. ಒಂದೆಡೆ ಅಲ್ಲಾಹು ಅಕ್ಬರ್ ಎನ್ನುತ್ತಾರೆ, ದೇವಸ್ಥಾನದಲ್ಲಿ ಗಂಟೆ ಬಾರಿಸಲಾಗುತ್ತದೆ. ಎರಡನ್ನೂ ಸಮಚಿತ್ತದಿಂದ ಕೇಳಿಸಿಕೊಂಡು ಇದ್ದರಲ್ಲವೇ ಅವರು?’ ಎಂದು ಕೇಳಿದರು.</p><p>‘ಟಿಪ್ಪು ದೇವದಾಸಿ ಪದ್ಧತಿಯನ್ನು ನಿಷೇಧಿಸಿದರು. ಆ ಪದ್ಧತಿಗೆ ಶೋಷಿತ ಸಮಾಜದ, ಆರ್ಥಿಕ, ಶೈಕ್ಷಣಿಕ ವಂಚಿತ ಮಹಿಳೆಯರ ದೂಡಲಾಗುತ್ತಿತ್ತು. ಆ ಕಾಲದಲ್ಲೇ ಟಿಪ್ಪು ಆ ಪದ್ಧತಿ ರದ್ದುಪಡಿಸಿದರು. ಭೂ ಸುಧಾರಣಾ ಕಾಯ್ದೆ ತಂದಿದ್ದರು. ಅವರ ಕಾಲದಲ್ಲಿಯೇ ಉಳ್ಳವರಿಗೆ, ಶ್ರೀಮಂತರಿಗೆ ಒಂದಿಂಚು ಭೂಮಿಯನ್ನೂ ಕೊಟ್ಟಿರಲಿಲ್ಲ’ ಎಂದು ಸ್ಮರಿಸಿದರು.</p><p>‘ದೇಶಕ್ಕೆ ರೇಷ್ಮೆ ಕೃಷಿಯನ್ನು ತಂದವರೇ ಅವರು. ದಲಿತರಿಗೆ ಭೂಮಿ ಹಂಚಿಕೆ ಮಾಡಿದರು. ಪರಧರ್ಮ ಸಹಿಷ್ಣುವಾಗಿದ್ದ ಟಿಪ್ಪು ಹಿಂದೂ ದೇವಾಲಯಗಳಿಗೆ ದಾನ–ದತ್ತಿ ನೀಡಿದ್ದರು. ನಾಡಿನ ರಕ್ಷಣೆಗೆ ಯುದ್ಧ ಭೂಮಿಯಲ್ಲಿ ಹೋರಾಡಿದ್ದ ಅವರನ್ನು ಸ್ಮರಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>