<p><strong>ನಂಜನಗೂಡು</strong>: ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದ ಆವರಣದಲ್ಲಿ ಶುಕ್ರವಾರ ಯುವಕರ ತಂಡವೊಂದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆ ಬಳಿ ರಾಜಾರೋಷವಾಗಿ ಪುಂಡರ ಗುಂಪು ಮಚ್ಚು ಝಳಪಿಸುತ್ತಾ ಓಡಾಡಿದೆ.</p><p>ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿ ಅಭಿಷೇಕ್ ಹಾಗೂ ರವಿ ಎಂಬುವರ ಮೇಲೆ ದಾಳಿ ನಡೆಸಿದ ನಾಲ್ವರ ಗುಂಪು ಕಬ್ಬಿಣದ ರಾಡು, ಚಾಕು ಹಾಗೂ ಮರದ ಪಟ್ಟಿಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.</p><p>ಹಲ್ಲೆಗೊಳಗಾದವರು ಆಸ್ಪತ್ರೆ ಮುಂಭಾಗದಿಂದ ತಪ್ಪಿಸಿಕೊಂಡು ಓಡಿದರಾದರೂ ಹಿಂಬಾಲಿಸಿದ ಆರೋಪಿಗಳು ಹಟ್ಟಿಮಾರಮ್ಮನ ದೇವಸ್ಥಾನದ ಬಳಿ ಹಿಡಿದು ಮತ್ತೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಇವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p><p>ಈ ಸಂಬಂಧ ಶನಿವಾರ ನಂಜನಗೂಡು ನಗರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಪತ್ತೆ ಕಾರ್ಯ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದ ಆವರಣದಲ್ಲಿ ಶುಕ್ರವಾರ ಯುವಕರ ತಂಡವೊಂದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆ ಬಳಿ ರಾಜಾರೋಷವಾಗಿ ಪುಂಡರ ಗುಂಪು ಮಚ್ಚು ಝಳಪಿಸುತ್ತಾ ಓಡಾಡಿದೆ.</p><p>ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿ ಅಭಿಷೇಕ್ ಹಾಗೂ ರವಿ ಎಂಬುವರ ಮೇಲೆ ದಾಳಿ ನಡೆಸಿದ ನಾಲ್ವರ ಗುಂಪು ಕಬ್ಬಿಣದ ರಾಡು, ಚಾಕು ಹಾಗೂ ಮರದ ಪಟ್ಟಿಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.</p><p>ಹಲ್ಲೆಗೊಳಗಾದವರು ಆಸ್ಪತ್ರೆ ಮುಂಭಾಗದಿಂದ ತಪ್ಪಿಸಿಕೊಂಡು ಓಡಿದರಾದರೂ ಹಿಂಬಾಲಿಸಿದ ಆರೋಪಿಗಳು ಹಟ್ಟಿಮಾರಮ್ಮನ ದೇವಸ್ಥಾನದ ಬಳಿ ಹಿಡಿದು ಮತ್ತೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಇವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p><p>ಈ ಸಂಬಂಧ ಶನಿವಾರ ನಂಜನಗೂಡು ನಗರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಪತ್ತೆ ಕಾರ್ಯ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>