<p><strong>ಮೈಸೂರು:</strong> ‘ಡಿ.ಕೆ. ಶಿವಕುಮಾರ್ ಅವರಿಗೆ ಈಗಿರುವುದು ಕೊನೆಯ ಅವಕಾಶ. ಈಗ ಮುಖ್ಯಮಂತ್ರಿ ಆಗದಿದ್ದರೆ ಮುಂದೆ ಆಗುವುದಿಲ್ಲ. ಒಪ್ಪಂದವೇ ಆಗಿದ್ದರೆ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ಕೊಡಬೇಕು’ ಎಂದು ಜೆಡಿಎಸ್ ಶಾಸಕ ಎ.ಮಂಜು ಹೇಳಿದರು.</p>.<p>ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಡಿಕೆಶಿ ಕಾರಣದಿಂದಲೇ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರು ಕಾಂಗ್ರೆಸ್ಗೆ ಮತ ಹಾಕಿದರು. ಈ ಕಾರಣದಿಂದಲೇ ಆ ಪಕ್ಷಕ್ಕೆ 30ರಿಂದ 40 ಸೀಟುಗಳು ಏರಿಕೆಯಾದವು. ನಾವು ಮೋಸ ಹೋದೆವು ಎಂದು ಜನರಿಗೆ ಈಗ ಅರ್ಥವಾಗುತ್ತಿದೆ’ ಎಂದರು.</p>.<p>‘ಕಾಂಗ್ರೆಸ್ ಮಧ್ಯರಾತ್ರಿ 12ಕ್ಕೆ ಹುಟ್ಟಿದ ಪಕ್ಷ. ಅಲ್ಲಿ ರಾತ್ರೋರಾತ್ರಿ ಏನು ಬೇಕಾದರೂ ಬದಲಾಗುತ್ತದೆ. 2013ರಲ್ಲಿ ಇದ್ದಂತಹ ಸಿದ್ದರಾಮಯ್ಯ ಈಗಿಲ್ಲ. ಅವರು ಸಂಪುರ್ಣವಾಗಿ ಬದಲಾಗಿದ್ದಾರೆ. ಕಾಂಗ್ರೆಸ್ನಲ್ಲಿ ಶಾಸಕರಿಂದ ಏನೂ ತೀರ್ಮಾನ ಆಗುವುದಿಲ್ಲ. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಹೇಳಿದರು.</p>.<p>‘ಯಾರೇ ಮುಖ್ಯಮಂತ್ರಿಯಾದರೂ ಜೆಡಿಎಸ್–ಬಿಜೆಪಿಯ ನಮಗೇನೂ ಸಮಸ್ಯೆ ಇಲ್ಲ. ನಾವು 2028ಕ್ಕೆ ಅಧಿಕಾರಕ್ಕೆ ಬಂದೇ ಬರುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಪದೇ ಪದೇ ಏಕೆ ಹೇಳುತ್ತಿದ್ದಾರೆಯೋ ಗೊತ್ತಾಗುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ದುಡ್ಡಿಲ್ಲ. ಇದನ್ನು ಮರೆ ಮಾಚಲು ಈ ರೀತಿ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ಜಿ.ಟಿ. ದೇವೇಗೌಡರು ನಮ್ಮ ಪಕ್ಷದಲ್ಲಿದ್ದಾರೆ. ಮನೆ ಎಂದ ಮೇಲೆ ಸಮಸ್ಯೆಗಳು ಇರುತ್ತವೆ. ನಂತರ ಎಲ್ಲವೂ ಬದಲಾಗುತ್ತವೆ. ಚುನಾವಣೆ ಬಂದಾಗ ನಾವೆಲ್ಲಾ ಒಟ್ಟಾಗಿ ಸೇರಿಕೊಳ್ಳುತ್ತೇವೆ. ಯಾವ ಸಮಸ್ಯೆಗಳೂ ಇಲ್ಲ’ ಎಂದು ಪ್ರತಿಕ್ರಿಯಿಸಿದರು.</p>.ಡಿಕೆಶಿಗೆ ಶಾಸಕರ ಬೆಂಬಲ ಇಲ್ಲ, 2028ರ ಚುನಾವಣೆಗೂ ನನ್ನದೇ ನಾಯಕತ್ವ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಡಿ.ಕೆ. ಶಿವಕುಮಾರ್ ಅವರಿಗೆ ಈಗಿರುವುದು ಕೊನೆಯ ಅವಕಾಶ. ಈಗ ಮುಖ್ಯಮಂತ್ರಿ ಆಗದಿದ್ದರೆ ಮುಂದೆ ಆಗುವುದಿಲ್ಲ. ಒಪ್ಪಂದವೇ ಆಗಿದ್ದರೆ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ಕೊಡಬೇಕು’ ಎಂದು ಜೆಡಿಎಸ್ ಶಾಸಕ ಎ.ಮಂಜು ಹೇಳಿದರು.</p>.<p>ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಡಿಕೆಶಿ ಕಾರಣದಿಂದಲೇ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರು ಕಾಂಗ್ರೆಸ್ಗೆ ಮತ ಹಾಕಿದರು. ಈ ಕಾರಣದಿಂದಲೇ ಆ ಪಕ್ಷಕ್ಕೆ 30ರಿಂದ 40 ಸೀಟುಗಳು ಏರಿಕೆಯಾದವು. ನಾವು ಮೋಸ ಹೋದೆವು ಎಂದು ಜನರಿಗೆ ಈಗ ಅರ್ಥವಾಗುತ್ತಿದೆ’ ಎಂದರು.</p>.<p>‘ಕಾಂಗ್ರೆಸ್ ಮಧ್ಯರಾತ್ರಿ 12ಕ್ಕೆ ಹುಟ್ಟಿದ ಪಕ್ಷ. ಅಲ್ಲಿ ರಾತ್ರೋರಾತ್ರಿ ಏನು ಬೇಕಾದರೂ ಬದಲಾಗುತ್ತದೆ. 2013ರಲ್ಲಿ ಇದ್ದಂತಹ ಸಿದ್ದರಾಮಯ್ಯ ಈಗಿಲ್ಲ. ಅವರು ಸಂಪುರ್ಣವಾಗಿ ಬದಲಾಗಿದ್ದಾರೆ. ಕಾಂಗ್ರೆಸ್ನಲ್ಲಿ ಶಾಸಕರಿಂದ ಏನೂ ತೀರ್ಮಾನ ಆಗುವುದಿಲ್ಲ. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಹೇಳಿದರು.</p>.<p>‘ಯಾರೇ ಮುಖ್ಯಮಂತ್ರಿಯಾದರೂ ಜೆಡಿಎಸ್–ಬಿಜೆಪಿಯ ನಮಗೇನೂ ಸಮಸ್ಯೆ ಇಲ್ಲ. ನಾವು 2028ಕ್ಕೆ ಅಧಿಕಾರಕ್ಕೆ ಬಂದೇ ಬರುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಪದೇ ಪದೇ ಏಕೆ ಹೇಳುತ್ತಿದ್ದಾರೆಯೋ ಗೊತ್ತಾಗುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ದುಡ್ಡಿಲ್ಲ. ಇದನ್ನು ಮರೆ ಮಾಚಲು ಈ ರೀತಿ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ಜಿ.ಟಿ. ದೇವೇಗೌಡರು ನಮ್ಮ ಪಕ್ಷದಲ್ಲಿದ್ದಾರೆ. ಮನೆ ಎಂದ ಮೇಲೆ ಸಮಸ್ಯೆಗಳು ಇರುತ್ತವೆ. ನಂತರ ಎಲ್ಲವೂ ಬದಲಾಗುತ್ತವೆ. ಚುನಾವಣೆ ಬಂದಾಗ ನಾವೆಲ್ಲಾ ಒಟ್ಟಾಗಿ ಸೇರಿಕೊಳ್ಳುತ್ತೇವೆ. ಯಾವ ಸಮಸ್ಯೆಗಳೂ ಇಲ್ಲ’ ಎಂದು ಪ್ರತಿಕ್ರಿಯಿಸಿದರು.</p>.ಡಿಕೆಶಿಗೆ ಶಾಸಕರ ಬೆಂಬಲ ಇಲ್ಲ, 2028ರ ಚುನಾವಣೆಗೂ ನನ್ನದೇ ನಾಯಕತ್ವ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>