<p><strong>ಮೈಸೂರು:</strong> ‘ಸರ್ಕಾರ ಕೊಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ ಇದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಿಧಾನಮಂಡಲದ ಅಧಿವೇಶನದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರು ವರದಿ ಕೊಡಲಿ ಬಿಡಿ. ಬೇಡ ಎಂದವರಾರು? ನಮ್ಮ ಕಡೆಯಿಂದ ವಿವರಣೆ ಏನೂ ಇಲ್ಲ’ ಎಂದರು.</p><p>‘ಅಧಿವೇಶನದಲ್ಲಿ ಏನು ನಡೆಯಿತೆಂದು ಅವರು ರಾಷ್ಟ್ರಪತಿಯವರಿಗೆ ತಿಳಿಸಿದ್ದಾರಷ್ಟೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ನೀಡಿರುವ ಭಾಷಣವನ್ನು ಅವರು ಓದಲೇಬೇಕಾಗಿತ್ತು’ ಎಂದು ಹೇಳಿದರು.</p><p>‘ಗಣರಾಜ್ಯೋತ್ಸವಕ್ಕೂ ನಾವು ಭಾಷಣ ಬರೆದುಕೊಡುತ್ತೇವೆ. ಆದರೆ, ಓದುವವರು ಅವರೇ ಅಲ್ಲವೇ? ಜಂಟಿ ಅಧಿವೇಶನದಲ್ಲಿ ನಾವು ಏನು ಬರೆದುಕೊಡುತ್ತೇವೆಯೋ ಅದನ್ನು ಅವರು ಓದಲೇಬೇಕು. ಗಣರಾಜ್ಯೋತ್ಸವದಲ್ಲೂ ನಾವು ಬರೆದುಕೊಡುತ್ತೇವೆ, ಅವರು ಬದಲಾಯಿಸಿಕೊಳ್ಳುವ ಸಾಧ್ಯತೆ ಇರುತ್ತದೆ’ ಎಂದು ಪ್ರತಿಕ್ರಿಯಿಸಿದರು.</p><p>‘ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ. ನಾವು ಪತ್ರ ವ್ಯವಹಾರವನ್ನೆಲ್ಲಾ ನಡೆಸಿದ್ದೇವೆ. ಆದರೂ ಆಯ್ಕೆ ಮಾಡದಿದ್ದರೆ ಏನು ಮಾಡುವುದು? ಪ್ರತಿ ರಾಜ್ಯದಿಂದ ಒಂದನ್ನು ಆಯ್ಕೆ ಮಾಡುವುದು ಕೇಂದ್ರ ಸರ್ಕಾರವಲ್ಲವೇ? ಎಂದು ಕೇಳಿದರು.</p>.<p><strong>ಫೆಬ್ರುವರಿಯಿಂದ ಬಜೆಟ್ ಸಭೆ...</strong></p><p>‘ಬಜೆಟ್ ಸಿದ್ಧತಾ ಸಭೆಯನ್ನು ಇನ್ನೂ ಅರಂಭಿಸಿಲ್ಲ. ಹಣಕಾಸು ಇಲಾಖೆಯೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸುತ್ತಿದ್ದೇನೆ. ಫೆ.2ರಿಂದ ಕಟ್ಟುನಿಟ್ಟಾಗಿ ಆರಂಭಿಸಲಿದ್ದೇವೆ’ ಎಂದು ತಿಳಿಸಿದರು.</p><p>‘ಕರ್ನಾಟಕದಲ್ಲಿ ಹೂಡಿಕೆಗೆ ಸದಾ ಒಳ್ಳೆಯ ವಾತಾವರಣವಿದೆ. ನಮ್ಮಲ್ಲಿ ಕೌಶಲವುಳ್ಳ ಹಾಗೂ ಕೌಶಲ ಇಲ್ಲದ ಮಾನವ ಸಂಪನ್ಮೂಲ ಸಾಕಷ್ಟು ಲಭ್ಯವಿದೆ. ಕೌಶಲ ವೃದ್ಧಿಗಾಗಿ ನಾವು ತರಬೇತಿಯನ್ನೂ ನೀಡುತ್ತಿದ್ದೇವೆ. ಹೀಗೆ ತರಬೇತಿ ಪಡೆದವರಿಗೆ ಶೇ ನೂರರಷ್ಟು ಕೆಲಸ ಸಿಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸರ್ಕಾರ ಕೊಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ ಇದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಿಧಾನಮಂಡಲದ ಅಧಿವೇಶನದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರು ವರದಿ ಕೊಡಲಿ ಬಿಡಿ. ಬೇಡ ಎಂದವರಾರು? ನಮ್ಮ ಕಡೆಯಿಂದ ವಿವರಣೆ ಏನೂ ಇಲ್ಲ’ ಎಂದರು.</p><p>‘ಅಧಿವೇಶನದಲ್ಲಿ ಏನು ನಡೆಯಿತೆಂದು ಅವರು ರಾಷ್ಟ್ರಪತಿಯವರಿಗೆ ತಿಳಿಸಿದ್ದಾರಷ್ಟೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ನೀಡಿರುವ ಭಾಷಣವನ್ನು ಅವರು ಓದಲೇಬೇಕಾಗಿತ್ತು’ ಎಂದು ಹೇಳಿದರು.</p><p>‘ಗಣರಾಜ್ಯೋತ್ಸವಕ್ಕೂ ನಾವು ಭಾಷಣ ಬರೆದುಕೊಡುತ್ತೇವೆ. ಆದರೆ, ಓದುವವರು ಅವರೇ ಅಲ್ಲವೇ? ಜಂಟಿ ಅಧಿವೇಶನದಲ್ಲಿ ನಾವು ಏನು ಬರೆದುಕೊಡುತ್ತೇವೆಯೋ ಅದನ್ನು ಅವರು ಓದಲೇಬೇಕು. ಗಣರಾಜ್ಯೋತ್ಸವದಲ್ಲೂ ನಾವು ಬರೆದುಕೊಡುತ್ತೇವೆ, ಅವರು ಬದಲಾಯಿಸಿಕೊಳ್ಳುವ ಸಾಧ್ಯತೆ ಇರುತ್ತದೆ’ ಎಂದು ಪ್ರತಿಕ್ರಿಯಿಸಿದರು.</p><p>‘ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ. ನಾವು ಪತ್ರ ವ್ಯವಹಾರವನ್ನೆಲ್ಲಾ ನಡೆಸಿದ್ದೇವೆ. ಆದರೂ ಆಯ್ಕೆ ಮಾಡದಿದ್ದರೆ ಏನು ಮಾಡುವುದು? ಪ್ರತಿ ರಾಜ್ಯದಿಂದ ಒಂದನ್ನು ಆಯ್ಕೆ ಮಾಡುವುದು ಕೇಂದ್ರ ಸರ್ಕಾರವಲ್ಲವೇ? ಎಂದು ಕೇಳಿದರು.</p>.<p><strong>ಫೆಬ್ರುವರಿಯಿಂದ ಬಜೆಟ್ ಸಭೆ...</strong></p><p>‘ಬಜೆಟ್ ಸಿದ್ಧತಾ ಸಭೆಯನ್ನು ಇನ್ನೂ ಅರಂಭಿಸಿಲ್ಲ. ಹಣಕಾಸು ಇಲಾಖೆಯೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸುತ್ತಿದ್ದೇನೆ. ಫೆ.2ರಿಂದ ಕಟ್ಟುನಿಟ್ಟಾಗಿ ಆರಂಭಿಸಲಿದ್ದೇವೆ’ ಎಂದು ತಿಳಿಸಿದರು.</p><p>‘ಕರ್ನಾಟಕದಲ್ಲಿ ಹೂಡಿಕೆಗೆ ಸದಾ ಒಳ್ಳೆಯ ವಾತಾವರಣವಿದೆ. ನಮ್ಮಲ್ಲಿ ಕೌಶಲವುಳ್ಳ ಹಾಗೂ ಕೌಶಲ ಇಲ್ಲದ ಮಾನವ ಸಂಪನ್ಮೂಲ ಸಾಕಷ್ಟು ಲಭ್ಯವಿದೆ. ಕೌಶಲ ವೃದ್ಧಿಗಾಗಿ ನಾವು ತರಬೇತಿಯನ್ನೂ ನೀಡುತ್ತಿದ್ದೇವೆ. ಹೀಗೆ ತರಬೇತಿ ಪಡೆದವರಿಗೆ ಶೇ ನೂರರಷ್ಟು ಕೆಲಸ ಸಿಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>