ಬುಧವಾರ ಪೋಸ್ಟ್ ಹಾಕಿರುವ ಅವರು, ‘ಮೈಸೂರು ಜಿಲ್ಲಾಡಳಿತಕ್ಕೆ ಧನ್ಯವಾದಗಳು. ಆದರೆ ಒಂದು ಬಾವುಟ ತೆಗೆದು ಪಕ್ಕದಲ್ಲೇ ಇನ್ನೊಂದನ್ನೇಕೆ ಬಿಟ್ಟಿದ್ದೀರಿ? ನಾನೇ ಸ್ಥಳಕ್ಕೆ ಬಂದು ತೋರಿಸಬೇಕಾ? ಕೈಲಾಸಪುರಂ 4ನೇ ಮುಖ್ಯರಸ್ತೆ, ಅಂಬೇಡ್ಕರ್ ಉದ್ಯಾನ, ಶ್ರೀನಿವಾಸ ದೇವಸ್ಥಾನ ರಸ್ತೆಯಲ್ಲಿ ಮತ್ತೊಂದು ಧ್ವಜ ಇರುವುದು ಕಾಣುತ್ತಿಲ್ಲವೇ’ ಎಂದು ಪ್ರಶ್ನೆ ಮಾಡಿದ್ದಾರೆ.