<p><strong>ಮೈಸೂರು</strong>: ಜಿಲ್ಲೆಯ ತಿ.ನರಸೀಪುರದಲ್ಲಿರುವ ತ್ರಿವೇಣಿ ಸಂಗಮದಲ್ಲಿ ಸೋಮವಾರ (ಫೆ.10) ಮೂರು ದಿನಗಳ ಕುಂಭಮೇಳ ಆರಂಭವಾಗಲಿದ್ದು, ಲಕ್ಷಾಂತರ ಭಕ್ತರು ಪುಣ್ಯಸ್ನಾನ ಮಾಡಲಿದ್ದಾರೆ.</p>.<p>ದಕ್ಷಿಣ ಪ್ರಯಾಗ ಎಂದೇ ಖ್ಯಾತಿ ಪಡೆದಿರುವ ತಿರುಮಕೂಡಲಿನಲ್ಲಿ ನಡೆಯುತ್ತಿರುವ 13ನೇ ಕುಂಭಮೇಳ ಇದಾಗಿದೆ. ಜೀವನದಿಗಳಾದ ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿಯಾಗಿ ಹರಿಯುವ ‘ಸ್ಪಟಿಕ’ ನದಿಯ ಸಂಗಮದಲ್ಲಿ ಜನರು ಮಿಂದೇಳಲಿದ್ದಾರೆ.</p>.<p>ಜಿಲ್ಲಾಡಳಿತದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಭಾನುವಾರವೂ ನದಿ ಸಂಗಮದಲ್ಲಿ ಭಕ್ತರು ಪುಣ್ಯಸ್ನಾನ ಮಾಡಿ, ಗುಂಜಾ ನರಸಿಂಹಸ್ವಾಮಿ, ಅಗಸ್ತೇಶ್ವರ ಸ್ವಾಮಿ ದೇಗುಲಗಳಲ್ಲಿ ಪೂಜೆ ಸಲ್ಲಿಸಿದರು. </p>.<p>ಸೋಮವಾರ ಬೆಳಿಗ್ಗೆ 9ಕ್ಕೆ ಅಗಸ್ತ್ಯೇಶ್ವರ ಸ್ವಾಮಿ ದೇಗುಲದಲ್ಲಿ ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಲಿದೆ. ಸಂಜೆ 5 ಗಂಟೆಗೆ ಧಾರ್ಮಿಕ ಸಭೆ, ಅತಿಥಿಗಳಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.</p>.<p>ನದಿ ತಟದಲ್ಲಿ ಸ್ವಾಮೀಜಿಗಳಿಗೆ ಕುಟೀರ ವ್ಯವಸ್ಥೆ ಮಾಡಲಾಗಿದ್ದು, ಸಾಧುಗಳು– ಮಠಾಧೀಶರಿಗೆ ನಡುಹೊಳೆ ಬಸಪ್ಪನ ಸನ್ನಿಧಿಯಲ್ಲಿ ಸ್ನಾನಕ್ಕೆ ಸ್ಥಳ ಮೀಸಲಿರಿಸಲಾಗಿದೆ. ಅತಿ ಗಣ್ಯರ ಸ್ನಾನಕ್ಕೆ ಪ್ರತ್ಯೇಕ ಸ್ಥಳವನ್ನು ನಿಗದಿ ಮಾಡಲಾಗಿದೆ.</p>.<p>12ರಂದು ಬೆಳಗ್ಗೆ 9ರಿಂದ 9.30ರೊಳಗೆ ಪವಿತ್ರ ಕುಂಭಸ್ನಾನ ನಡೆಯಲಿದ್ದು, ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರು, ತೆಪ್ಪ– ದೋಣಿ ನಿಯೋಜಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ನೂರಾರು ಪೊಲೀಸರು ಸರ್ವಸನ್ನದ್ಧರಾಗಿದ್ದಾರೆ. ಸರ್ಕಾರ ಕುಂಭಮೇಳಕ್ಕೆ ₹ 6 ಕೋಟಿ ಅನುದಾನ ಬಿಡುಗಡೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಜಿಲ್ಲೆಯ ತಿ.ನರಸೀಪುರದಲ್ಲಿರುವ ತ್ರಿವೇಣಿ ಸಂಗಮದಲ್ಲಿ ಸೋಮವಾರ (ಫೆ.10) ಮೂರು ದಿನಗಳ ಕುಂಭಮೇಳ ಆರಂಭವಾಗಲಿದ್ದು, ಲಕ್ಷಾಂತರ ಭಕ್ತರು ಪುಣ್ಯಸ್ನಾನ ಮಾಡಲಿದ್ದಾರೆ.</p>.<p>ದಕ್ಷಿಣ ಪ್ರಯಾಗ ಎಂದೇ ಖ್ಯಾತಿ ಪಡೆದಿರುವ ತಿರುಮಕೂಡಲಿನಲ್ಲಿ ನಡೆಯುತ್ತಿರುವ 13ನೇ ಕುಂಭಮೇಳ ಇದಾಗಿದೆ. ಜೀವನದಿಗಳಾದ ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿಯಾಗಿ ಹರಿಯುವ ‘ಸ್ಪಟಿಕ’ ನದಿಯ ಸಂಗಮದಲ್ಲಿ ಜನರು ಮಿಂದೇಳಲಿದ್ದಾರೆ.</p>.<p>ಜಿಲ್ಲಾಡಳಿತದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಭಾನುವಾರವೂ ನದಿ ಸಂಗಮದಲ್ಲಿ ಭಕ್ತರು ಪುಣ್ಯಸ್ನಾನ ಮಾಡಿ, ಗುಂಜಾ ನರಸಿಂಹಸ್ವಾಮಿ, ಅಗಸ್ತೇಶ್ವರ ಸ್ವಾಮಿ ದೇಗುಲಗಳಲ್ಲಿ ಪೂಜೆ ಸಲ್ಲಿಸಿದರು. </p>.<p>ಸೋಮವಾರ ಬೆಳಿಗ್ಗೆ 9ಕ್ಕೆ ಅಗಸ್ತ್ಯೇಶ್ವರ ಸ್ವಾಮಿ ದೇಗುಲದಲ್ಲಿ ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಲಿದೆ. ಸಂಜೆ 5 ಗಂಟೆಗೆ ಧಾರ್ಮಿಕ ಸಭೆ, ಅತಿಥಿಗಳಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.</p>.<p>ನದಿ ತಟದಲ್ಲಿ ಸ್ವಾಮೀಜಿಗಳಿಗೆ ಕುಟೀರ ವ್ಯವಸ್ಥೆ ಮಾಡಲಾಗಿದ್ದು, ಸಾಧುಗಳು– ಮಠಾಧೀಶರಿಗೆ ನಡುಹೊಳೆ ಬಸಪ್ಪನ ಸನ್ನಿಧಿಯಲ್ಲಿ ಸ್ನಾನಕ್ಕೆ ಸ್ಥಳ ಮೀಸಲಿರಿಸಲಾಗಿದೆ. ಅತಿ ಗಣ್ಯರ ಸ್ನಾನಕ್ಕೆ ಪ್ರತ್ಯೇಕ ಸ್ಥಳವನ್ನು ನಿಗದಿ ಮಾಡಲಾಗಿದೆ.</p>.<p>12ರಂದು ಬೆಳಗ್ಗೆ 9ರಿಂದ 9.30ರೊಳಗೆ ಪವಿತ್ರ ಕುಂಭಸ್ನಾನ ನಡೆಯಲಿದ್ದು, ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರು, ತೆಪ್ಪ– ದೋಣಿ ನಿಯೋಜಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ನೂರಾರು ಪೊಲೀಸರು ಸರ್ವಸನ್ನದ್ಧರಾಗಿದ್ದಾರೆ. ಸರ್ಕಾರ ಕುಂಭಮೇಳಕ್ಕೆ ₹ 6 ಕೋಟಿ ಅನುದಾನ ಬಿಡುಗಡೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>