‘ಬಾಹುಬಲಿ ಸಿನಿಮಾದಲ್ಲಿ ರಾಜಮಾತೆ ಅರಮನೆಯಿಂದ ಹೊರಹಾಕಿದ ಬಳಿಕ ಅಮರೇಂದ್ರ ಬಾಹುಬಲಿ ಜನಸಾಮಾನ್ಯರ ಜೊತೆ ಬಂದು ಸೇರಿಕೊಂಡ. ಆದರೆ ಇವರು ಸ್ವ ಇಚ್ಛೆಯಿಂದ ಬರುತ್ತಿದ್ದಾರೆ ಎಂದರೆ ನಾವು ಖುಷಿ ಪಡಬೇಕು’ ಎಂದರು.
‘ ಪಕ್ಷದ ಕಾರ್ಯಕ್ರಮಗಳು ಎಂದ ಮೇಲೆ ಒಂದು ಶಿಷ್ಟಾಚಾರ ಇರುತ್ತದೆ. ಅಧ್ಯಕ್ಷರು–ಉಪಾಧ್ಯಕ್ಷರು ವೇದಿಕೆ ಮೇಲೆ ಕುಳಿತರೆ ಇವರು ಕೆಳಗೆ ಕೂರಬೇಕಾಗುತ್ತದೆ. ರಾಜರು ಕೆಳಗೆ ಕೂರಲಿಕ್ಕೂ ಸಿದ್ಧರಿದ್ದಾರೆ. ಪಕ್ಷದ ನಾಯಕರು ಮೈಸೂರಿಗೆ ಬಂದಾಗ ಹೋಟೆಲ್ಗಳ ಮುಂದೆ ನಿಂತು ಹೂಗುಚ್ಛ ಹಿಡಿದು ಕಾಯಲು ಸಿದ್ಧರಾಗಿದ್ದಾರೆ. ಇದು ನಿಜಕ್ಕೂ ಖುಷಿ ಕೊಡುವ ಸಂಗತಿ’ ಎಂದು ಲೇವಡಿ ಮಾಡಿದರು.
‘ ಮೈಸೂರು ರಾಜರು ಮೈಸೂರು ಅರಮನೆ, ವಸ್ತುಪ್ರದರ್ಶನ ಪ್ರಾಧಿಕಾರ ಮೈದಾನ, ಇಲ್ಲಿನ ವಿವಿಧ ಬಡಾವಣೆ ಸೇರಿದಂತೆ ಅನೇಕ ಸಾರ್ವಜನಿಕ ಆಸ್ತಿಗಳ ಮೇಲೆ ದಾವೆ ಹೂಡಿ ತಮ್ಮ ಆಸ್ತಿ ಎಂದು ಆದೇಶ ತಂದಿದ್ದಾರೆ. ಈಗ ಪ್ರಜೆಗಳ ಪ್ರತಿನಿಧಿ ಎಂದಾದ ಮೇಲೆ ಜನರ ನೋವಿಗೆ ಸ್ಪಂದಿಸಬೇಕಾಗುತ್ತದೆ. ಯದುವೀರ್ ಅವರು ಈ ಎಲ್ಲ ಆಸ್ತಿಯನ್ನು ಜನರಿಗೆ ಬಿಟ್ಟುಕೊಡುತ್ತಾರೆ. ಇದರಿಂದ ಮೈಸೂರಿಗೆ ಅನುಕೂಲ ಆಗುತ್ತದೆ.
‘ ಮನೆ ಮುಂದೆ ಕಸ ಬಿದ್ದಾಗ, ರೈತರ ಹಸು ಕಳುವಾದಾಗ ಜನ ನನಗೆ ಕರೆ ಮಾಡುತ್ತಿದ್ದರು. ಈಗ ಈ ಎಲ್ಲವನ್ನೂ ಬಗೆಹರಿಸಲು ಸ್ವತಃ ಮಹಾರಾಜರೇ ಬರುತ್ತಿದ್ದಾರೆ. ಇದರಿಂದ ಜನಸಾಮಾನ್ಯರ ಎಲ್ಲ ಸಮಸ್ಯೆಗಳೂ ಬಗೆಹರಿಯಲಿವೆ’ ಎಂದರು.