<p><strong>ಮೈಸೂರು:</strong> ‘ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ನಮ್ಮಲ್ಲಿ ಯಾವ ತೀರ್ಮಾನವೂ ಆಗಿಲ್ಲ. ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವುದು ಸರಿಯಲ್ಲ. ಮೊದಲು ಒಟ್ಟಾಗಿ ಸೇರಿ ಚುನಾವಣೆ ಗೆಲ್ಲಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಇಲ್ಲಿ ಹೇಳಿದರು.</p>.ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ | ಡಿಕೆಶಿಗೆ ಜ್ಞಾನೋದಯವಾಗಿದೆ: ಕುಮಾರಸ್ವಾಮಿ.<p>ಎಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂಬ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರ ಹೇಳಿಕೆಗೆ ಮೇಲಿನಂತೆ ಅವರು ಪ್ರತಿಕ್ರಿಯಿಸಿದರು. </p><p>‘ಅವರವರ ಪಕ್ಷದ ವಿಚಾರವನ್ನು ಅವರವರು ಮಾತನಾಡುತ್ತಾರೆ. ಎನ್ಡಿಎ ವಿಚಾರದಲ್ಲಿ, ಮುಖ್ಯಮಂತ್ರಿ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷರು ಒಳಗೊಂಡ ಹೈಕಮಾಂಡ್ ತೀರ್ಮಾನಿಸುತ್ತದೆ. ರಾಜ್ಯದ ಮೈತ್ರಿಗಿಂತ ಎನ್ಡಿಎ ಒಕ್ಕೂಟದ ನಿರ್ಧಾರ ಬಹಳ ಮುಖ್ಯವಾಗುತ್ತದೆ’ ಎಂದರು.</p><p>‘ಬಿಜೆಪಿ ಶಿಸ್ತುಬದ್ಧ ಪಕ್ಷ. ನಮ್ಮಲ್ಲಿ ಮುಖ್ಯಮಂತ್ರಿ ಆಯ್ಕೆ ಹೇಗೆ ನಡೆಯುತ್ತದೆ, ಏನೆಲ್ಲಾ ಅಚ್ಚರಿಯ ಆಯ್ಕೆ ಆಗುತ್ತದೆ ಎಂಬುದು ಎಲ್ಲರೂ ನೋಡಿದ್ದೀರಿ. ಈ ಹಂತದಲ್ಲಿ ಯಾವುದೂ ನೂರಕ್ಕೆ ನೂರರಷ್ಟು ಅಂತಿಮವಾಗಿಲ್ಲ’ ಎಂದು ಹೇಳಿದರು.</p>.ಯುವಜನರ ಕಿಚ್ಚು ರಾಜ್ಯ ವ್ಯಾಪಿಸುವುದರಲ್ಲಿ ಸಂಶಯವಿಲ್ಲ: ನಿಖಿಲ್ ಕುಮಾರಸ್ವಾಮಿ.<p>‘ಬಿಬಿಎ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ವಿಚಾರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಇನ್ನೂ ಮಾತುಕತೆ ನಡೆಯುತ್ತಿದೆ. ಇದು ಕೂಡ ಅಂತಿಮವಾಗಿಲ್ಲ’ ಎಂದು ಸ್ಪಷ್ಟಪಡಿಸಿದರು.</p><p>‘ಜಿಬಿಎ ಚುನಾವಣೆ ಮೈತ್ರಿ ಸಂಬಂಧ ನಮ್ಮ ಉಸ್ತುವಾರಿ ಜೊತೆ ಮಾತನಾಡಿದ್ದೇನೆ. ನಾನು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ರಾಜ್ಯದ ನಾಯಕರು ಅಭಿಪ್ರಾಯ ಕೊಟ್ಟಿದ್ದೇವೆ. ಅದೇನೇ ಇದ್ದರೂ, ದೇಶದ ಹಿತದೃಷ್ಟಿಯಿಂದ ಹೈಕಮಾಂಡ್ ಮಾಡುವ ನಿರ್ಧಾರಕ್ಕೆ ಬದ್ಧ ಎಂದಿದ್ದೇವೆ’ ಎಂದರು.</p><p>‘ಈಗ ದೋಸ್ತಿ ಇದೆ. ಅದು ಮುಂದುವರಿಯುತ್ತದೆ. ಆದರೆ, ಮುಖ್ಯಮಂತ್ರಿ ಸ್ಥಾನದ ಸಂಬಂಧ ಯಾವುದೇ ತೀರ್ಮಾನ ಆಗಿಲ್ಲ. ಈಗಲೇ ಆಗುವುದೂ ಇಲ್ಲ’ ಎಂದು ಪ್ರತಿಕ್ರಿಯಿಸಿದರು.</p>.ನಾನು ರಾಮನಗರಕ್ಕೆ ಫಿಕ್ಸ್; ಅನುಮಾನ ಬೇಡ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ನಮ್ಮಲ್ಲಿ ಯಾವ ತೀರ್ಮಾನವೂ ಆಗಿಲ್ಲ. ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವುದು ಸರಿಯಲ್ಲ. ಮೊದಲು ಒಟ್ಟಾಗಿ ಸೇರಿ ಚುನಾವಣೆ ಗೆಲ್ಲಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಇಲ್ಲಿ ಹೇಳಿದರು.</p>.ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ | ಡಿಕೆಶಿಗೆ ಜ್ಞಾನೋದಯವಾಗಿದೆ: ಕುಮಾರಸ್ವಾಮಿ.<p>ಎಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂಬ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರ ಹೇಳಿಕೆಗೆ ಮೇಲಿನಂತೆ ಅವರು ಪ್ರತಿಕ್ರಿಯಿಸಿದರು. </p><p>‘ಅವರವರ ಪಕ್ಷದ ವಿಚಾರವನ್ನು ಅವರವರು ಮಾತನಾಡುತ್ತಾರೆ. ಎನ್ಡಿಎ ವಿಚಾರದಲ್ಲಿ, ಮುಖ್ಯಮಂತ್ರಿ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷರು ಒಳಗೊಂಡ ಹೈಕಮಾಂಡ್ ತೀರ್ಮಾನಿಸುತ್ತದೆ. ರಾಜ್ಯದ ಮೈತ್ರಿಗಿಂತ ಎನ್ಡಿಎ ಒಕ್ಕೂಟದ ನಿರ್ಧಾರ ಬಹಳ ಮುಖ್ಯವಾಗುತ್ತದೆ’ ಎಂದರು.</p><p>‘ಬಿಜೆಪಿ ಶಿಸ್ತುಬದ್ಧ ಪಕ್ಷ. ನಮ್ಮಲ್ಲಿ ಮುಖ್ಯಮಂತ್ರಿ ಆಯ್ಕೆ ಹೇಗೆ ನಡೆಯುತ್ತದೆ, ಏನೆಲ್ಲಾ ಅಚ್ಚರಿಯ ಆಯ್ಕೆ ಆಗುತ್ತದೆ ಎಂಬುದು ಎಲ್ಲರೂ ನೋಡಿದ್ದೀರಿ. ಈ ಹಂತದಲ್ಲಿ ಯಾವುದೂ ನೂರಕ್ಕೆ ನೂರರಷ್ಟು ಅಂತಿಮವಾಗಿಲ್ಲ’ ಎಂದು ಹೇಳಿದರು.</p>.ಯುವಜನರ ಕಿಚ್ಚು ರಾಜ್ಯ ವ್ಯಾಪಿಸುವುದರಲ್ಲಿ ಸಂಶಯವಿಲ್ಲ: ನಿಖಿಲ್ ಕುಮಾರಸ್ವಾಮಿ.<p>‘ಬಿಬಿಎ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ವಿಚಾರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಇನ್ನೂ ಮಾತುಕತೆ ನಡೆಯುತ್ತಿದೆ. ಇದು ಕೂಡ ಅಂತಿಮವಾಗಿಲ್ಲ’ ಎಂದು ಸ್ಪಷ್ಟಪಡಿಸಿದರು.</p><p>‘ಜಿಬಿಎ ಚುನಾವಣೆ ಮೈತ್ರಿ ಸಂಬಂಧ ನಮ್ಮ ಉಸ್ತುವಾರಿ ಜೊತೆ ಮಾತನಾಡಿದ್ದೇನೆ. ನಾನು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ರಾಜ್ಯದ ನಾಯಕರು ಅಭಿಪ್ರಾಯ ಕೊಟ್ಟಿದ್ದೇವೆ. ಅದೇನೇ ಇದ್ದರೂ, ದೇಶದ ಹಿತದೃಷ್ಟಿಯಿಂದ ಹೈಕಮಾಂಡ್ ಮಾಡುವ ನಿರ್ಧಾರಕ್ಕೆ ಬದ್ಧ ಎಂದಿದ್ದೇವೆ’ ಎಂದರು.</p><p>‘ಈಗ ದೋಸ್ತಿ ಇದೆ. ಅದು ಮುಂದುವರಿಯುತ್ತದೆ. ಆದರೆ, ಮುಖ್ಯಮಂತ್ರಿ ಸ್ಥಾನದ ಸಂಬಂಧ ಯಾವುದೇ ತೀರ್ಮಾನ ಆಗಿಲ್ಲ. ಈಗಲೇ ಆಗುವುದೂ ಇಲ್ಲ’ ಎಂದು ಪ್ರತಿಕ್ರಿಯಿಸಿದರು.</p>.ನಾನು ರಾಮನಗರಕ್ಕೆ ಫಿಕ್ಸ್; ಅನುಮಾನ ಬೇಡ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>