<p><strong>ಮೈಸೂರು:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮಿಳುನಾಡು ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ ಆಗುವ ಮಾರ್ಗ ಮಧ್ಯೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಂದೆರಡು ನಿಮಿಷ ಪ್ರತ್ಯೇಕ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.</p><p>ಸಂಜೆ 5.15ರ ಸುಮಾರಿಗೆ ತಮಿಳುನಾಡಿನ ಗೂಡ್ಲೂರಿನಿಂದ ಹೆಲಿಕಾಪ್ಟರ್ ಮೂಲಕ ವಿಮಾನ ನಿಲ್ದಾಣಕ್ಕೆ ವಾಪಸಾದ ರಾಹುಲ್ ಅವರನ್ನು ಸಿದ್ದರಾಮಯ್ಯ, ಶಿವಕುಮಾರ್ ಭೇಟಿಯಾದರು. ಈ ವೇಳೆ ವಿಮಾನದ ಬಳಿಯೇ ಇಬ್ಬರೊಂದಿಗೂ ರಾಹುಲ್ ಪ್ರತ್ಯೇಕವಾಗಿ ಚುಟುಕು ಮಾತುಕತೆ ನಡೆಸಿದರು.</p><p><strong>ಸ್ವಾಗತ: </strong>ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಲ್ಲಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಸಿಎಂ, ಡಿಸಿಎಂ ಸ್ವಾಗತಿಸಿದರು.</p><p>ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದ ಸಿಎಂ, ರಾಹುಲ್ ಗಾಂಧಿ ಅವರಿಗೆ ಮೈಸೂರು ಅರಮನೆ ಮಾದರಿಯನ್ನು ಉಡುಗೊರೆಯಾಗಿ ನೀಡಿದರು. ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್, ಕೆ. ವೆಂಕಟೇಶ್ ಜೊತೆಗಿದ್ದರು.</p><p>ಬಳಿಕ ರಾಹುಲ್ ಗಾಂಧಿ ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡ್ಲೂರಿಗೆ ತೆರಳಿದರು. ಸಂಜೆ ಅದೇ ಹೆಲಿಕಾಪ್ಟರ್ನಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ವಾಪಸಾಗಿ ದೆಹಲಿಗೆ ಪ್ರಯಾಣ ಬೆಳೆಸಿದರು.</p><p>ಮಧ್ಯಾಹ್ನ ಒಂದೇ ವಿಮಾನದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಬೆಂಗಳೂರಿನಿಂದ ಮೈಸೂರಿಗೆ ಬಂದಿಳಿದರು. ರಾಹುಲ್ ಭೇಟಿ ಬಳಿಕ ಸಿ.ಎಂ. ತಮ್ಮ ನಿವಾಸಕ್ಕೆ ತೆರಳಿದರೆ, ಡಿಸಿಎಂ ಹೋಟೆಲ್ನಲ್ಲಿ ವಿಶ್ರಾಂತಿ ಪಡೆದರು. ಸಂಜೆ ರಾಹುಲ್ರನ್ನು ಬೀಳ್ಕೊಟ್ಟ ಬಳಿಕ ಒಂದೇ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು.</p><p>‘ರಾಹುಲ್ ಗಾಂಧಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದು, ಅವರನ್ನು ನಾವೆಲ್ಲ ಒಟ್ಟಾಗಿ ಭೇಟಿಯಾಗಿದ್ದೇವೆ. ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ’ ಎಂದು ಸಿದ್ದರಾಮಯ್ಯ ಪತ್ರಕರ್ತರಿಗೆ ತಿಳಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮಿಳುನಾಡು ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ ಆಗುವ ಮಾರ್ಗ ಮಧ್ಯೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಂದೆರಡು ನಿಮಿಷ ಪ್ರತ್ಯೇಕ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.</p><p>ಸಂಜೆ 5.15ರ ಸುಮಾರಿಗೆ ತಮಿಳುನಾಡಿನ ಗೂಡ್ಲೂರಿನಿಂದ ಹೆಲಿಕಾಪ್ಟರ್ ಮೂಲಕ ವಿಮಾನ ನಿಲ್ದಾಣಕ್ಕೆ ವಾಪಸಾದ ರಾಹುಲ್ ಅವರನ್ನು ಸಿದ್ದರಾಮಯ್ಯ, ಶಿವಕುಮಾರ್ ಭೇಟಿಯಾದರು. ಈ ವೇಳೆ ವಿಮಾನದ ಬಳಿಯೇ ಇಬ್ಬರೊಂದಿಗೂ ರಾಹುಲ್ ಪ್ರತ್ಯೇಕವಾಗಿ ಚುಟುಕು ಮಾತುಕತೆ ನಡೆಸಿದರು.</p><p><strong>ಸ್ವಾಗತ: </strong>ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಲ್ಲಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಸಿಎಂ, ಡಿಸಿಎಂ ಸ್ವಾಗತಿಸಿದರು.</p><p>ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದ ಸಿಎಂ, ರಾಹುಲ್ ಗಾಂಧಿ ಅವರಿಗೆ ಮೈಸೂರು ಅರಮನೆ ಮಾದರಿಯನ್ನು ಉಡುಗೊರೆಯಾಗಿ ನೀಡಿದರು. ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್, ಕೆ. ವೆಂಕಟೇಶ್ ಜೊತೆಗಿದ್ದರು.</p><p>ಬಳಿಕ ರಾಹುಲ್ ಗಾಂಧಿ ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡ್ಲೂರಿಗೆ ತೆರಳಿದರು. ಸಂಜೆ ಅದೇ ಹೆಲಿಕಾಪ್ಟರ್ನಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ವಾಪಸಾಗಿ ದೆಹಲಿಗೆ ಪ್ರಯಾಣ ಬೆಳೆಸಿದರು.</p><p>ಮಧ್ಯಾಹ್ನ ಒಂದೇ ವಿಮಾನದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಬೆಂಗಳೂರಿನಿಂದ ಮೈಸೂರಿಗೆ ಬಂದಿಳಿದರು. ರಾಹುಲ್ ಭೇಟಿ ಬಳಿಕ ಸಿ.ಎಂ. ತಮ್ಮ ನಿವಾಸಕ್ಕೆ ತೆರಳಿದರೆ, ಡಿಸಿಎಂ ಹೋಟೆಲ್ನಲ್ಲಿ ವಿಶ್ರಾಂತಿ ಪಡೆದರು. ಸಂಜೆ ರಾಹುಲ್ರನ್ನು ಬೀಳ್ಕೊಟ್ಟ ಬಳಿಕ ಒಂದೇ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು.</p><p>‘ರಾಹುಲ್ ಗಾಂಧಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದು, ಅವರನ್ನು ನಾವೆಲ್ಲ ಒಟ್ಟಾಗಿ ಭೇಟಿಯಾಗಿದ್ದೇವೆ. ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ’ ಎಂದು ಸಿದ್ದರಾಮಯ್ಯ ಪತ್ರಕರ್ತರಿಗೆ ತಿಳಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>