‘ಪರಿಹಾರ ನೀಡದಿದ್ದರೆ ಕಚೇರಿಗೆ ಮುತ್ತಿಗೆ’
‘ದಾಳಿಗೊಳಗಾಗಿ ಎರಡು ಕಣ್ಣುಗಳನ್ನು ಕಳೆದುಕೊಂಡು ಸಾವು-ಬದುಕಿನ ನಡುವೆ ಹೋರಾಟದಲ್ಲಿರುವ ಮಹದೇವು ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಜತೆಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು’ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.
‘ಈ ಭಾಗದಲ್ಲಿ ಹುಲಿ ಹಾಗೂ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸರ್ಕಾರ ಈ ಬಗ್ಗೆ ತುರ್ತಾಗಿ ಕ್ರಮವಹಿಸಬೇಕು. ಇಲ್ಲದಿದ್ದರೆ ಹೆಡಿಯಾಲ ವಲಯದ ಅರಣ್ಯ ಕಚೇರಿಯನ್ನು ಮುತ್ತಿಗೆ ಹಾಕುತ್ತವೆ’ ಎಂದು ಎಚ್ಚರಿಸಿದರು.