ಚೆಕ್ ವಿತರಿಸಿದ ಮಾತನಾಡಿದ ಶಾಸಕ ವೆಂಕಟರಾವ್ ನಾಡಗೌಡ,‘ಕೋವಿಡ್ನಿಂದ ಮೃತಪಟ್ಟ 110 ಜನರಲ್ಲಿ ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ, ಇನ್ನು ಕೆಲವರು ಬೇರೆ ಜಿಲ್ಲೆ, ರಾಜ್ಯಗಳಿಗೆ ಹೋಗಿ ಮೃತಪಟ್ಟಿರುವ ಘಟನೆಗಳಿವೆ. ಕೋವಿಡ್ ದೃಢೀಕರಣ ದಾಖಲಾತಿಗಳು ಇದ್ದರೆ ಮಾತ್ರ ಆನ್ಲೈನ್ನಲ್ಲಿ ಅರ್ಜಿಗಳು ಸ್ವೀಕಾರವಾಗುತ್ತವೆ. ಆದ ಕಾರಣ ಈಗಾಗಲೇ ತಹಶೀಲ್ದಾರರಿಗೆ ಆಪ್ಲೈನ್ ಅರ್ಜಿಗಳನ್ನು ಸ್ವೀಕರಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗದ ಅರ್ಜಿಗಳು ಬಂದಿವೆ. ಜಿಲ್ಲಾಧಿಕಾರಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಸರ್ಕಾರಿ ಆಸ್ಪತ್ರೆಯ ದೃಢೀಕರಣ ಇಲ್ಲದೆ ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೂ ಪರಿಹಾರ ಕೊಡಿಸಲು ಪ್ರಯತ್ನಿಸುವುದಾಗಿ’ ತಿಳಿಸಿದರು.