‘ದೇವದುರ್ಗದಲ್ಲಿ ಟೋಲ್ ಸ್ಥಗಿತಗೊಳಿಸಿ’
‘ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಕಡೆಗಳಲ್ಲಿ ಟೋಲ್ ನಿರ್ಮಿಸಿರುವ ಕಾರಣ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈ ಟೋಲ್ಗಳನ್ನು ಸ್ಥಗಿತಗೊಳಿಸಿ ಜನರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಶಾಸಕಿ ಕರೆಮ್ಮ ನಾಯಕ ಮನವಿ ಮಾಡಿದರು. ‘ಕುರ್ಡಿಯಿಂದ ಕಪಗಲ್ ಮಧ್ಯೆದ ರಸ್ತೆ ತಿರುವು ಮುರುವು ಇದೆ. ಅಲ್ಲಿ ಅಪಘಾತಗಳು ಹೆಚ್ಚುತ್ತಿವೆ. ತಿರುವು ಮುರುವು ತಪ್ಪಿಸಿ ನೇರವಾದ ರಸ್ತೆ ನಿರ್ಮಾಣ ಮಾಡಲು ಕ್ರಮ ವಹಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಹೇಳಿದರು.