<p><strong>ರಾಯಚೂರು</strong>: ‘ಗ್ಯಾರಂಟಿ ಯೋಜನೆಗಳಿಂದಾಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರಿಗೆ ಬೆಲೆಯೇ ಇಲ್ಲವಾಗಿದೆ. ಗ್ಯಾರಂಟಿಯಿಂದಾಗಿ ಅನ್ಯ ಯೋಜನೆಗಳಿಗೆ ಅನುದಾನ ದೊರಕದಿರುವ ಬಗ್ಗೆ ಎಲ್ಲ ಪಕ್ಷಗಳ ಶಾಸಕರಲ್ಲೂ ಅಸಮಾಧಾನ ಇದೆ‘ ಎಂದು ದೇವದುರ್ಗ ಶಾಸಕಿ ಕರೆಮ್ಮ ನಾಯಕ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.</p>.<p>‘ಜನ ಸಾಮಾನ್ಯರಿಗೆ ನೇರವಾಗಿ ಅನುಕೂಲವಾಗುವ ಯೋಜನೆಗಳಿಗೆ ನನ್ನ ವಿರೋಧವಿಲ್ಲ. ದೇವದುರ್ಗ ಕ್ಷೇತ್ರಕ್ಕೆ ಕೆಕೆಆರ್ಡಿಬಿಯ ಅನುದಾನ ದೊರಕುತ್ತಿದೆ. ಆದರೆ, ಸರ್ಕಾರ ಇನ್ನುಳಿದ ಯೋಜನೆಗಳಿಗೆ ಅನುದಾನ ಕೊಡದಿರುವ ಬಗ್ಗೆ ಎಲ್ಲ ಶಾಸಕರಿಗೂ ಅಸಮಾಧಾನವಿದೆ’ ಎಂದು ನಗರದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕಳೆದ ವರ್ಷದ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಿಡುಗಡೆಯಾಗಿಲ್ಲ. ಅಭಿವೃದ್ಧಿ ಕಾಮಗಾರಿಗಳ ಬಿಲ್ ಬಾಕಿ ಉಳಿದುಕೊಂಡಿವೆ. ಹಣ ಇಲ್ಲದ ಕಾರಣ ಸಾರ್ವಜನಿಕರು ಕೇಳುವ ಸಣ್ಣಪುಟ್ಟ ಮೂಲಸೌಕರ್ಯಗಳನ್ನು ಸಹ ಒದಗಿಸಲು ಸಾಧ್ಯವಾಗುತ್ತಿಲ್ಲ‘ ಎಂದು ಹೇಳಿದರು.</p>.<p>‘ಜೂನ್ 27ರಂದು ಚಿಕ್ಕಹೊನ್ನಕುಣಿ ಬಳಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪ್ರತಿಮೆ ಅನಾವರಣಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರೇ ಬರುತ್ತಿದ್ದಾರೆ. ದೇವದುರ್ಗ ಪಟ್ಟಣದಲ್ಲಿ ನಡೆಯಲಿರುವ ಜನತಾದಳ ಸಮಾವೇಶದಲ್ಲೂ ಭಾಗವಹಿಸಲಿದ್ದಾರೆ‘ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಗ್ಯಾರಂಟಿ ಯೋಜನೆಗಳಿಂದಾಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರಿಗೆ ಬೆಲೆಯೇ ಇಲ್ಲವಾಗಿದೆ. ಗ್ಯಾರಂಟಿಯಿಂದಾಗಿ ಅನ್ಯ ಯೋಜನೆಗಳಿಗೆ ಅನುದಾನ ದೊರಕದಿರುವ ಬಗ್ಗೆ ಎಲ್ಲ ಪಕ್ಷಗಳ ಶಾಸಕರಲ್ಲೂ ಅಸಮಾಧಾನ ಇದೆ‘ ಎಂದು ದೇವದುರ್ಗ ಶಾಸಕಿ ಕರೆಮ್ಮ ನಾಯಕ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.</p>.<p>‘ಜನ ಸಾಮಾನ್ಯರಿಗೆ ನೇರವಾಗಿ ಅನುಕೂಲವಾಗುವ ಯೋಜನೆಗಳಿಗೆ ನನ್ನ ವಿರೋಧವಿಲ್ಲ. ದೇವದುರ್ಗ ಕ್ಷೇತ್ರಕ್ಕೆ ಕೆಕೆಆರ್ಡಿಬಿಯ ಅನುದಾನ ದೊರಕುತ್ತಿದೆ. ಆದರೆ, ಸರ್ಕಾರ ಇನ್ನುಳಿದ ಯೋಜನೆಗಳಿಗೆ ಅನುದಾನ ಕೊಡದಿರುವ ಬಗ್ಗೆ ಎಲ್ಲ ಶಾಸಕರಿಗೂ ಅಸಮಾಧಾನವಿದೆ’ ಎಂದು ನಗರದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕಳೆದ ವರ್ಷದ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಿಡುಗಡೆಯಾಗಿಲ್ಲ. ಅಭಿವೃದ್ಧಿ ಕಾಮಗಾರಿಗಳ ಬಿಲ್ ಬಾಕಿ ಉಳಿದುಕೊಂಡಿವೆ. ಹಣ ಇಲ್ಲದ ಕಾರಣ ಸಾರ್ವಜನಿಕರು ಕೇಳುವ ಸಣ್ಣಪುಟ್ಟ ಮೂಲಸೌಕರ್ಯಗಳನ್ನು ಸಹ ಒದಗಿಸಲು ಸಾಧ್ಯವಾಗುತ್ತಿಲ್ಲ‘ ಎಂದು ಹೇಳಿದರು.</p>.<p>‘ಜೂನ್ 27ರಂದು ಚಿಕ್ಕಹೊನ್ನಕುಣಿ ಬಳಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪ್ರತಿಮೆ ಅನಾವರಣಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರೇ ಬರುತ್ತಿದ್ದಾರೆ. ದೇವದುರ್ಗ ಪಟ್ಟಣದಲ್ಲಿ ನಡೆಯಲಿರುವ ಜನತಾದಳ ಸಮಾವೇಶದಲ್ಲೂ ಭಾಗವಹಿಸಲಿದ್ದಾರೆ‘ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>