<p><strong>ಶಿವಮೊಗ್ಗ</strong>: ಬಿಟ್ಟೂ ಬಿಡದೆ ಸುರಿಯುತ್ತಿರುವ ಬಿರು ಮಳೆಯ ನಡುವೆ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಲ್ಲಿ ನಿರ್ಮಿಸಿದ ನೂತನ ತೂಗು ಸೇತುವೆಯನ್ನು ಕೇಂದ್ರದ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಿದರು.</p><p>ಈ ವೇಳೆ ಸೇತುವೆಯ ಲೋಕಾರ್ಪಣೆಯ ಸ್ಮರಣೆಯ ಶಿಲಾನ್ಯಾಸ ಮಾಡಿದ ಸಚಿವ ನಿತಿನ್ ಗಡ್ಕರಿ ನಂತರ ಶರಾವತಿ ನದಿಗೆ ಬಾಗಿನ ಸಮರ್ಪಿಸಿದರು.</p><p>ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಾಗರದ ಮಂಕಳೆಯ ಹೆಲಿಪ್ಯಾಡ್ ಗೆ ಬಂದ ಸಚಿವ ನಿತಿನ್ ಗಡ್ಕರಿ ಅಲ್ಲಿಂದ ರಸ್ತೆ ಮಾರ್ಗದಲ್ಲಿ ಸೇತುವೆ ಬಳಿಗೆ ಬಂದರು.</p><p>ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಎಸ್. ರಾಮಪ್ಪ, ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಕಾಗೋಡು ಈ ವೇಳೆ ಉಪಸ್ಥಿತರಿದ್ದರು.</p><p>ಲೋಕಾರ್ಪಣೆಗೂ ಮುನ್ನ ಸೇತುವೆಯ ಸುರಕ್ಷತೆಗೆ ಪ್ರಾರ್ಥಿಸಿ ಸ್ಥಳೀಯರು ಗಣ ಹೋಮ ಹಾಗೂ ವಿಶೇಷ ಪೂಜೆ ನೆರವೇರಿಸಿದರು.</p><p>ಸೇತುವೆಯನ್ನು ಸ್ಥಳೀಯರು ಮಾವಿನ ತೋರಣ-ತಳಿರುಗಳಿಂದ ಅಲಂಕರಿಸಿದ್ದು, ತುಮರಿ, ಬ್ಯಾಕೋಡು, ಸಿಗಂದೂರು, ಕಳಸವಳ್ಳಿ ಭಾಗದ ದ್ವೀಪದ ನಿವಾಸಿಗಳು ನೂರಾರು ಸಂಖ್ಯೆಯಲ್ಲಿ ಛತ್ರಿಗಳ ಹಿಡಿದು, ರೇನ್ ಕೋಟ್, ಜರ್ಕಿನ್ ಧರಿಸಿ ಬಂದು ಲೋಕಾರ್ಪಣೆಯ ಕ್ಷಣವನ್ನು ಕಣ್ತುಂಬಿಕೊಂಡರು. ತಮ್ಮ ದಶಕಗಳ ಸಂಕಷ್ಟ ಪರಿಹಾರವಾಗಿದ್ದು, ಕಂಡು ಪುಳಕಗೊಂಡರು. ಸೇತುವೆಯ ಎರಡೂ ಬದಿಯಲ್ಲಿ ಛತ್ರಿ ಹಿಡಿದು ಓಡಾಡಿ ಸಂತಸಗೊಂಡರು.</p><p>ಸೇತುವೆಯ ಹಾದಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಲ್ಹಾದ ಜೋಶಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಭಾವಚಿತ್ರ ಇರುವ ಬ್ಯಾನರ್ ಗಳು ರಾರಾಜಿಸಿದವು.</p><p>ಸಾಗರ-ಮರಕುಟಿಕ ನಡುವಿನ ರಾಷ್ಟ್ರೀಯ ಹೆದ್ದಾರಿ 369ಇ ಹಾದಿಯಲ್ಲಿ ಬರುವ ಈ ಸೇತುವೆ ಲಿಂಗನಮಕ್ಕಿ ಅಣೆಕಟ್ಟೆಯ ಶರಾವತಿ ಹಿನ್ನೀರ ವ್ಯಾಪ್ತಿಯಲ್ಲಿ 2.44 ಕಿ.ಮೀ ವಿಸ್ತೀರ್ಣ ಹೊಂದಿದ್ದು, 16 ಮೀಟರ್ ಅಗಲ ಇದೆ. ₹473 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ.</p><p>ಸಾಗರ ತಾಲ್ಲೂಕಿನ ಕರೂರು-ಬಾರಂಗಿಯ ಹೋಬಳಿಗಳ ವ್ಯಾಪ್ತಿಯ ಗ್ರಾಮಗಳು ಹಾಗೂ</p><p>ಮಲೆನಾಡಿನ ಶ್ರದ್ಧಾಕೇಂದ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಈ ಸೇತುವೆ ಪ್ರಮುಖ ಸಂಪರ್ಕ ಮಾರ್ಗವಾಗಿದೆ.</p>.<h2>ದೂರ ಉಳಿದ ಕಾಂಗ್ರೆಸ್ ನಾಯಕರು..</h2><p>ಸೇತುವೆ ಲೋಕಾರ್ಪಣೆ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಶಿವಮೊಗ್ಗ ಜಿಲ್ಲೆ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ನಾಯಕರು ಗೈರು ಹಾಜರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಬಿಟ್ಟೂ ಬಿಡದೆ ಸುರಿಯುತ್ತಿರುವ ಬಿರು ಮಳೆಯ ನಡುವೆ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಲ್ಲಿ ನಿರ್ಮಿಸಿದ ನೂತನ ತೂಗು ಸೇತುವೆಯನ್ನು ಕೇಂದ್ರದ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಿದರು.</p><p>ಈ ವೇಳೆ ಸೇತುವೆಯ ಲೋಕಾರ್ಪಣೆಯ ಸ್ಮರಣೆಯ ಶಿಲಾನ್ಯಾಸ ಮಾಡಿದ ಸಚಿವ ನಿತಿನ್ ಗಡ್ಕರಿ ನಂತರ ಶರಾವತಿ ನದಿಗೆ ಬಾಗಿನ ಸಮರ್ಪಿಸಿದರು.</p><p>ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಾಗರದ ಮಂಕಳೆಯ ಹೆಲಿಪ್ಯಾಡ್ ಗೆ ಬಂದ ಸಚಿವ ನಿತಿನ್ ಗಡ್ಕರಿ ಅಲ್ಲಿಂದ ರಸ್ತೆ ಮಾರ್ಗದಲ್ಲಿ ಸೇತುವೆ ಬಳಿಗೆ ಬಂದರು.</p><p>ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಎಸ್. ರಾಮಪ್ಪ, ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಕಾಗೋಡು ಈ ವೇಳೆ ಉಪಸ್ಥಿತರಿದ್ದರು.</p><p>ಲೋಕಾರ್ಪಣೆಗೂ ಮುನ್ನ ಸೇತುವೆಯ ಸುರಕ್ಷತೆಗೆ ಪ್ರಾರ್ಥಿಸಿ ಸ್ಥಳೀಯರು ಗಣ ಹೋಮ ಹಾಗೂ ವಿಶೇಷ ಪೂಜೆ ನೆರವೇರಿಸಿದರು.</p><p>ಸೇತುವೆಯನ್ನು ಸ್ಥಳೀಯರು ಮಾವಿನ ತೋರಣ-ತಳಿರುಗಳಿಂದ ಅಲಂಕರಿಸಿದ್ದು, ತುಮರಿ, ಬ್ಯಾಕೋಡು, ಸಿಗಂದೂರು, ಕಳಸವಳ್ಳಿ ಭಾಗದ ದ್ವೀಪದ ನಿವಾಸಿಗಳು ನೂರಾರು ಸಂಖ್ಯೆಯಲ್ಲಿ ಛತ್ರಿಗಳ ಹಿಡಿದು, ರೇನ್ ಕೋಟ್, ಜರ್ಕಿನ್ ಧರಿಸಿ ಬಂದು ಲೋಕಾರ್ಪಣೆಯ ಕ್ಷಣವನ್ನು ಕಣ್ತುಂಬಿಕೊಂಡರು. ತಮ್ಮ ದಶಕಗಳ ಸಂಕಷ್ಟ ಪರಿಹಾರವಾಗಿದ್ದು, ಕಂಡು ಪುಳಕಗೊಂಡರು. ಸೇತುವೆಯ ಎರಡೂ ಬದಿಯಲ್ಲಿ ಛತ್ರಿ ಹಿಡಿದು ಓಡಾಡಿ ಸಂತಸಗೊಂಡರು.</p><p>ಸೇತುವೆಯ ಹಾದಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಲ್ಹಾದ ಜೋಶಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಭಾವಚಿತ್ರ ಇರುವ ಬ್ಯಾನರ್ ಗಳು ರಾರಾಜಿಸಿದವು.</p><p>ಸಾಗರ-ಮರಕುಟಿಕ ನಡುವಿನ ರಾಷ್ಟ್ರೀಯ ಹೆದ್ದಾರಿ 369ಇ ಹಾದಿಯಲ್ಲಿ ಬರುವ ಈ ಸೇತುವೆ ಲಿಂಗನಮಕ್ಕಿ ಅಣೆಕಟ್ಟೆಯ ಶರಾವತಿ ಹಿನ್ನೀರ ವ್ಯಾಪ್ತಿಯಲ್ಲಿ 2.44 ಕಿ.ಮೀ ವಿಸ್ತೀರ್ಣ ಹೊಂದಿದ್ದು, 16 ಮೀಟರ್ ಅಗಲ ಇದೆ. ₹473 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ.</p><p>ಸಾಗರ ತಾಲ್ಲೂಕಿನ ಕರೂರು-ಬಾರಂಗಿಯ ಹೋಬಳಿಗಳ ವ್ಯಾಪ್ತಿಯ ಗ್ರಾಮಗಳು ಹಾಗೂ</p><p>ಮಲೆನಾಡಿನ ಶ್ರದ್ಧಾಕೇಂದ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಈ ಸೇತುವೆ ಪ್ರಮುಖ ಸಂಪರ್ಕ ಮಾರ್ಗವಾಗಿದೆ.</p>.<h2>ದೂರ ಉಳಿದ ಕಾಂಗ್ರೆಸ್ ನಾಯಕರು..</h2><p>ಸೇತುವೆ ಲೋಕಾರ್ಪಣೆ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಶಿವಮೊಗ್ಗ ಜಿಲ್ಲೆ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ನಾಯಕರು ಗೈರು ಹಾಜರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>