ಜಿಲ್ಲೆಯಲ್ಲಿ ಅಪರಾಧ ತಡೆಗಟ್ಟುವಲ್ಲಿ ಹಬ್ಬ, ಸಮಾರಂಭವನ್ನು ಗಣನೆಗೆ ತೆಗೆದುಕೊಳ್ಳದೆ ಶ್ರಮಿಸುತ್ತಿದ್ದಾರೆ. ಅಪರಾಧಗಳ ಪತ್ತೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಶ್ರಮ ಹೆಚ್ಚಿದೆ. ಪೊಲೀಸರು ತಮ್ಮ ಕರ್ತವ್ಯ ನಿಷ್ಠೆಯಿಂದ ಶಾಂತಿ ಸುವ್ಯವಸ್ಥೆಯನ್ನು ಉತ್ತಮವಾಗಿ ಕಾಪಾಡಿಕೊಂಡಿದ್ದಾರೆ. ಅಹಿತಕರ ಘಟನೆ ಸಂಭವಿಸಿದರೂ ಅದನ್ನು ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಹತೋಟಿಗೆ ತಂದಿದ್ದಾರೆ ಎಂದು ಮೆಚ್ಚುಗೆವ್ಯಕ್ತಪಡಿಸಿದರು.