<p><strong>ಶಿವಮೊಗ್ಗ</strong>: ಶಿವಮೊಗ್ಗ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಮಧ್ಯಾಹ್ನದ ನಂತರ ಮಳೆ ಬಿರುಸುಗೊಂಡಿದೆ.</p>.<p>ಕಳೆದೊಂದು ವಾರದಿಂದ ಕೊಂಚ ಬಿಡುವು ನೀಡಿದ್ದ ಮಳೆ ಮತ್ತೆ ಜೋರಾಗಿದೆ. ಶಿವಮೊಗ್ಗ, ಸಾಗರ, ಕೋಣಂದೂರು, ಸೊರಬ, ಭದ್ರಾವತಿ ಹಾಗೂ ಹೊಳೆಹೊನ್ನೂರಿನಲ್ಲಿ ಗುಡುಗು–ಸಿಡಿಲು ಸಹಿತ ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ಶಿಕಾರಿಪುರದಲ್ಲಿ ಸಾಧಾರಣ ಮಳೆಯಾಗಿದೆ. ಶಿವಮೊಗ್ಗದಲ್ಲಿ ರಾತ್ರಿಯೂ ಮಳೆ ಮುಂದುವರಿದಿತ್ತು.</p>.<p><strong>ಮರ ಬಿದ್ದು ಸಂಚಾರಕ್ಕೆ ಅಡ್ಡಿ:</strong></p>.<p>ಶಿವಮೊಗ್ಗ– ತೀರ್ಥಹಳ್ಳಿ ರಸ್ತೆಯಲ್ಲಿ ಗಾಜನೂರು ಚೆಕ್ಪೋಸ್ಟ್ ಸಮೀಪ ರಸ್ತೆಗೆ ಅಡ್ಡಲಾಗಿ ಬೃಹತ್ ಆಲದ ಮರವೊಂದು ಮಧ್ಯಾಹ್ನ ಬೀಸಿದ ಜೋರು ಗಾಳಿಗೆ ಬುಡಸಮೇತ ಉರುಳಿಬಿದ್ದಿತು. ಇದರಿಂದ ಶಿವಮೊಗ್ಗ– ತೀರ್ಥಹಳ್ಳಿ ರಸ್ತೆಯಲ್ಲಿ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.</p>.<p>ವಾಹನ ಸಂಚಾರಕ್ಕೆ ಹೆದ್ದಾರಿ ಪಕ್ಕ ಕಿರಿದಾದ ತಾತ್ಕಾಲಿಕ ರಸ್ತೆ ಮಾಡಿಕೊಟ್ಟ ಸಕ್ರೆಬೈಲು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮರವನ್ನು ತೆರವುಗೊಳಿಸಿದರು.</p>.<p><strong>ಸಿಡಿಲು ಬಡಿದು 4 ಹಸು ಸಾವು:</strong></p>.<p>ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಗ್ರಾಮದ ನಾಗರಾಜಯ್ಯ ಅವರ ಕೊಟ್ಟಿಗೆಯಲ್ಲಿದ್ದ 4 ಹಸುಗಳು ಮಂಗಳವಾರ ರಾತ್ರಿ ಸಿಡಿಲು ಬಡಿದು ಸಾವಿಗೀಡಾಗಿವೆ.</p>.<p>ಕೊಟ್ಟಿಗೆಯಲ್ಲಿದ್ದ ಹಸುಗಳು ಸಿಡಿಲ ಹೊಡೆತಕ್ಕೆ ಸಿಲುಕಿ ಕೂಗಿಕೊಂಡು ಮೃತಪಟ್ಟವು. ಕೊಟ್ಟಿಗೆಗೆ ಹತ್ತಿದ್ದ ಬೆಂಕಿಯನ್ನು ಗ್ರಾಮಸ್ಥರ ಸಹಕಾರದಿಂದ ಬೆಂಕಿ ನಂದಿಸಲಾಯಿತು.</p>.<p>ಬುಧವಾರ ಮಧ್ಯಾಹ್ನ ದಾವಣಗೆರೆ ನಗರ ಸೇರಿ ಹೊನ್ನಾಳಿ, ನ್ಯಾಮತಿ ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯಿತು. ಚಿತ್ರದುರ್ಗ ತಾಲ್ಲೂಕಿನ ಮೊಳಕಾಲ್ಮುರು ತಾಲ್ಲೂಕಿನಲ್ಲಿ ಬೆಳಿಗ್ಗೆ ಅರ್ಧತಾಸು ಉತ್ತಮ ಮಳೆ ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಶಿವಮೊಗ್ಗ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಮಧ್ಯಾಹ್ನದ ನಂತರ ಮಳೆ ಬಿರುಸುಗೊಂಡಿದೆ.</p>.<p>ಕಳೆದೊಂದು ವಾರದಿಂದ ಕೊಂಚ ಬಿಡುವು ನೀಡಿದ್ದ ಮಳೆ ಮತ್ತೆ ಜೋರಾಗಿದೆ. ಶಿವಮೊಗ್ಗ, ಸಾಗರ, ಕೋಣಂದೂರು, ಸೊರಬ, ಭದ್ರಾವತಿ ಹಾಗೂ ಹೊಳೆಹೊನ್ನೂರಿನಲ್ಲಿ ಗುಡುಗು–ಸಿಡಿಲು ಸಹಿತ ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ಶಿಕಾರಿಪುರದಲ್ಲಿ ಸಾಧಾರಣ ಮಳೆಯಾಗಿದೆ. ಶಿವಮೊಗ್ಗದಲ್ಲಿ ರಾತ್ರಿಯೂ ಮಳೆ ಮುಂದುವರಿದಿತ್ತು.</p>.<p><strong>ಮರ ಬಿದ್ದು ಸಂಚಾರಕ್ಕೆ ಅಡ್ಡಿ:</strong></p>.<p>ಶಿವಮೊಗ್ಗ– ತೀರ್ಥಹಳ್ಳಿ ರಸ್ತೆಯಲ್ಲಿ ಗಾಜನೂರು ಚೆಕ್ಪೋಸ್ಟ್ ಸಮೀಪ ರಸ್ತೆಗೆ ಅಡ್ಡಲಾಗಿ ಬೃಹತ್ ಆಲದ ಮರವೊಂದು ಮಧ್ಯಾಹ್ನ ಬೀಸಿದ ಜೋರು ಗಾಳಿಗೆ ಬುಡಸಮೇತ ಉರುಳಿಬಿದ್ದಿತು. ಇದರಿಂದ ಶಿವಮೊಗ್ಗ– ತೀರ್ಥಹಳ್ಳಿ ರಸ್ತೆಯಲ್ಲಿ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.</p>.<p>ವಾಹನ ಸಂಚಾರಕ್ಕೆ ಹೆದ್ದಾರಿ ಪಕ್ಕ ಕಿರಿದಾದ ತಾತ್ಕಾಲಿಕ ರಸ್ತೆ ಮಾಡಿಕೊಟ್ಟ ಸಕ್ರೆಬೈಲು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮರವನ್ನು ತೆರವುಗೊಳಿಸಿದರು.</p>.<p><strong>ಸಿಡಿಲು ಬಡಿದು 4 ಹಸು ಸಾವು:</strong></p>.<p>ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಗ್ರಾಮದ ನಾಗರಾಜಯ್ಯ ಅವರ ಕೊಟ್ಟಿಗೆಯಲ್ಲಿದ್ದ 4 ಹಸುಗಳು ಮಂಗಳವಾರ ರಾತ್ರಿ ಸಿಡಿಲು ಬಡಿದು ಸಾವಿಗೀಡಾಗಿವೆ.</p>.<p>ಕೊಟ್ಟಿಗೆಯಲ್ಲಿದ್ದ ಹಸುಗಳು ಸಿಡಿಲ ಹೊಡೆತಕ್ಕೆ ಸಿಲುಕಿ ಕೂಗಿಕೊಂಡು ಮೃತಪಟ್ಟವು. ಕೊಟ್ಟಿಗೆಗೆ ಹತ್ತಿದ್ದ ಬೆಂಕಿಯನ್ನು ಗ್ರಾಮಸ್ಥರ ಸಹಕಾರದಿಂದ ಬೆಂಕಿ ನಂದಿಸಲಾಯಿತು.</p>.<p>ಬುಧವಾರ ಮಧ್ಯಾಹ್ನ ದಾವಣಗೆರೆ ನಗರ ಸೇರಿ ಹೊನ್ನಾಳಿ, ನ್ಯಾಮತಿ ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯಿತು. ಚಿತ್ರದುರ್ಗ ತಾಲ್ಲೂಕಿನ ಮೊಳಕಾಲ್ಮುರು ತಾಲ್ಲೂಕಿನಲ್ಲಿ ಬೆಳಿಗ್ಗೆ ಅರ್ಧತಾಸು ಉತ್ತಮ ಮಳೆ ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>