<p><strong>ಸಾಗರ: ಒತ್ತಡದ ಜೀವನ ಶೈಲಿಯಿಂದ ಯುವಜನರೂ ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಹೇಳಿದರು.</strong></p>.<p><strong>ಇಲ್ಲಿನ ಸಾಗರ ಕರಾಟೆ ಸಂಸ್ಥೆ ಏರ್ಪಡಿಸಿದ್ದ ಏರೋಬಿಕ್ಸ್ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದವರು ತಮ್ಮ ಆರೋಗ್ಯ ರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದರು.</strong></p>.<p><strong> ಹಿಂದಿನ ತಲೆಮಾರಿನವರಿಗೆ ಹೋಲಿಸಿದರೆ ಈ ತಲೆಮಾರಿನವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದೆ ಎಂಬುದು ಗೊತ್ತಾಗುತ್ತದೆ. ಸತ್ವಯುತ ಆಹಾರ ಸೇವನೆಯ ಕೊರತೆ, ಬದಲಾಗಿರುವ ಜೀವನ ಶೈಲಿ ಇದಕ್ಕೆ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.</strong></p>.<p><strong>ಕರಾಟೆ ತರಬೇತುದಾರ ಪಂಚಪ್ಪ, ನವೀನ್ ಫರ್ನಾಂಡಿಸ್, ಚಂದ್ರಶೇಖರ್, ರಾಘವೇಂದ್ರ, ಶೇಷಾಚಲ, ಕಿರಣ್ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಒತ್ತಡದ ಜೀವನ ಶೈಲಿಯಿಂದ ಯುವಜನರೂ ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಹೇಳಿದರು.</strong></p>.<p><strong>ಇಲ್ಲಿನ ಸಾಗರ ಕರಾಟೆ ಸಂಸ್ಥೆ ಏರ್ಪಡಿಸಿದ್ದ ಏರೋಬಿಕ್ಸ್ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದವರು ತಮ್ಮ ಆರೋಗ್ಯ ರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದರು.</strong></p>.<p><strong> ಹಿಂದಿನ ತಲೆಮಾರಿನವರಿಗೆ ಹೋಲಿಸಿದರೆ ಈ ತಲೆಮಾರಿನವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದೆ ಎಂಬುದು ಗೊತ್ತಾಗುತ್ತದೆ. ಸತ್ವಯುತ ಆಹಾರ ಸೇವನೆಯ ಕೊರತೆ, ಬದಲಾಗಿರುವ ಜೀವನ ಶೈಲಿ ಇದಕ್ಕೆ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.</strong></p>.<p><strong>ಕರಾಟೆ ತರಬೇತುದಾರ ಪಂಚಪ್ಪ, ನವೀನ್ ಫರ್ನಾಂಡಿಸ್, ಚಂದ್ರಶೇಖರ್, ರಾಘವೇಂದ್ರ, ಶೇಷಾಚಲ, ಕಿರಣ್ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>