‘ಪಾಲಿಕೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಧಿಕಾರಿಗಳು, ಸಿಬ್ಬಂದಿ ಸ್ಪಂದಿಸುತ್ತಿಲ್ಲ. ಅಧಿಕಾರಿಗಳು, ಎಂಜಿನಿಯರ್, ಕೆಳ ಹಂತದ ನೌಕರರು ಹಣವಿಲ್ಲದೆ ಕೆಲಸ ಮಾಡಿಕೊಡುತ್ತಿಲ್ಲ. ಹಣಕ್ಕಾಗಿ ಪೀಡಿಸುತ್ತಾರೆ. ಮಧ್ಯವರ್ತಿಗಳ ಮೂಲಕ ಹೋದರೆ ಹಣ ಪಡೆದು ಕೆಲಸ ಮಾಡಿಕೊಡಲಾಗುತ್ತದೆ. ಪಾಲಿಕೆ ಭ್ರಷ್ಟಾಚಾರದ ಕೂಪವಾಗಿದೆ’ ಎಂಬ ಬಗ್ಗೆ ವ್ಯಾಪಕ ಪ್ರಮಾಣದಲ್ಲಿ ಲೋಕಾಯುಕ್ತಕ್ಕೆ ದೂರುಗಳು ಬಂದಿದ್ದವು.