<p><strong>ತುರುವೇಕೆರೆ:</strong> ತಾಲ್ಲೂಕಿನ ಹಲವೆಡೆ ಶುಕ್ರವಾರ ತಡರಾತ್ರಿ ಮಿಂಚು, ಬಿರುಗಾಳಿ ಸಹಿತ ಸುರಿದ ಭರಣಿ ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.</p>.<p>ಶುಕ್ರವಾರ ಮಧ್ಯರಾತ್ರಿ ಒಂದು ಗಂಟೆಗೂ ಹೆಚ್ಚು ಹೊತ್ತು ಉತ್ತಮ ಮಳೆ ಸುರಿಯಿತು.</p>.<p>ಅಂರ್ತಜಲದ ಮಟ್ಟ ಕುಸಿದು ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ತೆಂಗು ಮತ್ತು ಅಡಿಕೆ ಬೆಳೆಗಳು ಒಣಗಿ ರೈತರು ಕಂಗಾಲಾಗಿದ್ದರು. ಈ ಮಳೆಯಿಂದ ವಾಣಿಜ್ಯ ಬೆಳೆಗಳು ಮತ್ತು ಭತ್ತಕ್ಕೆ ಅನುಕೂಲಕರವಾಗಿದೆ ಎಂದು ರೈತ ಚಂದ್ರಣ್ಣ ವಿಶ್ವಾಸ ವ್ಯಕ್ತಪಡಿಸಿದ್ದರು.</p>.<p>ತಾಲ್ಲೂಕಿನ ಸಂಪಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಗದೇವನಹಳ್ಳಿ, ಅಂಗರೇಖನಹಳ್ಳಿ, ಬಸವನಹಳ್ಳಿ, ಹಂಪಲಾಪುರ, ತಳವಾರನಹಳ್ಳಿ, ಮಲ್ಲೇನಹಳ್ಳಿ, ಮಾಸ್ಕನಹಳ್ಳಿ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.</p>.<p>ಕಸಬಾ ವ್ಯಾಪ್ತಿಯ ತುರುವೇಕೆರೆ, ತಾವರೇಕೆರೆ, ಪುರ, ಚಂಡೂರು, ಶ್ರೀರಾಂಪುರ, ತಾಳ್ಕೆರೆ ಹಾವಾಳ, ದಂಡಿನಶಿವರ ಹೋಬಳಿಯ ದಂಡಿನಶಿವರ, ಹಡವನಹಳ್ಳಿಯಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಹುಲ್ಲೇಕೆರೆ, ಬಳ್ಳೆಕಟ್ಟೆ ಮತ್ತು ಹಟ್ಟಿಹಳ್ಳಿಯಲ್ಲಿ ಹದ ಮಳೆಯಾಗಿ ತೋಟದ ಸಾಲುಗಳಲ್ಲಿ ನೀರು ಸಂಗ್ರಹವಾಗಿದೆ ಎಂದು ಹುಲ್ಲೇಕೆರೆ ರೈತ ಎಚ್.ಬಿ.ಗಂಗಾಧರ್ ತಿಳಿಸಿದರು.</p>.<p>ಕೆಲವೆಡೆ ಮರದ ಕೊಂಬೆಗಳು ಮುರಿದು ಬಿದ್ದು ವಿದ್ಯುತ್ ತಂತಿಗಳು ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ವ್ಯತ್ಯಯವಾಗಿತ್ತು. ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿಗಳು ಬೇಟಿ ನೀಡಿ ತೆರೆವು ಕಾರ್ಯ ಮಾಡಿದ್ದಾರೆ.</p>.<p>ಕಸಬಾ ವ್ಯಾಪ್ತಿಯ ಪುರ ಗ್ರಾಮದ ಯಶೋದಮ್ಮ ಅವರ ಮನೆಯ ಮಳೆಗೆ ಗೋಡೆ ಕುಸಿದು ಬಿದ್ದು ಮನೆಯ ಸಣ್ಣಪುಟ್ಟ ವಸ್ತುಗಳು ಹಾಳಾಗಿದೆ.</p>.<p>ಕೆಲವೆಡೆ ತೆಂಗು, ಅಡಿಕೆ ಮರಗಳು ಉರುಳಿವೆ.</p>.<p>ತುರುವೇಕೆರೆ ಪಟ್ಟಣ 45 ಮಿ.ಮೀ, ಸಂಪಿಗೆ 57, ಮಾಯಸಂದ್ರ 1.8, ದಂಡಿನಶಿವರದಲ್ಲಿ 15.6 ಮಿ.ಮೀಟರ್ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ತಾಲ್ಲೂಕಿನ ಹಲವೆಡೆ ಶುಕ್ರವಾರ ತಡರಾತ್ರಿ ಮಿಂಚು, ಬಿರುಗಾಳಿ ಸಹಿತ ಸುರಿದ ಭರಣಿ ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.</p>.<p>ಶುಕ್ರವಾರ ಮಧ್ಯರಾತ್ರಿ ಒಂದು ಗಂಟೆಗೂ ಹೆಚ್ಚು ಹೊತ್ತು ಉತ್ತಮ ಮಳೆ ಸುರಿಯಿತು.</p>.<p>ಅಂರ್ತಜಲದ ಮಟ್ಟ ಕುಸಿದು ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ತೆಂಗು ಮತ್ತು ಅಡಿಕೆ ಬೆಳೆಗಳು ಒಣಗಿ ರೈತರು ಕಂಗಾಲಾಗಿದ್ದರು. ಈ ಮಳೆಯಿಂದ ವಾಣಿಜ್ಯ ಬೆಳೆಗಳು ಮತ್ತು ಭತ್ತಕ್ಕೆ ಅನುಕೂಲಕರವಾಗಿದೆ ಎಂದು ರೈತ ಚಂದ್ರಣ್ಣ ವಿಶ್ವಾಸ ವ್ಯಕ್ತಪಡಿಸಿದ್ದರು.</p>.<p>ತಾಲ್ಲೂಕಿನ ಸಂಪಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಗದೇವನಹಳ್ಳಿ, ಅಂಗರೇಖನಹಳ್ಳಿ, ಬಸವನಹಳ್ಳಿ, ಹಂಪಲಾಪುರ, ತಳವಾರನಹಳ್ಳಿ, ಮಲ್ಲೇನಹಳ್ಳಿ, ಮಾಸ್ಕನಹಳ್ಳಿ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.</p>.<p>ಕಸಬಾ ವ್ಯಾಪ್ತಿಯ ತುರುವೇಕೆರೆ, ತಾವರೇಕೆರೆ, ಪುರ, ಚಂಡೂರು, ಶ್ರೀರಾಂಪುರ, ತಾಳ್ಕೆರೆ ಹಾವಾಳ, ದಂಡಿನಶಿವರ ಹೋಬಳಿಯ ದಂಡಿನಶಿವರ, ಹಡವನಹಳ್ಳಿಯಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಹುಲ್ಲೇಕೆರೆ, ಬಳ್ಳೆಕಟ್ಟೆ ಮತ್ತು ಹಟ್ಟಿಹಳ್ಳಿಯಲ್ಲಿ ಹದ ಮಳೆಯಾಗಿ ತೋಟದ ಸಾಲುಗಳಲ್ಲಿ ನೀರು ಸಂಗ್ರಹವಾಗಿದೆ ಎಂದು ಹುಲ್ಲೇಕೆರೆ ರೈತ ಎಚ್.ಬಿ.ಗಂಗಾಧರ್ ತಿಳಿಸಿದರು.</p>.<p>ಕೆಲವೆಡೆ ಮರದ ಕೊಂಬೆಗಳು ಮುರಿದು ಬಿದ್ದು ವಿದ್ಯುತ್ ತಂತಿಗಳು ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ವ್ಯತ್ಯಯವಾಗಿತ್ತು. ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿಗಳು ಬೇಟಿ ನೀಡಿ ತೆರೆವು ಕಾರ್ಯ ಮಾಡಿದ್ದಾರೆ.</p>.<p>ಕಸಬಾ ವ್ಯಾಪ್ತಿಯ ಪುರ ಗ್ರಾಮದ ಯಶೋದಮ್ಮ ಅವರ ಮನೆಯ ಮಳೆಗೆ ಗೋಡೆ ಕುಸಿದು ಬಿದ್ದು ಮನೆಯ ಸಣ್ಣಪುಟ್ಟ ವಸ್ತುಗಳು ಹಾಳಾಗಿದೆ.</p>.<p>ಕೆಲವೆಡೆ ತೆಂಗು, ಅಡಿಕೆ ಮರಗಳು ಉರುಳಿವೆ.</p>.<p>ತುರುವೇಕೆರೆ ಪಟ್ಟಣ 45 ಮಿ.ಮೀ, ಸಂಪಿಗೆ 57, ಮಾಯಸಂದ್ರ 1.8, ದಂಡಿನಶಿವರದಲ್ಲಿ 15.6 ಮಿ.ಮೀಟರ್ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>