ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರು ಎದುರಿಗೆ ಬರುತ್ತಿದ್ದ ದ್ವಿಕ್ರವಾಹನಕ್ಕೆ ಡಿಕ್ಕಿಹೊಡೆದು ಆನಂತರ ಚಾಲಕನ ನಿಯಂತ್ರಣ ತಪ್ಪಿ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಿದ್ದಗಂಗಯ್ಯ ಎಂಬುವರಿಗೆ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ. ಕಾರು ಚಾಲಕನ ಮೇಲೆ ಕೇಸು ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.