ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೊಮೆಟೊ ಬೆಳೆದು ನಷ್ಟ: ಪಾವಗಡದ ದಂಪತಿ ನೇಣಿಗೆ ಶರಣು

Published 6 ಅಕ್ಟೋಬರ್ 2023, 10:06 IST
Last Updated 6 ಅಕ್ಟೋಬರ್ 2023, 10:06 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನ ಪಿ.ರೊಪ್ಪ ಗ್ರಾಮದ ಮನೆಯೊಂದರಲ್ಲಿ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆಯಾಗಿವೆ.

ಇದೇ ಗ್ರಾಮದ ಮನು(27), ಪವಿತ್ರ(24) ಮೃತರು. ಮೃತರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಲ್ಲೂಕಿನ ಪಾಲಕುಂಟೆಯ ಪವಿತ್ರ, ಮನು ಅವರ ವಿವಾಹ ಮೂರು ವರ್ಷಗಳ ಹಿಂದೆ ನಡೆದಿತ್ತು. ಮೃತರಿಗೆ ಸುಮಾರು ಎರಡು ವರ್ಷದ ಹೆಣ್ಣು ಮಗು ಇದೆ. ಮಗುವನ್ನು ಪವಿತ್ರ ಅವರ ತವರು ಮನೆಯಲ್ಲಿ ಬಿಡಲಾಗಿತ್ತು.

ಪವಿತ್ರಾ ವೇಲಿನಲ್ಲಿ ಇಬ್ಬರೂ ನೇಣು ಹಾಕಿಕೊಂಡ ರೀತಿಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ. ಶುಕ್ರವಾರ ಬೆಳಿಗ್ಗೆ ಮನೆಯ ಬಾಗಿಲು ತೆರೆಯದಿದ್ದಾಗ ನೆರೆಹೊರೆಯವರು ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗ ವಿಚಾರ ತಿಳಿದಿದೆ. ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

‘ಟೊಮೆಟೊ ಸೇರಿದಂತೆ ವಿವಿಧ ಬೆಳೆಗಳಲ್ಲಿ ನಷ್ಟವಾಗಿತ್ತು. ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬಸ್ಥರು ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT