<p><strong>ಕಾರ್ಕಳ</strong>: ಈಚೆಗೆ ಶರಣಾದ ನಾಲ್ವರು ನಕ್ಸಲರನ್ನು ಮಂಗಳವಾರ ಕಾರ್ಕಳದ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.<br><br>ಬೆಂಗಳೂರು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾರಪ್ಪ (ಜಯಣ್ಣ), ಲತಾ (ಮುಂಡಗಾರು ಲತಾ), ವನಜಾಕ್ಷಿ (ಜ್ಯೋತಿ) ಹಾಗೂ ಸುಂದರಿ (ಗೀತಾ, ಜೆನ್ನಿ) ಅವರನ್ನು ಬಿಗಿ ಭದ್ರತೆಯಲ್ಲಿ ಸೋಮವಾರ ಕರೆದುತಂದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.</p>.<p>ಹೆಬ್ರಿ ತಾಲ್ಲೂಕಿನ ಸೀತಾನದಿ ಭಾಸ್ಕರ ಶೆಟ್ಟಿ ಹಾಗೂ ಕಬ್ಬಿನಾಲೆ ಸದಾಶಿವ ಗೌಡ ಅವರ ಕೊಲೆ ಪ್ರಕರಣಗಳು ಇವರ ಮೇಲಿವೆ ಎನ್ನಲಾಗಿದೆ. <br><br>ಕಾರ್ಕಳ ಗ್ರಾಮಾಂತರ, ಹೆಬ್ರಿ, ಅಜೆಕಾರು ಠಾಣಾ ವ್ಯಾಪ್ತಿಗಳಲ್ಲಿ ಇವರ ವಿರುದ್ಧ ದಾಖಲಾದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ವಿಚಾರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. <br><br>ಶರಣಾಗತ ನಕ್ಸಲರನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸುವ ಜವಾಬ್ದಾರಿಯನ್ನು ಎಎಸ್ಪಿ ಹರ್ಷ ಪ್ರಿಯಂವದ ವಹಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ಈಚೆಗೆ ಶರಣಾದ ನಾಲ್ವರು ನಕ್ಸಲರನ್ನು ಮಂಗಳವಾರ ಕಾರ್ಕಳದ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.<br><br>ಬೆಂಗಳೂರು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾರಪ್ಪ (ಜಯಣ್ಣ), ಲತಾ (ಮುಂಡಗಾರು ಲತಾ), ವನಜಾಕ್ಷಿ (ಜ್ಯೋತಿ) ಹಾಗೂ ಸುಂದರಿ (ಗೀತಾ, ಜೆನ್ನಿ) ಅವರನ್ನು ಬಿಗಿ ಭದ್ರತೆಯಲ್ಲಿ ಸೋಮವಾರ ಕರೆದುತಂದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.</p>.<p>ಹೆಬ್ರಿ ತಾಲ್ಲೂಕಿನ ಸೀತಾನದಿ ಭಾಸ್ಕರ ಶೆಟ್ಟಿ ಹಾಗೂ ಕಬ್ಬಿನಾಲೆ ಸದಾಶಿವ ಗೌಡ ಅವರ ಕೊಲೆ ಪ್ರಕರಣಗಳು ಇವರ ಮೇಲಿವೆ ಎನ್ನಲಾಗಿದೆ. <br><br>ಕಾರ್ಕಳ ಗ್ರಾಮಾಂತರ, ಹೆಬ್ರಿ, ಅಜೆಕಾರು ಠಾಣಾ ವ್ಯಾಪ್ತಿಗಳಲ್ಲಿ ಇವರ ವಿರುದ್ಧ ದಾಖಲಾದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ವಿಚಾರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. <br><br>ಶರಣಾಗತ ನಕ್ಸಲರನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸುವ ಜವಾಬ್ದಾರಿಯನ್ನು ಎಎಸ್ಪಿ ಹರ್ಷ ಪ್ರಿಯಂವದ ವಹಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>