<p><strong>ಕಾರವಾರ/ಹೊಸಪೇಟೆ:</strong> ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಿಸಿದ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಶಾಸಕ<br>ಸತೀಶ ಸೈಲ್ ಅವರ ಕಾರವಾರದ ಮನೆಯಲ್ಲಿ ಮತ್ತು ಉದ್ಯಮಿಗಳಾದ ಖಾರದಪುಡಿ ಮಹೇಶ್ ಮತ್ತು ಸ್ವಸ್ತಿಕ್ ನಾಗರಾಜ್ ಅವರ ಹೊಸಪೇಟೆಯ ಮನೆಗಳು, ಕಚೇರಿಗಳಲ್ಲಿ ಬುಧವಾರ ಶೋಧ ನಡೆಸಿದರು. ಸಂಜೆಯವರೆಗೂ ಪರಿಶೀಲನೆ ನಡೆಯಿತು. </p><p>‘ಇ.ಡಿ ಅಧಿಕಾರಿ ಕೇಶವ ರಾವ್ ನೇತೃತ್ವದಲ್ಲಿ 24 ಮಂದಿಯ ತಂಡ ಕಾರವಾರದಲ್ಲಿ ಪರಿಶೀಲನೆ ನಡೆಸಿತು. ಮನೆಯಲ್ಲಿ ಶಾಸಕ ಸೈಲ್ ಅವರ ಅತ್ತೆ (ಪತ್ನಿಯ ತಾಯಿ) ಮತ್ತು ಮನೆ ಕೆಲಸದವರು ಇದ್ದರು. ವಿಷಯ<br>ತಿಳಿದರೂ ಸತೀಶ ಸೈಲ್ ಮತ್ತು ಅವರ ಬೆಂಬಲಿಗರು ಮನೆಯ ಬಳಿ ಸುಳಿಯಲಿಲ್ಲ’ ಎಂದು ಮೂಲಗಳು ತಿಳಿಸಿವೆ.</p><p>ಉದ್ಯಮಿಗಳಾದ ಖಾರದಪುಡಿ ಮಹೇಶ್ ಮತ್ತು ಸ್ವಸ್ತಿಕ್ ನಾಗರಾಜ್ ಅವರ ಮನೆಗಳು, ಕಚೇರಿಗಳು ಸೇರಿ ಒಟ್ಟು ಆರು ಕಡೆ ಪರಿಶೀಲನೆ ನಡೆಯಿತು.</p><p>‘ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ಸಾಗಣೆ ಪ್ರಕರಣದಲ್ಲಿ ಈ ಇಬ್ಬರೂ ಬಂಧಿತರಾಗಿದ್ದರು. ದೊಡ್ಡ ಮೊತ್ತದ ಹಣಕಾಸಿನ ವ್ಯವಹಾರ ನಡೆಸಿದ್ದನ್ನು ಗಮನಿಸಿ ಈಗ ದಾಳಿ ನಡೆದಿರುವ ಸಾಧ್ಯತೆ ಇದೆ’ ಎಂದು<br>ಲೆಕ್ಕಪರಿಶೋಧಕರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ/ಹೊಸಪೇಟೆ:</strong> ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಿಸಿದ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಶಾಸಕ<br>ಸತೀಶ ಸೈಲ್ ಅವರ ಕಾರವಾರದ ಮನೆಯಲ್ಲಿ ಮತ್ತು ಉದ್ಯಮಿಗಳಾದ ಖಾರದಪುಡಿ ಮಹೇಶ್ ಮತ್ತು ಸ್ವಸ್ತಿಕ್ ನಾಗರಾಜ್ ಅವರ ಹೊಸಪೇಟೆಯ ಮನೆಗಳು, ಕಚೇರಿಗಳಲ್ಲಿ ಬುಧವಾರ ಶೋಧ ನಡೆಸಿದರು. ಸಂಜೆಯವರೆಗೂ ಪರಿಶೀಲನೆ ನಡೆಯಿತು. </p><p>‘ಇ.ಡಿ ಅಧಿಕಾರಿ ಕೇಶವ ರಾವ್ ನೇತೃತ್ವದಲ್ಲಿ 24 ಮಂದಿಯ ತಂಡ ಕಾರವಾರದಲ್ಲಿ ಪರಿಶೀಲನೆ ನಡೆಸಿತು. ಮನೆಯಲ್ಲಿ ಶಾಸಕ ಸೈಲ್ ಅವರ ಅತ್ತೆ (ಪತ್ನಿಯ ತಾಯಿ) ಮತ್ತು ಮನೆ ಕೆಲಸದವರು ಇದ್ದರು. ವಿಷಯ<br>ತಿಳಿದರೂ ಸತೀಶ ಸೈಲ್ ಮತ್ತು ಅವರ ಬೆಂಬಲಿಗರು ಮನೆಯ ಬಳಿ ಸುಳಿಯಲಿಲ್ಲ’ ಎಂದು ಮೂಲಗಳು ತಿಳಿಸಿವೆ.</p><p>ಉದ್ಯಮಿಗಳಾದ ಖಾರದಪುಡಿ ಮಹೇಶ್ ಮತ್ತು ಸ್ವಸ್ತಿಕ್ ನಾಗರಾಜ್ ಅವರ ಮನೆಗಳು, ಕಚೇರಿಗಳು ಸೇರಿ ಒಟ್ಟು ಆರು ಕಡೆ ಪರಿಶೀಲನೆ ನಡೆಯಿತು.</p><p>‘ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ಸಾಗಣೆ ಪ್ರಕರಣದಲ್ಲಿ ಈ ಇಬ್ಬರೂ ಬಂಧಿತರಾಗಿದ್ದರು. ದೊಡ್ಡ ಮೊತ್ತದ ಹಣಕಾಸಿನ ವ್ಯವಹಾರ ನಡೆಸಿದ್ದನ್ನು ಗಮನಿಸಿ ಈಗ ದಾಳಿ ನಡೆದಿರುವ ಸಾಧ್ಯತೆ ಇದೆ’ ಎಂದು<br>ಲೆಕ್ಕಪರಿಶೋಧಕರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>