<p><strong>ಕಾರವಾರ:</strong> ಅಕ್ರಮ, ಕರ್ತವ್ಯಲೋಪ ಎಸಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಬುಧವಾರ ಜಿಲ್ಲೆಯ 8 ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದರು.</p>.<p>ಕಾರವಾರ, ಮುಂಡಗೋಡ ಸೇರಿದಂತೆ ವಿವಿಧ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಸೂಚನೆ ಆಧರಿಸಿ ಡಿಎಸ್ಪಿ ಧನ್ಯಾ ನಾಯಕ ನೇತೃತ್ವದಲ್ಲಿ ಕಾರವಾರ, ಉಡುಪಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಅಧಿಕಾರಿಗಳನ್ನು ಒಳಗೊಂಡ ತಂಡವು ಪ್ರತ್ಯೇಕವಾಗಿ ಪರಿಶೀಲನೆ ಕೈಗೊಂಡವು.</p>.<p>ಕಾರವಾರದಲ್ಲಿ ಜಿಲ್ಲಾ ನೋಂದಣಾಧಿಕಾರಿ ಫಣೀಂದ್ರ ಅವರನ್ನು ಉಡುಪಿ ಲೋಕಾಯುಕ್ತ ಡಿಎಸ್ಪಿ ಮಂಜುನಾಥ ಅವರು ವಿಚಾರಣೆ ನಡೆಸಿದರು. ಬಳಿಕ ಉಪ ನೋಂದಣಾಧಿಕಾರಿ, ಕಚೇರಿಯ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಯಿತು.</p>.<p>ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ಹಲವು ದಾಖಲೆಗಳನ್ನು ವಶಕ್ಕೆ ಪಡೆದರು. ಕಚೇರಿಗೆ ಬಂದಿದ್ದ ಸಾರ್ವಜನಿಕರಿಂದಲೂ ಅಭಿಪ್ರಾಯ ಸಂಗ್ರಹಿಸಿದ ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಶುಲ್ಕ ಮೀರಿ ಹಣ ಪಡೆಯಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.</p>.<p>‘ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಕ್ಕೆ ಲಂಚ ಪಡೆಯುತ್ತಿರುವ ದೂರು ಹೆಚ್ಚಿದ್ದವು. ಜೊತೆಗೆ ಜಮೀನು, ವಿವಾಹ ನೋಂದಣಿಯಲ್ಲಿ ಅಕ್ರಮ ಎಸಗುತ್ತಿರುವ ದೂರುಗಳು ಬಂದಿದ್ದವು. ಲೋಕಾಯುಕ್ತ ಸಂಸ್ಥೆಯು ಈಗಾಗಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಹಿಂದೆ ಅಂಕೋಲಾ ಮತ್ತು ಹೊನ್ನಾವರದಲ್ಲಿ ತಪಾಸಣೆ ನಡೆಸಲಾಗಿತ್ತು. ಮುಂದುವರಿದ ಭಾಗವಾಗಿ 8 ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಪರಿಶೀಲಿಸಲಾಯಿತು’ ಎಂದು ಲೋಕಾಯುಕ್ತ ಡಿಎಸ್ಪಿ ಧನ್ಯಾ ನಾಯಕ ತಿಳಿಸಿದರು.</p>.<div><blockquote>ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿನ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದು ಅವುಗಳನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ಲೋಕಾಯುಕ್ತ ಕೇಂದ್ರ ಸಂಸ್ಥೆಗೆ ಕಳುಹಿಸಲಾಗುತ್ತದೆ.</blockquote><span class="attribution">ಧನ್ಯಾ ನಾಯಕ, ಲೋಕಾಯುಕ್ತ ಡಿಎಸ್ಪಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಅಕ್ರಮ, ಕರ್ತವ್ಯಲೋಪ ಎಸಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಬುಧವಾರ ಜಿಲ್ಲೆಯ 8 ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದರು.</p>.<p>ಕಾರವಾರ, ಮುಂಡಗೋಡ ಸೇರಿದಂತೆ ವಿವಿಧ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಸೂಚನೆ ಆಧರಿಸಿ ಡಿಎಸ್ಪಿ ಧನ್ಯಾ ನಾಯಕ ನೇತೃತ್ವದಲ್ಲಿ ಕಾರವಾರ, ಉಡುಪಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಅಧಿಕಾರಿಗಳನ್ನು ಒಳಗೊಂಡ ತಂಡವು ಪ್ರತ್ಯೇಕವಾಗಿ ಪರಿಶೀಲನೆ ಕೈಗೊಂಡವು.</p>.<p>ಕಾರವಾರದಲ್ಲಿ ಜಿಲ್ಲಾ ನೋಂದಣಾಧಿಕಾರಿ ಫಣೀಂದ್ರ ಅವರನ್ನು ಉಡುಪಿ ಲೋಕಾಯುಕ್ತ ಡಿಎಸ್ಪಿ ಮಂಜುನಾಥ ಅವರು ವಿಚಾರಣೆ ನಡೆಸಿದರು. ಬಳಿಕ ಉಪ ನೋಂದಣಾಧಿಕಾರಿ, ಕಚೇರಿಯ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಯಿತು.</p>.<p>ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ಹಲವು ದಾಖಲೆಗಳನ್ನು ವಶಕ್ಕೆ ಪಡೆದರು. ಕಚೇರಿಗೆ ಬಂದಿದ್ದ ಸಾರ್ವಜನಿಕರಿಂದಲೂ ಅಭಿಪ್ರಾಯ ಸಂಗ್ರಹಿಸಿದ ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಶುಲ್ಕ ಮೀರಿ ಹಣ ಪಡೆಯಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.</p>.<p>‘ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಕ್ಕೆ ಲಂಚ ಪಡೆಯುತ್ತಿರುವ ದೂರು ಹೆಚ್ಚಿದ್ದವು. ಜೊತೆಗೆ ಜಮೀನು, ವಿವಾಹ ನೋಂದಣಿಯಲ್ಲಿ ಅಕ್ರಮ ಎಸಗುತ್ತಿರುವ ದೂರುಗಳು ಬಂದಿದ್ದವು. ಲೋಕಾಯುಕ್ತ ಸಂಸ್ಥೆಯು ಈಗಾಗಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಹಿಂದೆ ಅಂಕೋಲಾ ಮತ್ತು ಹೊನ್ನಾವರದಲ್ಲಿ ತಪಾಸಣೆ ನಡೆಸಲಾಗಿತ್ತು. ಮುಂದುವರಿದ ಭಾಗವಾಗಿ 8 ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಪರಿಶೀಲಿಸಲಾಯಿತು’ ಎಂದು ಲೋಕಾಯುಕ್ತ ಡಿಎಸ್ಪಿ ಧನ್ಯಾ ನಾಯಕ ತಿಳಿಸಿದರು.</p>.<div><blockquote>ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿನ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದು ಅವುಗಳನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ಲೋಕಾಯುಕ್ತ ಕೇಂದ್ರ ಸಂಸ್ಥೆಗೆ ಕಳುಹಿಸಲಾಗುತ್ತದೆ.</blockquote><span class="attribution">ಧನ್ಯಾ ನಾಯಕ, ಲೋಕಾಯುಕ್ತ ಡಿಎಸ್ಪಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>