<p><strong>ದಾಂಡೇಲಿ (ಉತ್ತರ ಕನ್ನಡ ಜಿಲ್ಲೆ):</strong> ‘ಸಿದ್ದರಾಮಯ್ಯ ಶಕ್ತಿ ಯೋಜನೆ ಜಾರಿಗೆ ತಂದಿದ್ದರಿಂದ ಮಹಿಳೆಯರೇ ಬಸ್ನಲ್ಲಿ ಹೆಚ್ಚು ಇರುತ್ತಾರೆ. ಗಂಡು ಮಕ್ಕಳಿಗೆ ಬಸ್ನಲ್ಲಿ ಜಾಗ ಸಿಗದಂತಾಗಿದೆ’ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಆರ್.ವಿ.ದೇಶಪಾಂಡೆ ಶನಿವಾರ ಹೇಳಿದರು. </p>.<p>ಇಲ್ಲಿ ದಾಂಡೇಲಿ–ಅಳ್ನಾವರ ಡೆಮು ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು, ‘ಶಕ್ತಿ ಯೋಜನೆ’ ವಿರುದ್ಧ ಬಿಜೆಪಿ ನಾಯಕರ ಎದುರೇ ಅಪಸ್ವರ ಎತ್ತಿದ್ದಾರೆ.</p>.<p>ದೇಶಪಾಂಡೆ ಅವರ ಮಾತನ್ನು ಭಾಷಣದ ಮಧ್ಯೆ ಪ್ರಸ್ತಾಪಿಸಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರೂ, ‘ಶಕ್ತಿ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ’ ಎಂದರು.</p>.<p>‘ಇದರಿಂದ ರಾಜ್ಯ ಎಂತಹ ಅನಾಹುತಕ್ಕೆ ಸಿಲುಕಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಸೋಮಣ್ಣ ಅವರು ಪ್ರತಿಕ್ರಿಯಿಸಿದರು. </p>.<p>‘ಅಳ್ನಾವರದಿಂದ ಬೆಳಗಾವಿ, ಹುಬ್ಬಳ್ಳಿಗೆ ರೈಲು ಸಂಪರ್ಕ ಕಲ್ಪಿಸಿದರೆ ದಾಂಡೇಲಿ ಭಾಗದ ಜನರಿಗೆ ಅನುಕೂಲ ಆಗಲಿದೆ. ರೈಲು ಸಂಪರ್ಕ ಹೆಚ್ಚಿದರೆ ಹೆಚ್ಚು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ’ ಎಂದರು.</p>.<p>‘ಸಚಿವ ವಿ.ಸೋಮಣ್ಣ ಪ್ರಯತ್ನದ ಫಲವಾಗಿ ದಾಂಡೇಲಿ–ಅಳ್ನಾವರ ರೈಲು ಪುನರಾರಂಭವಾಗಿದೆ. ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಒಳ್ಳೆಯ ಕೆಲಸ ಮಾಡಿದಾಗ ಪ್ರತಿಪಕ್ಷದವರಿದ್ದರೂ ಹೊಗಳುತ್ತೇನೆ. ದ್ವೇಷ ಮಾಡುವ ಗುಣ ಬೆಳೆಸಿಕೊಂಡಿಲ್ಲ. ಈ ಕಾರಣದಿಂದಲೇ 9 ಬಾರಿ ಶಾಸಕನಾಗಿದ್ದೇನೆ’ ಎಂದರು.</p>.<p><strong>‘ಹುಬ್ಬಳ್ಳಿ–ಅಂಕೋಲಾ ರೈಲು ಯೋಜನೆಗೆ ಶೀಘ್ರ ಅನುಮತಿ'</strong></p><p>‘ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣಕ್ಕೆ ₹17 ಸಾವಿರ ಕೋಟಿ ವೆಚ್ಚದಲ್ಲಿ ಕೈಗೊಳ್ಳುವ ಕಾಮಗಾರಿಗೆ ಶೀಘ್ರವೇ ಅನುಮತಿ ಸಿಗಲಿದೆ. ಅಳ್ನಾವರ-ದಾಂಡೇಲಿ ರೈಲನ್ನು ಹುಬ್ಬಳ್ಳಿವರೆಗೆ ವಿಸ್ತರಿಸಲಾಗುವುದು’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.</p><p>ದಾಂಡೇಲಿ ರೈಲು ನಿಲ್ದಾಣದಲ್ಲಿ ಅಳ್ನಾವರ–ದಾಂಡೇಲಿ (26 ಕಿ.ಮೀ) ಪ್ರಯಾಣಿಕರ ರೈಲು ಮರು ಸಂಚಾರಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ (ಉತ್ತರ ಕನ್ನಡ ಜಿಲ್ಲೆ):</strong> ‘ಸಿದ್ದರಾಮಯ್ಯ ಶಕ್ತಿ ಯೋಜನೆ ಜಾರಿಗೆ ತಂದಿದ್ದರಿಂದ ಮಹಿಳೆಯರೇ ಬಸ್ನಲ್ಲಿ ಹೆಚ್ಚು ಇರುತ್ತಾರೆ. ಗಂಡು ಮಕ್ಕಳಿಗೆ ಬಸ್ನಲ್ಲಿ ಜಾಗ ಸಿಗದಂತಾಗಿದೆ’ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಆರ್.ವಿ.ದೇಶಪಾಂಡೆ ಶನಿವಾರ ಹೇಳಿದರು. </p>.<p>ಇಲ್ಲಿ ದಾಂಡೇಲಿ–ಅಳ್ನಾವರ ಡೆಮು ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು, ‘ಶಕ್ತಿ ಯೋಜನೆ’ ವಿರುದ್ಧ ಬಿಜೆಪಿ ನಾಯಕರ ಎದುರೇ ಅಪಸ್ವರ ಎತ್ತಿದ್ದಾರೆ.</p>.<p>ದೇಶಪಾಂಡೆ ಅವರ ಮಾತನ್ನು ಭಾಷಣದ ಮಧ್ಯೆ ಪ್ರಸ್ತಾಪಿಸಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರೂ, ‘ಶಕ್ತಿ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ’ ಎಂದರು.</p>.<p>‘ಇದರಿಂದ ರಾಜ್ಯ ಎಂತಹ ಅನಾಹುತಕ್ಕೆ ಸಿಲುಕಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಸೋಮಣ್ಣ ಅವರು ಪ್ರತಿಕ್ರಿಯಿಸಿದರು. </p>.<p>‘ಅಳ್ನಾವರದಿಂದ ಬೆಳಗಾವಿ, ಹುಬ್ಬಳ್ಳಿಗೆ ರೈಲು ಸಂಪರ್ಕ ಕಲ್ಪಿಸಿದರೆ ದಾಂಡೇಲಿ ಭಾಗದ ಜನರಿಗೆ ಅನುಕೂಲ ಆಗಲಿದೆ. ರೈಲು ಸಂಪರ್ಕ ಹೆಚ್ಚಿದರೆ ಹೆಚ್ಚು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ’ ಎಂದರು.</p>.<p>‘ಸಚಿವ ವಿ.ಸೋಮಣ್ಣ ಪ್ರಯತ್ನದ ಫಲವಾಗಿ ದಾಂಡೇಲಿ–ಅಳ್ನಾವರ ರೈಲು ಪುನರಾರಂಭವಾಗಿದೆ. ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಒಳ್ಳೆಯ ಕೆಲಸ ಮಾಡಿದಾಗ ಪ್ರತಿಪಕ್ಷದವರಿದ್ದರೂ ಹೊಗಳುತ್ತೇನೆ. ದ್ವೇಷ ಮಾಡುವ ಗುಣ ಬೆಳೆಸಿಕೊಂಡಿಲ್ಲ. ಈ ಕಾರಣದಿಂದಲೇ 9 ಬಾರಿ ಶಾಸಕನಾಗಿದ್ದೇನೆ’ ಎಂದರು.</p>.<p><strong>‘ಹುಬ್ಬಳ್ಳಿ–ಅಂಕೋಲಾ ರೈಲು ಯೋಜನೆಗೆ ಶೀಘ್ರ ಅನುಮತಿ'</strong></p><p>‘ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣಕ್ಕೆ ₹17 ಸಾವಿರ ಕೋಟಿ ವೆಚ್ಚದಲ್ಲಿ ಕೈಗೊಳ್ಳುವ ಕಾಮಗಾರಿಗೆ ಶೀಘ್ರವೇ ಅನುಮತಿ ಸಿಗಲಿದೆ. ಅಳ್ನಾವರ-ದಾಂಡೇಲಿ ರೈಲನ್ನು ಹುಬ್ಬಳ್ಳಿವರೆಗೆ ವಿಸ್ತರಿಸಲಾಗುವುದು’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.</p><p>ದಾಂಡೇಲಿ ರೈಲು ನಿಲ್ದಾಣದಲ್ಲಿ ಅಳ್ನಾವರ–ದಾಂಡೇಲಿ (26 ಕಿ.ಮೀ) ಪ್ರಯಾಣಿಕರ ರೈಲು ಮರು ಸಂಚಾರಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>