<p><strong>ಕೊಟ್ಟೂರು (ವಿಜಯನಗರ ಜಿಲ್ಲೆ):</strong> ಕೊಟ್ಟೂರಿನಲ್ಲಿ ಕುತೂಹಲ ಮೂಡಿಸಿದ್ದ ತ್ರಿವಳಿ ಕೊಲೆ ಪ್ರಕರಣ ಕೊನೆಗೂ ಶನಿವಾರ ಮಧ್ಯಾಹ್ನದ ವೇಳೆಗೆ ಬಯಲಾಗಿದ್ದು, ಆರೋಪಿ ತನ್ನ ಮನೆಯಲ್ಲೇ ತೋಡಿದ ಒಂದೇ ಗುಂಡಿಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.</p><p>ಮನೆಯಲ್ಲಿ ನಾಲ್ಕಡಿ ಆಳದ ಗುಂಡಿ ತೋಡಿದ ಆರೋಪಿ ಅಕ್ಷಯ್ ಕುಮಾರ್, ಮೊದಲಿಗೆ ತಾಯಿಯ ಮೃತದೇಹ, ಅದರ ಮೇಲೆ ತಂಗಿಯ ಮೃತದೇಹ ಹಾಗೂ ಕೊನೆಯಲ್ಲಿ ತಂದೆಯ ಮೃತದೇಹವನ್ನು ಹಾಕಿ ಟೈಲ್ಸ್ನಿಂದ ಮುಚ್ಚಿರುವುದು ತನಿಖೆಯ ವೇಳೆ ಗೊತ್ತಾಗಿದೆ.</p><p>ಆರೋಪಿತನನ್ನು ಶನಿವಾರ ಬೆಂಗಳೂರಿನಿಂದ ಕರೆದುಕೊಂಡು ಬಂದ ನಂತರ ಉಪವಿಭಾಗಾಧಿಕಾರಿ ಹಾಗೂ ಎಸ್ಪಿ ಎಸ್.ಜಾಹ್ನವಿ ಅವರ ಸಮಕ್ಷಮದಲ್ಲಿ ಮಹಜರು ಮಾಡಿದ ನಂತರ ಮನೆಯೊಳಗೆ ಹೂತಿಟ್ಟ ಮೂರು ಶವಗಳು ದೊರೆತಿದ್ದು, ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸುವ ಕಾರ್ಯ ನಡೆಯಿತು.</p><p>ಘಟನಾ ಸ್ಥಳ ಹಾಗೂ ಆಸ್ಪತ್ರೆ ಆವರಣದಲ್ಲಿ ಸೇರಿರುವ ಅಪಾರ ಸಂಖ್ಯೆಯ ಜನಸ್ತೋಮ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು (ವಿಜಯನಗರ ಜಿಲ್ಲೆ):</strong> ಕೊಟ್ಟೂರಿನಲ್ಲಿ ಕುತೂಹಲ ಮೂಡಿಸಿದ್ದ ತ್ರಿವಳಿ ಕೊಲೆ ಪ್ರಕರಣ ಕೊನೆಗೂ ಶನಿವಾರ ಮಧ್ಯಾಹ್ನದ ವೇಳೆಗೆ ಬಯಲಾಗಿದ್ದು, ಆರೋಪಿ ತನ್ನ ಮನೆಯಲ್ಲೇ ತೋಡಿದ ಒಂದೇ ಗುಂಡಿಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.</p><p>ಮನೆಯಲ್ಲಿ ನಾಲ್ಕಡಿ ಆಳದ ಗುಂಡಿ ತೋಡಿದ ಆರೋಪಿ ಅಕ್ಷಯ್ ಕುಮಾರ್, ಮೊದಲಿಗೆ ತಾಯಿಯ ಮೃತದೇಹ, ಅದರ ಮೇಲೆ ತಂಗಿಯ ಮೃತದೇಹ ಹಾಗೂ ಕೊನೆಯಲ್ಲಿ ತಂದೆಯ ಮೃತದೇಹವನ್ನು ಹಾಕಿ ಟೈಲ್ಸ್ನಿಂದ ಮುಚ್ಚಿರುವುದು ತನಿಖೆಯ ವೇಳೆ ಗೊತ್ತಾಗಿದೆ.</p><p>ಆರೋಪಿತನನ್ನು ಶನಿವಾರ ಬೆಂಗಳೂರಿನಿಂದ ಕರೆದುಕೊಂಡು ಬಂದ ನಂತರ ಉಪವಿಭಾಗಾಧಿಕಾರಿ ಹಾಗೂ ಎಸ್ಪಿ ಎಸ್.ಜಾಹ್ನವಿ ಅವರ ಸಮಕ್ಷಮದಲ್ಲಿ ಮಹಜರು ಮಾಡಿದ ನಂತರ ಮನೆಯೊಳಗೆ ಹೂತಿಟ್ಟ ಮೂರು ಶವಗಳು ದೊರೆತಿದ್ದು, ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸುವ ಕಾರ್ಯ ನಡೆಯಿತು.</p><p>ಘಟನಾ ಸ್ಥಳ ಹಾಗೂ ಆಸ್ಪತ್ರೆ ಆವರಣದಲ್ಲಿ ಸೇರಿರುವ ಅಪಾರ ಸಂಖ್ಯೆಯ ಜನಸ್ತೋಮ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>