<p><strong>ಹೊಸಪೇಟೆ</strong>: 2023–24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ–2ಕ್ಕೆ ನೋದಾಯಿಸಲು ಗುರುವಾರವೇ (ಮೇ 16) ಕೊನೆಯ ದಿನ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಎಂ.ಚೆನ್ನಬಸಪ್ಪ ತಿಳಿಸಿದ್ದಾರೆ.</p>.<p>ಈ ಸಂಬಂಧ ಬಿಇಒ ಅವರು ಮಂಗಳವಾರ ಇಲ್ಲಿ ತಾಲ್ಲೂಕಿನ ಎಲ್ಲಾ 81 ಪ್ರೌಢಶಾಲೆಗೆ ಮುಖ್ಯ ಗುರುಗಳ ಸಭೆ ನಡೆಸಿದ್ದು, ಈ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿ ವಿಶೇಷ ಬೋಧನಾ ತರಗತಿಗಳನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಲು ಸೂಚಿಸಿದರು.</p>.<p>ಜೂನ್ 5ರವರೆಗೆ ಈ ವಿಶೇಷ ಬೋಧನಾ ತರಗತಿಗಳು ನಡೆಯಲಿವೆ. ಮಧ್ಯಾಹ್ನದ ಬಿಸಿಯೂಟ ನೀಡಬೇಕು ಎಂದು ತಿಳಿಸಿದರು.</p>.<p>ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿಗಳ ಹಾಜರಾತಿಯು ಮಂಡಲಿಯ ನಿಯಮಾವಳಿಗಳನ್ವಯ ಶೇ 75 ಕ್ಕಿಂತಲೂ ಕಡಿಮೆ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಪರೀಕ್ಷೆ-2 ರಲ್ಲಿ ಖಾಸಗಿ ವಿದ್ಯಾರ್ಥಿಗಳಾಗಿ ನೋಂದಾಯಿಸಲು ಮಂಡಳಿಯು ಅವಕಾಶ ಕಲ್ಪಿಸಿದೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: 2023–24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ–2ಕ್ಕೆ ನೋದಾಯಿಸಲು ಗುರುವಾರವೇ (ಮೇ 16) ಕೊನೆಯ ದಿನ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಎಂ.ಚೆನ್ನಬಸಪ್ಪ ತಿಳಿಸಿದ್ದಾರೆ.</p>.<p>ಈ ಸಂಬಂಧ ಬಿಇಒ ಅವರು ಮಂಗಳವಾರ ಇಲ್ಲಿ ತಾಲ್ಲೂಕಿನ ಎಲ್ಲಾ 81 ಪ್ರೌಢಶಾಲೆಗೆ ಮುಖ್ಯ ಗುರುಗಳ ಸಭೆ ನಡೆಸಿದ್ದು, ಈ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿ ವಿಶೇಷ ಬೋಧನಾ ತರಗತಿಗಳನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಲು ಸೂಚಿಸಿದರು.</p>.<p>ಜೂನ್ 5ರವರೆಗೆ ಈ ವಿಶೇಷ ಬೋಧನಾ ತರಗತಿಗಳು ನಡೆಯಲಿವೆ. ಮಧ್ಯಾಹ್ನದ ಬಿಸಿಯೂಟ ನೀಡಬೇಕು ಎಂದು ತಿಳಿಸಿದರು.</p>.<p>ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿಗಳ ಹಾಜರಾತಿಯು ಮಂಡಲಿಯ ನಿಯಮಾವಳಿಗಳನ್ವಯ ಶೇ 75 ಕ್ಕಿಂತಲೂ ಕಡಿಮೆ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಪರೀಕ್ಷೆ-2 ರಲ್ಲಿ ಖಾಸಗಿ ವಿದ್ಯಾರ್ಥಿಗಳಾಗಿ ನೋಂದಾಯಿಸಲು ಮಂಡಳಿಯು ಅವಕಾಶ ಕಲ್ಪಿಸಿದೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>